Advertisement
MIRROR FOCUS

ಗ್ರಾಮ ಪಂಚಾಯತಿಗಳ ಮೂಲಕ ಸಹಜ ಬೇಸಾಯ ಅನುಷ್ಠಾನವಾಗಬೇಕು | ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ

Share

ಚಾಮರಾಜನಗರದ ಯಳಂದೂರು ತಾಲೂಕಿನ ದುಗ್ಗಹಟ್ಟಿ ರಾಜೇಶ ಅವರ ತೋಟದಲ್ಲಿ, ಜೆ ಎಸ್ ಬಿ ಪ್ರತಿಷ್ಠಾನ ವತಿಯಿಂದ ಸುಸ್ಥಿರ ಕೃಷಿ ತರಬೇತಿ ಕಾರ್ಯಾಗಾರ(Agricultural workshop) ಹಮ್ಮಿಕೊಳ್ಳಲಾಗಿತ್ತು.

ಭಾರತ(India) ಕೃಷಿ ಪ್ರಧಾನ ದೇಶವಾಗಿದೆ. ಅನಾದಿಕಾಲದಿಂದ ಮಾನವ(Human) ಮತ್ತು ಕೃಷಿಗೆ(Agriculture) ಅನ್ಯೋನ್ಯ ಸಂಬಂಧವಿದೆ. ಪರಿಸರ ರಕ್ಷಣೆ(Save nature) ನಮ್ಮ ಹೊಣೆ, ಯಾವತ್ತೂ ಕೃಷಿ ನಮ್ಮನ್ನು ಕೈ ಬಿಟ್ಟಿಲ್ಲ ಮುಂದೆ ಸಹ ಬಿಡಿವುದಿಲ್ಲ. ಆದರೆ ನಾವು ಕೃಷಿಯನ್ನು ಕಡೆಗಣಿಸುತ್ತಿರುವುದು ಖೇದಕರ. ಕೃಷಿ ಇಲ್ಲದಿದ್ದರೆ ಬದುಕು ಸಾಧ್ಯವಿಲ್ಲ. ಯುವಕರು ಕೃಷಿಗೆ ಒಲವು ತೋರಿಸಬೇಕು ಇದರಿಂದ ಕೃಷಿಯಿಂದ ವಲಸೆ ಹೋಗುವುದನ್ನು ತಪ್ಪಿಸಬಹುದು. ಸ್ವಾವಲಂಬನೆ ಬದುಕು(Independent Life) ಸಾಗಿಸುವುದಕ್ಕೆ ಉಪ ಬೆಳೆಗಳು, ಪರ್ಯಾಯ ಬೆಳೆಗಳ(Sub crops, alternate crop) ಬಗ್ಗೆ ಗಮನ ಅಗತ್ಯವಾಗಿದೆ ಎಂದು ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ   ತಿಳಿಸಿದರು.

ಇಂದಿನ ಹವಾಮಾನ ಬದಲಾವಣೆಯಿಂದ ಅತಿವೃಷ್ಟಿ, ಅನಾವೃಷ್ಟಿ, ತಾಪಮಾನ ಏರಿಕೆ, ಅಂತರ್ಜಲ ಕುಸಿತ ಇವುಗಳಿಂದ ಕೃಷಿ ಕ್ಷೇತ್ರದ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿರುವುದರಿಂದ ಕೃಷಿ ಕ್ಷೇತ್ರವನ್ನು ಸುಸ್ಥಿರವಾಗಿಸಲು ಮತ್ತು ಹವಾಮಾನ ಬದಲಾವಣೆಯ ಸವಾಲು ಎದುರಿಸಲು ಹಾಗು ರೈತರ ಕೃಷಿ ಆದಾಯವನ್ನು ಹೆಚ್ಚಿಸಲು ವೈಜ್ಞಾನಿಕವಾಗಿ ಕೃಷಿ ಕ್ಷೇತ್ರವನ್ನು ವಿನ್ಯಾಸಗೊಳಿಸುವ ಅನಿವಾರ್ಯತೆಯ ಬಗ್ಗೆ ಕಾರ್ಯಗಾರದಲ್ಲಿ ಚರ್ಚಿಸಲಾಯಿತು.

ಕೃಷಿ ಕ್ಷೇತ್ರವನ್ನು ಸ್ಥಳೀಯವಾಗಿ ತಿಳಿಯಲು ಮತ್ತು ಅಲ್ಲಿನ ವಾತಾವರಣಕ್ಕೆ ಅನುಗುಣವಾಗಿ ಕೃಷಿ ಅಥವಾ ತೋಟಗಾರಿಕೆ ಬೆಳೆಗಳನ್ನು ಆಯೋಜನೆ ಮಾಡಲು ಸ್ಥಳೀಯ ರೈತರೊಂದಿಗೆ ಗ್ರಾಮ ಸಭೆ ನೆಡೆಸುವುದು, ಸಭೆಯಲ್ಲಿ ಗ್ರಾಮ ಪಂಚಾಯತಿಯ ಪಿಡಿಒ, ಇಒ ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಮೀನುಗಾರಿಕೆ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ಗ್ರಾಮ, ತಾಲೂಕು & ಜಿಲ್ಲಾ ಪಂಚಾಯತಿ ಸದಸ್ಯರೂ ಸೇರಿದಂತೆ ಎಲ್ಲರೂ ಒಟ್ಟಾಗಿ ಚರ್ಚಿಸಿ, ಅಲ್ಲಿನ ಸ್ಥಳೀಯ ರೈತರ ಜಮೀನಿನಲ್ಲಿ ಸಹಜ ಬೇಸಾಯ ತಾಕುಗಳನ್ನು ಸೃಷ್ಟಿಸಲು ಬೇಕಾದ ತಾಂತ್ರಿಕ ಮಾಹಿತಿ ಮತ್ತು ಅದರ ಅನುಷ್ಠಾನಕ್ಕೆ ಬೇಕಾಗುವ ಹಣಕಾಸಿನ ವಿವರವನ್ನು ಅಂತಿಮಪಡಿಸಿ, ಯೋಜನೆ ಅನುಷ್ಠಾನ ಮಾಡಲು ಗ್ರಾಮ ಪಂಚಾಯತಿ ಸಭೆಯಲ್ಲಿ ತೀರ್ಮಾನ ಮಾಡುವುದು.
ಮೊದಲಿಗೆ, ಒಂದು ಎಕರೆ ತೆಂಗಿನ ತೋಟಕ್ಕೆ ಅಥವಾ ಖಾಲಿ ಜಮೀನು ಹೊಂದಿರುವ ರೈತರನ್ನು ಆರಿಸಿಕೊಳ್ಳುವುದು, ಅವರಲ್ಲಿ ನೀರಿನ ಸೌಲಭ್ಯದ ಜೊತೆಗೆ ಜಾನುವಾರುಗಳಿರಬೇಕು, ಮಹಿಳೆಯರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮೊದಲ ಪ್ರಾಶಸ್ತ್ಯವನ್ನು ಕೊಡುವುದು. ತೆಂಗಿನ ತೋಟದಲ್ಲಿ ಕೋಕೋ, ಬಾಳೆ, ಅರಿಶಿನ, ನುಗ್ಗೆ, ಜಾಯಿಕಾಯಿ, ಲವಂಗ, ಚಕ್ಕೆ, ಜಮೀನಿನ ಹೊರ ಭಾಗದ ಬದುವಿನಲ್ಲಿ ಮಾವು, ಸಪೋಟ, ಬೆಣ್ಣೆ ಹಣ್ಣು, ಪೇರಲೆ ಹೀಗೆ ಬಗೆಬಗೆಯ ಹಣ್ಣುಗಳನ್ನು ಬೆಳೆಯುವುದು.
ಬದು ನಿರ್ಮಾಣ, ಗುಂಡಿ ತೆಗೆಯಲು, ಉತ್ತಮ ತಳಿಯ ಗಿಡಗಳನ್ನು ಖರೀದಿಸಲು, ಜೀವಾಣುಗಳನ್ನು ತಯಾರಿಸಲು, ಪ್ರತಿ ನಾಲ್ಕು ಅಡಿಗೆ ಸಾಕಾಗುವಷ್ಟು ಡ್ರಿಪ್, ಹೀಗೆ ಒಟ್ಟು ವೆಚ್ಚದ ಸುಮಾರು 80-85% ಹಣಕಾಸಿನ ನೆರವನ್ನು ಗ್ರಾಮ ಪಂಚಾಯತಿ ಮೂಲಕ ನೀಡುವುದು. ಕೃಷಿ ಭೂಮಿಗೆ ಬೇಕಾದ ಫಲವತ್ತಾದ ಕೊಟ್ಟಿಗೆ ಗೊಬ್ಬರ, ಮಾನವ ಶ್ರಮ, ಒಳಸುರಿ ತಯಾರಿಸಲು ಬೇಕಾದ ಪರಿಕರ ಹೀಗೆ ಶೇ.15-20% ವೆಚ್ಚವನ್ನು ರೈತರು ಭರಿಸಿಕೊಳ್ಳಬೇಕು.
ಕೃಷಿ ವಿಜ್ಞಾನ ಕೇಂದ್ರ, ಕೃಷಿ, ತೋಟಗಾರಿಕೆ ಹಾಗು ಸಂಬಂಧಿಸಿದ ಇತರೆ ಎಲ್ಲಾ ಸರ್ಕಾರಿ ಇಲಾಖೆಗಳು ರೈತರಿಗೆ ಸಹಜ ಕೃಷಿ ಬಗ್ಗೆ ತರಬೇತಿ ನೀಡಬೇಕು. ಕೃಷಿ ಹಾಗು ಪಶು ಸಖಿಯರು ತರಬೇತಿ ಕಾರ್ಯಕ್ರಮದ ಕೇಂದ್ರ ಬಿಂದುಗಳಾಗಿರುತ್ತಾರೆ ಮತ್ತು ಅವರು ರೈತರು ಮತ್ತು ವಿಜ್ಞಾನಿಗಳ ನಡುವೆ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಾರೆ. ಕೃಷಿ ವಿಜ್ಞಾನ ಕೇಂದ್ರದವರು ತರಬೇತಿ ಜೊತೆಗೆ ರೈತರಿಗೆ ವಿತರಣೆ ಮಾಡಲು ಜೀವಾಣುಗಳು, ಜೇನು ಪೆಟ್ಟಿಗೆ ಇತ್ಯಾದಿ ನೀಡುವುದು, ತೋಟಗಾರಿಕೆ ಇಲಾಖೆಯವರು ಹನಿ ನೀರಾವರಿ, ಗಿಡಗಳು, ಗಿಡಗಳನ್ನು ನೆಡಲು ಗುಂಡಿ ತೆಗೆಸುವುದು, ಕೃಷಿ ಇಲಾಖೆಯವರು ಹಸಿರು ಹೊದಿಕೆಗೆ ಬೇಕಾಗುವ ಬೀಜ ಹಾಗು ಇತ್ಯಾದಿ ಪರಿಕರದ ಜವಾಬ್ಧಾರಿ, ಮೀನುಗಾರಿಕೆ ಇಲಾಖೆಯವರು ಕೃಷಿ ಹೊಂಡಕ್ಕೆ ಮೀನುಗಳನ್ನು ಕೊಡುವುದು, ಪಶು ಸಂಗೋಪನೆಯವರು ಜಾನುವಾರುಗಳಿಗೆ ರೋಗ ರುಜಿನಗಳು ಬರದಂತೆ ಹಾಗು ಮೇವಿಗೆ ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹೀಗೆ ವಿವಿಧ ಇಲಾಖೆಯವರು ಜವಾಬ್ದಾರಿ ನಿರ್ವಹಣೆಯನ್ನು ನಿಭಾಯಿಸಿಕೊಂಡು ಹೋಗುವುದು ಎಂದು ವಿಸ್ತೃತವಾಗಿ ಚರ್ಚಿಸಲಾಯಿತು.
ಪ್ರತಿ ಜಿಲ್ಲೆಗೆ ಬೇಕಾದ ಕಾರ್ಯಕ್ರಮದ ರೂಪುರೇಷೆ, ಸಹಜ ಬೇಸಾಯಕ್ಕೆ ಬೇಕಾದ ಎಲ್ಲಾ ತಾಂತ್ರಿಕ ಬೆಂಬಲ ಮತ್ತು ತರಬೇತಿ ಒದಗಿಸುವ ಬಗ್ಗೆ ರೈತರು ಶೀಘ್ರದಲ್ಲಿ ಸಭೆ ಸೇರಿ ಅನುಷ್ಠಾನದ ಮಾರ್ಗಸೂಚಿಗಳನ್ನು ಕಾರ್ಯಗತಗೊಳಿಸಲು ಕಾರ್ಯಾಗಾರದಲ್ಲಿ ತೀರ್ಮಾನಿಸಲಾಯಿತು. ಕಾರ್ಯಾಗಾರದಲ್ಲಿ ರೈತ ಸಂಘದ ಹೂನ್ನೂರು ಪ್ರಕಾಶ, ದುಗ್ಗಟ್ಟಿ ರಾಜೇಶ, ಪ್ರಶಾಂತ ಜಯರಾಂ, ಎಪಿಎಂಸಿ ಮಾಜಿ ಅಧ್ಯಕ್ಷ ಶಂಕರಮೂರ್ತಿ, ಪ್ರಸನ್ನ, ಮಹೇಂದ್ರ, ಚಂದ್ರಶೇಖರಯ್ಯ, ವೆಂಕಟೇಶ, ರಕ್ಷಿತ್, ದೀಪಾ ಮತ್ತು ರಾಜ್ಯದ ವಿವಿಧ ಭಾಗದಿಂದ 50ಕ್ಕೂ ಹೆಚ್ಚಿನ ರೈತರು ಭಾಗವಹಿಸಿದ್ದರು.

(ಮಾಧ್ಯಮ ಮಾಹಿತಿ: ಶಶಿಕುಮಾರ್)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

7 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

7 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

11 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

12 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

12 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

12 hours ago