Advertisement
MIRROR FOCUS

#NoPlastic | ಪ್ಲಾಸ್ಟಿಕ್‌ ಬ್ಯಾಗ್‌ ಬಿಡಿ, ಬಟ್ಟೆ ಚೀಲ ಹಿಡಿಯಿರಿ…. | ಮಹಿಳೆಯರು ಆರಂಭಿಸಿದ ಬಟ್ಟೆ ಚೀಲ ಗೃಹೋದ್ಯಮ |

Share

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌ ಮುಕ್ತ ದಿನದ ಆಚರಣೆ ನಡೆಸಲಾಗುತ್ತಿದೆ. ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಚಳುವಳಿ ಗ್ರಾಮೀಣ ಭಾಗದಲ್ಲೂ ಕಾವು ಪಡೆಯಬೇಕಿದೆ. ಇದೇ ಸಂದರ್ಭ ಬಟ್ಟೆ ಚೀಲ ತಯಾರು ಮಾಡುವ ಮೂಲಕ ಮಹಿಳೆಯರೂ ಸ್ವ ಉದ್ಯೋಗದ ಹೆಜ್ಜೆ ಇರಿಸುತ್ತಿದ್ದಾರೆ. ಗ್ರಾಮೀಣ ಭಾಗದ ಈ ಬಟ್ಟೆ ಚೀಲ ತಯಾರಿಕೆಗೆ, ಬಳಕೆಗೆ ಈಗ ಬೆಂಬಲ ಸಿಗಬೇಕಿದೆ.

Advertisement
Advertisement

ಜುಲೈ 3. ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ ಎಂದು ಆಚರಿಸಲಾಗುತ್ತದೆ.ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯ ಪ್ರಮಾಣವನ್ನು ತಡೆಯಲು ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನವನ್ನಾಗಿ ಆಚರಿಸುತ್ತದೆ. ಮಣ್ಣಲ್ಲಿ ಕರಗದ ಪ್ಲಾಸ್ಟಿಕ್‌ ಈ ಪರಿಸರದ ಮೇಲೆ ವ್ಯಾಪಕವಾದ ಹಾನಿ ಉಂಟು ಮಾಡುತ್ತಿದೆ. ಈ ಕಾರಣದಿಂದ ಪ್ಲಾಸ್ಟಿಕ್‌ ಬಳಕೆ ಕಡಿಮೆ ಆಗಲೇಬೇಕು ಎಂದು ವಿಶ್ವದೆಲ್ಲೆಡೆ ಸರ್ಕಾರ ಮತ್ತು ನಾಗರಿಕ ಸಮಾಜ ಪ್ಲಾಸ್ಟಿಕ್ ಮರುಬಳಕೆಯ ಗುರಿಯನ್ನು ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕಾಗಿ ಅನೇಕ ನಿರ್ಣಯಗಳನ್ನು ಅಂಗೀಕರಿಸುತ್ತವೆ. ಅಂತಹದ್ದರಲ್ಲಿ ಬಟ್ಟೆ ಚೀಲ ಬಳಕೆಯೂ ಒಂದಾಗಿದೆ.

ಸರ್ಕಾರಗಳು ಯಾವುದೇ ಯೋಜನೆ ಕೈಗೊಂಡರೂ ಅದು ಜಾರಿಯಾಗುವುದು  ಜನರಿಂದಲೇ. ಇದಕ್ಕಾಗಿ ಜನರಿಗೆ ಜಾಗೃತಿಯಾಗಬೇಕಿದೆ. ಜನರಲ್ಲೇ ಅರಿವು ಮೂಡಬೇಕಿದೆ. ಗ್ರಾಮೀಣ ಭಾಗದಲ್ಲೂ ಸರ್ಕಾರದ ಇಂತಹ ಯೋಜನೆಗಳಿಗೆ ಗ್ರಾಮೀಣ ಭಾಗದಲ್ಲೂ ಸ್ಪಂದನೆ ದೊರೆತರೆ ಮಾತ್ರ ಪರಿಸರ ಜಾಗೃತಿ, ಅರಿವು, ಉಳಿವು ಸಾಧ್ಯವಿದೆ. ಪ್ಲಾಸ್ಟಿಕ್‌ ಮುಕ್ತ, ಬಟ್ಟೆ ಚೀಲದ ಈ ಅಭಿಯಾನದಲ್ಲಿ ಮಹಿಳಾ ಘಟಕವೊಂದು ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಇದೀಗ ಬಟ್ಟೆ ಚೀಲ ತಯಾರು ಮಾಡಿ ತಮ್ಮ ಊರಿನ ಅಂಗಡಿಗಳಿಗೆ ನೀಡಲು ತಯಾರಿ ನಡೆಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಗ್ರಾಮದ ಅಮರಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಒಕ್ಕೂಟದ ದೀಪ ಸಂಜೀವಿನ ಘಟಕದ ಸಾರಥ್ಯದಲ್ಲಿ ಮಹಿಳೆಯರು ಈಗ ಬಟ್ಟೆ ಚೀಲ ತಯಾರಿಕಾ ಘಟಕವನ್ನು ಆರಂಭಿಸಿದ್ದಾರೆ. ಮಾರ್ಚ್‌ ಅಂತ್ಯಕ್ಕೆ ಈ ಬಗ್ಗೆ ತರಬೇತಿ ಪಡೆದು ಗ್ರಾಮವನ್ನು  ಪ್ಲಾಸಿಕ್‌ ಮುಕ್ತ ಮಾಡುವ ಕಡೆಗೆ ಹೆಜ್ಜೆ ಇರಿಸುವ ವೇಳೆ ಪ್ಲಾಸ್ಟಿಕ್‌ ಚೀಲದ ಬದಲಾಗಿ ಬಟ್ಟೆ ಚೀಲ ತಯಾರು ಮಾಡುವ ಗೃಹೋದ್ಯಮವನ್ನು ಆರಂಭ ಮಾಡಿದ್ದಾರೆ. ಗುತ್ತಿಗಾರು ಗ್ರಾಮದ ನಡುಗಲ್ಲು ಹಾಗೂ ಆಸುಪಾಸಿನ ವಿವಿಧ ಕಡೆಗೆ ಸುಮಾರು 30 ಆಸಕ್ತ ಮಹಿಳೆಯರು ಬಟ್ಟೆ ಚೀಲ ತಯಾರಿಕೆಗೆ ಮುಂದೆ ಬಂದಿದ್ದಾರೆ. ಬಟ್ಟೆಯನ್ನು ಮಹಿಳೆಯರಿಗೆ ನೀಡಿ ಅವರು ಚೀಲ ತಯಾರಿಸಿ ನೀಡುವ ಉದ್ದೇಶವನ್ನು ಇಲ್ಲಿ ಹೊಂದಲಾಗಿದೆ. ಗ್ರಾಮದಲ್ಲಿ ಪ್ಲಾಸ್ಟಿಕ್‌ ಬದಲಿಗೆ ಬಟ್ಟೆ ಚೀಲ ಉಪಯೋಗಿಸುವಂತೆ ಪ್ರೇರಪಣೆ ನೀಡುವುದು ಹಾಗೂ ಈ ಮೂಲಕ ಪ್ಲಾಸ್ಟಿಕ್‌ ಮುಕ್ತ ಮಾಡುವುದು  ಇದರ ಉದ್ದೇಶವಾಗಿದೆ.

ಈಗಾಗಲೇ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬಟ್ಟೆ ಚೀಲಗಳಿಗೆ ಬೇಡಿಕೆ ಬಂದಿದ್ದು, ಪ್ಲಾಸ್ಟಿಕ್‌ ಚೀಲ ಮುಕ್ತ ಮಾಡುವ ಜಾಗೃತಿ ಯೋಜನೆಗೆ ಚಾಲನೆ ದೊರೆತಿದೆ, ಅದರ ಜೊತೆಗೇ ವರ್ತಕರೂ ಪ್ರಾಯೋಗಿಕವಾಗಿ ಬಟ್ಟೆ ಚೀಲದ ಬೇಡಿಕೆ ವ್ಯಕ್ತಪಡಿಸಿದ್ದಾರೆ. ಈ ಅಭಿಯಾನವು ಮುಂದೆ ಇಡೀ ಗ್ರಾಮದಲ್ಲಿ ನಡೆಯಬೇಕಿದೆ. ಗ್ರಾಮದ ಹಾಗೂ ಇತರ ಕಡೆಗೂ ಬಟ್ಟೆ ಚೀಲಗಳನ್ನು ತಯಾರಿಸಿ ಕೊಡಲು ಈ ಮಹಿಳಾ ತಂಡ ಉತ್ಸಾಹದಲ್ಲಿದೆ. ಅಂತಾರಾಷ್ಟ್ರೀಯ ಪ್ಲಾಸ್ಟಿಕ್‌ ಮುಕ್ತ ದಿನದ ಅಭಿಯಾನದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಮಹಿಳಾ ತಂಡವೂ ಈ ಮೂಲಕ ಗುರುತಿಸಿಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

22 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

22 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

22 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

22 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago