MIRROR FOCUS

#NoPlastic | ಪ್ಲಾಸ್ಟಿಕ್‌ ಬ್ಯಾಗ್‌ ಬಿಡಿ, ಬಟ್ಟೆ ಚೀಲ ಹಿಡಿಯಿರಿ…. | ಮಹಿಳೆಯರು ಆರಂಭಿಸಿದ ಬಟ್ಟೆ ಚೀಲ ಗೃಹೋದ್ಯಮ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌ ಮುಕ್ತ ದಿನದ ಆಚರಣೆ ನಡೆಸಲಾಗುತ್ತಿದೆ. ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಚಳುವಳಿ ಗ್ರಾಮೀಣ ಭಾಗದಲ್ಲೂ ಕಾವು ಪಡೆಯಬೇಕಿದೆ. ಇದೇ ಸಂದರ್ಭ ಬಟ್ಟೆ ಚೀಲ ತಯಾರು ಮಾಡುವ ಮೂಲಕ ಮಹಿಳೆಯರೂ ಸ್ವ ಉದ್ಯೋಗದ ಹೆಜ್ಜೆ ಇರಿಸುತ್ತಿದ್ದಾರೆ. ಗ್ರಾಮೀಣ ಭಾಗದ ಈ ಬಟ್ಟೆ ಚೀಲ ತಯಾರಿಕೆಗೆ, ಬಳಕೆಗೆ ಈಗ ಬೆಂಬಲ ಸಿಗಬೇಕಿದೆ.

Advertisement

ಜುಲೈ 3. ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ ಎಂದು ಆಚರಿಸಲಾಗುತ್ತದೆ.ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯ ಪ್ರಮಾಣವನ್ನು ತಡೆಯಲು ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನವನ್ನಾಗಿ ಆಚರಿಸುತ್ತದೆ. ಮಣ್ಣಲ್ಲಿ ಕರಗದ ಪ್ಲಾಸ್ಟಿಕ್‌ ಈ ಪರಿಸರದ ಮೇಲೆ ವ್ಯಾಪಕವಾದ ಹಾನಿ ಉಂಟು ಮಾಡುತ್ತಿದೆ. ಈ ಕಾರಣದಿಂದ ಪ್ಲಾಸ್ಟಿಕ್‌ ಬಳಕೆ ಕಡಿಮೆ ಆಗಲೇಬೇಕು ಎಂದು ವಿಶ್ವದೆಲ್ಲೆಡೆ ಸರ್ಕಾರ ಮತ್ತು ನಾಗರಿಕ ಸಮಾಜ ಪ್ಲಾಸ್ಟಿಕ್ ಮರುಬಳಕೆಯ ಗುರಿಯನ್ನು ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕಾಗಿ ಅನೇಕ ನಿರ್ಣಯಗಳನ್ನು ಅಂಗೀಕರಿಸುತ್ತವೆ. ಅಂತಹದ್ದರಲ್ಲಿ ಬಟ್ಟೆ ಚೀಲ ಬಳಕೆಯೂ ಒಂದಾಗಿದೆ.

ಸರ್ಕಾರಗಳು ಯಾವುದೇ ಯೋಜನೆ ಕೈಗೊಂಡರೂ ಅದು ಜಾರಿಯಾಗುವುದು  ಜನರಿಂದಲೇ. ಇದಕ್ಕಾಗಿ ಜನರಿಗೆ ಜಾಗೃತಿಯಾಗಬೇಕಿದೆ. ಜನರಲ್ಲೇ ಅರಿವು ಮೂಡಬೇಕಿದೆ. ಗ್ರಾಮೀಣ ಭಾಗದಲ್ಲೂ ಸರ್ಕಾರದ ಇಂತಹ ಯೋಜನೆಗಳಿಗೆ ಗ್ರಾಮೀಣ ಭಾಗದಲ್ಲೂ ಸ್ಪಂದನೆ ದೊರೆತರೆ ಮಾತ್ರ ಪರಿಸರ ಜಾಗೃತಿ, ಅರಿವು, ಉಳಿವು ಸಾಧ್ಯವಿದೆ. ಪ್ಲಾಸ್ಟಿಕ್‌ ಮುಕ್ತ, ಬಟ್ಟೆ ಚೀಲದ ಈ ಅಭಿಯಾನದಲ್ಲಿ ಮಹಿಳಾ ಘಟಕವೊಂದು ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಇದೀಗ ಬಟ್ಟೆ ಚೀಲ ತಯಾರು ಮಾಡಿ ತಮ್ಮ ಊರಿನ ಅಂಗಡಿಗಳಿಗೆ ನೀಡಲು ತಯಾರಿ ನಡೆಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಗ್ರಾಮದ ಅಮರಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಒಕ್ಕೂಟದ ದೀಪ ಸಂಜೀವಿನ ಘಟಕದ ಸಾರಥ್ಯದಲ್ಲಿ ಮಹಿಳೆಯರು ಈಗ ಬಟ್ಟೆ ಚೀಲ ತಯಾರಿಕಾ ಘಟಕವನ್ನು ಆರಂಭಿಸಿದ್ದಾರೆ. ಮಾರ್ಚ್‌ ಅಂತ್ಯಕ್ಕೆ ಈ ಬಗ್ಗೆ ತರಬೇತಿ ಪಡೆದು ಗ್ರಾಮವನ್ನು  ಪ್ಲಾಸಿಕ್‌ ಮುಕ್ತ ಮಾಡುವ ಕಡೆಗೆ ಹೆಜ್ಜೆ ಇರಿಸುವ ವೇಳೆ ಪ್ಲಾಸ್ಟಿಕ್‌ ಚೀಲದ ಬದಲಾಗಿ ಬಟ್ಟೆ ಚೀಲ ತಯಾರು ಮಾಡುವ ಗೃಹೋದ್ಯಮವನ್ನು ಆರಂಭ ಮಾಡಿದ್ದಾರೆ. ಗುತ್ತಿಗಾರು ಗ್ರಾಮದ ನಡುಗಲ್ಲು ಹಾಗೂ ಆಸುಪಾಸಿನ ವಿವಿಧ ಕಡೆಗೆ ಸುಮಾರು 30 ಆಸಕ್ತ ಮಹಿಳೆಯರು ಬಟ್ಟೆ ಚೀಲ ತಯಾರಿಕೆಗೆ ಮುಂದೆ ಬಂದಿದ್ದಾರೆ. ಬಟ್ಟೆಯನ್ನು ಮಹಿಳೆಯರಿಗೆ ನೀಡಿ ಅವರು ಚೀಲ ತಯಾರಿಸಿ ನೀಡುವ ಉದ್ದೇಶವನ್ನು ಇಲ್ಲಿ ಹೊಂದಲಾಗಿದೆ. ಗ್ರಾಮದಲ್ಲಿ ಪ್ಲಾಸ್ಟಿಕ್‌ ಬದಲಿಗೆ ಬಟ್ಟೆ ಚೀಲ ಉಪಯೋಗಿಸುವಂತೆ ಪ್ರೇರಪಣೆ ನೀಡುವುದು ಹಾಗೂ ಈ ಮೂಲಕ ಪ್ಲಾಸ್ಟಿಕ್‌ ಮುಕ್ತ ಮಾಡುವುದು  ಇದರ ಉದ್ದೇಶವಾಗಿದೆ.

Advertisement

ಈಗಾಗಲೇ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬಟ್ಟೆ ಚೀಲಗಳಿಗೆ ಬೇಡಿಕೆ ಬಂದಿದ್ದು, ಪ್ಲಾಸ್ಟಿಕ್‌ ಚೀಲ ಮುಕ್ತ ಮಾಡುವ ಜಾಗೃತಿ ಯೋಜನೆಗೆ ಚಾಲನೆ ದೊರೆತಿದೆ, ಅದರ ಜೊತೆಗೇ ವರ್ತಕರೂ ಪ್ರಾಯೋಗಿಕವಾಗಿ ಬಟ್ಟೆ ಚೀಲದ ಬೇಡಿಕೆ ವ್ಯಕ್ತಪಡಿಸಿದ್ದಾರೆ. ಈ ಅಭಿಯಾನವು ಮುಂದೆ ಇಡೀ ಗ್ರಾಮದಲ್ಲಿ ನಡೆಯಬೇಕಿದೆ. ಗ್ರಾಮದ ಹಾಗೂ ಇತರ ಕಡೆಗೂ ಬಟ್ಟೆ ಚೀಲಗಳನ್ನು ತಯಾರಿಸಿ ಕೊಡಲು ಈ ಮಹಿಳಾ ತಂಡ ಉತ್ಸಾಹದಲ್ಲಿದೆ. ಅಂತಾರಾಷ್ಟ್ರೀಯ ಪ್ಲಾಸ್ಟಿಕ್‌ ಮುಕ್ತ ದಿನದ ಅಭಿಯಾನದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಮಹಿಳಾ ತಂಡವೂ ಈ ಮೂಲಕ ಗುರುತಿಸಿಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

1 hour ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

10 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

10 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

10 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

10 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago