Advertisement
MIRROR FOCUS

ಬಟ್ಟೆ ಗಲೀಜಾಗಿದೆ ಎಂದು ಮೆಟ್ರೋದ ಒಳಗೆ ಬಿಡದ ಸಿಬ್ಬಂದಿ | ರೈತನನ್ನು ಅವಮಾನಿಸಿದ್ದಕ್ಕೆ ಸಹಪ್ರಯಾಣಿಕರ ಆಕ್ರೋಶ | ಮೆಟ್ರೋ ಸಿಬ್ಬಂದಿ ವಜಾ

Share

ರೈತ(Farmer) ಬೆಳೆದ ಅನ್ನವನ್ನು ತಿಂದು ಕೊಬ್ಬಿರುವ ಕೆಲ ಅಧಿಕಾರಿಗಳು(Officer) ಅವರ ದುರಹಂಕಾರ, ದರ್ಪವನ್ನು ರೈತರ ಮೇಲೆಯೇ ತೋರುತ್ತಿರುವುದು ಅಸಹನೀಯ. ರೈತ ಮಣ್ಣಿನೊಂದಿಗೆ ಬದುಕುವವನು. ಅವನ ಮೈ, ಬಟ್ಟೆ ಕೊಳೆಯಾದರೇನೇ ನಾವೆಲ್ಲಾ ಅನ್ನ ತಿನ್ನಬಹುದು. ಬಟ್ಟೆ ಮಣ್ಣಾಗಿದೆ, ಮೈ ಕೊಳೆಯಾಗಿದೆ ಎಂದು ರೈತನನ್ನು ಮೆಟ್ರೋ (Namma Metro) ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಬಿಎಂಆರ್‌ಸಿಎಲ್‌ (BMRCL) ಸಿಬ್ಬಂದಿಯ ಅತಿರೇಕದ ವರ್ತನೆಯ ವೀಡಿಯೋ ಪ್ರಯಾಣಿಕರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಬಳಿಕ ಸಹಪ್ರಯಾಣಿಕರು ಸಿಬ್ಬಂದಿ ಬಗ್ಗೆ ತಲೆಕೆಡಿಸಿಕೊಳ್ಳದೆ, ವ್ಯಕ್ತಿಯನ್ನು ಮೆಟ್ರೋದಲ್ಲಿ ಕರೆದೊಯ್ದಿದ್ದಾರೆ. ಅಲ್ಲದೇ ಮೆಟ್ರೋ ಸಿಬ್ಬಂದಿ ವಿರುದ್ಧ ಸಹಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ (Namma Metro) ಸಿಬ್ಬಂದಿಯನ್ನುಈಗ  ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ.

ವೀಡಿಯೋವನ್ನು ಜನ ಬಿಎಂಆರ್‌ಸಿಎಲ್‌ ಟ್ಯಾಗ್ ಮಾಡಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಟಿಪ್ ಟಾಪ್ ಆಗಿ ರೆಡಿಯಾಗಿ ಬಂದರೆ ಮಾತ್ರ ಮೇಟ್ರೋದೊಳಗೆ ಎಂಟ್ರಿ, ಇಲ್ಲವಾದರೆ ಎಂಟ್ರಿ ಇಲ್ಲವೇ? ವಿಐಪಿಗಳಿಗೆ ಮಾತ್ರ ಮೆಟ್ರೋ ಸೌಲಭ್ಯವೇ ಎಂದು ಪ್ರಶ್ನಿಸಿದ್ದಾರೆ. ಅತಿರೇಕದ ವರ್ತನೆ ತೋರಿದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಘಟನೆ ತಡವಾಗಿ ಬೆಳಕಿಗೆ ಬಂತು. ಇದು ಯಾವುದೇ ಕಾರಣಕ್ಕೂ ಕ್ಷಮಿಸುವಂತದ್ದಲ್ಲ. ಕೂಡಲೇ ಘಟನೆಗೆ ಕಾರಣರಾದವರನ್ನ ಟರ್ಮಿನೇಟ್ ಮಾಡಲಾಗಿದೆ. ಘಟನೆಯನ್ನ ಬಿಎಂಆರ್‍ಸಿಎಲ್ ಖಂಡಿಸುತ್ತಿದೆ ಎಂದು ಬಿಎಂಆರ್ ಸಿಎಲ್ ಪಿಆರ್ ಒ ಯಶವಂತ ಚೌಹಾಣ್ ಖಾಸಗಿ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Namma Metro is an inclusive public transport. The Rajajinagar incident is probed & the services of the security supervisor is terminated. BMRCL regrets the inconvenience caused to the Passenger.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

11 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

11 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

11 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

11 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago