Advertisement
MIRROR FOCUS

ಬಟ್ಟೆ ಗಲೀಜಾಗಿದೆ ಎಂದು ಮೆಟ್ರೋದ ಒಳಗೆ ಬಿಡದ ಸಿಬ್ಬಂದಿ | ರೈತನನ್ನು ಅವಮಾನಿಸಿದ್ದಕ್ಕೆ ಸಹಪ್ರಯಾಣಿಕರ ಆಕ್ರೋಶ | ಮೆಟ್ರೋ ಸಿಬ್ಬಂದಿ ವಜಾ

Share

ರೈತ(Farmer) ಬೆಳೆದ ಅನ್ನವನ್ನು ತಿಂದು ಕೊಬ್ಬಿರುವ ಕೆಲ ಅಧಿಕಾರಿಗಳು(Officer) ಅವರ ದುರಹಂಕಾರ, ದರ್ಪವನ್ನು ರೈತರ ಮೇಲೆಯೇ ತೋರುತ್ತಿರುವುದು ಅಸಹನೀಯ. ರೈತ ಮಣ್ಣಿನೊಂದಿಗೆ ಬದುಕುವವನು. ಅವನ ಮೈ, ಬಟ್ಟೆ ಕೊಳೆಯಾದರೇನೇ ನಾವೆಲ್ಲಾ ಅನ್ನ ತಿನ್ನಬಹುದು. ಬಟ್ಟೆ ಮಣ್ಣಾಗಿದೆ, ಮೈ ಕೊಳೆಯಾಗಿದೆ ಎಂದು ರೈತನನ್ನು ಮೆಟ್ರೋ (Namma Metro) ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಬಿಎಂಆರ್‌ಸಿಎಲ್‌ (BMRCL) ಸಿಬ್ಬಂದಿಯ ಅತಿರೇಕದ ವರ್ತನೆಯ ವೀಡಿಯೋ ಪ್ರಯಾಣಿಕರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಬಳಿಕ ಸಹಪ್ರಯಾಣಿಕರು ಸಿಬ್ಬಂದಿ ಬಗ್ಗೆ ತಲೆಕೆಡಿಸಿಕೊಳ್ಳದೆ, ವ್ಯಕ್ತಿಯನ್ನು ಮೆಟ್ರೋದಲ್ಲಿ ಕರೆದೊಯ್ದಿದ್ದಾರೆ. ಅಲ್ಲದೇ ಮೆಟ್ರೋ ಸಿಬ್ಬಂದಿ ವಿರುದ್ಧ ಸಹಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ (Namma Metro) ಸಿಬ್ಬಂದಿಯನ್ನುಈಗ  ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ.

ವೀಡಿಯೋವನ್ನು ಜನ ಬಿಎಂಆರ್‌ಸಿಎಲ್‌ ಟ್ಯಾಗ್ ಮಾಡಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಟಿಪ್ ಟಾಪ್ ಆಗಿ ರೆಡಿಯಾಗಿ ಬಂದರೆ ಮಾತ್ರ ಮೇಟ್ರೋದೊಳಗೆ ಎಂಟ್ರಿ, ಇಲ್ಲವಾದರೆ ಎಂಟ್ರಿ ಇಲ್ಲವೇ? ವಿಐಪಿಗಳಿಗೆ ಮಾತ್ರ ಮೆಟ್ರೋ ಸೌಲಭ್ಯವೇ ಎಂದು ಪ್ರಶ್ನಿಸಿದ್ದಾರೆ. ಅತಿರೇಕದ ವರ್ತನೆ ತೋರಿದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಘಟನೆ ತಡವಾಗಿ ಬೆಳಕಿಗೆ ಬಂತು. ಇದು ಯಾವುದೇ ಕಾರಣಕ್ಕೂ ಕ್ಷಮಿಸುವಂತದ್ದಲ್ಲ. ಕೂಡಲೇ ಘಟನೆಗೆ ಕಾರಣರಾದವರನ್ನ ಟರ್ಮಿನೇಟ್ ಮಾಡಲಾಗಿದೆ. ಘಟನೆಯನ್ನ ಬಿಎಂಆರ್‍ಸಿಎಲ್ ಖಂಡಿಸುತ್ತಿದೆ ಎಂದು ಬಿಎಂಆರ್ ಸಿಎಲ್ ಪಿಆರ್ ಒ ಯಶವಂತ ಚೌಹಾಣ್ ಖಾಸಗಿ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Namma Metro is an inclusive public transport. The Rajajinagar incident is probed & the services of the security supervisor is terminated. BMRCL regrets the inconvenience caused to the Passenger.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

10 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

16 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

20 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago