ಪರಿಸರ

ಪರಿಸರ ರಕ್ಷಣೆಗೆ ಭೂಮಿ ಖರೀದಿಗೆ ಮುಂದಾದ ಸಂಸ್ಥೆ | 2035 ರ ವೇಳೆಗೆ 10,000 ಎಕರೆ ಹಸಿರು ಹೊದಿಕೆಯ ಗುರಿ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜೂನ್‌ ತಿಂಗಳು ಆರಂಭವಾಗುತ್ತಿದ್ದಂತೆಯೇ ಪರಿಸರದ ಕಾಳಜಿಗಳು ಕಾಣುತ್ತವೆ. ಎಲ್ಲೆಡೆಯೂ ಪರಿಸರ ರಕ್ಷಣೆಯದೇ ಸುದ್ದಿ. ಹಸಿರು ಮಾತಿನದೇ ಚರ್ಚೆ. ಆದರೆ ಇಲ್ಲೊಂದು ಸಂಸ್ಥೆ, ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಕಂಪನಿ, ತನ್ನ ಮೂಲ ಉದ್ದೇಶದ ಜೊತೆಗೆ ಲಾಭ ರಹಿತವಾಗಿ ಪರಿಸರ ರಕ್ಷಣೆಗೆ ಭೂಮಿ ಖರೀದಿಗೆ ಮುಂದಾಗಿದೆ. 2035 ರ ವೇಳೆಗೆ ಪಶ್ಚಿಮ ಘಟ್ಟಗಳಲ್ಲಿ 10,000 ಎಕರೆ ಭೂಮಿಯನ್ನು ಸಂರಕ್ಷಿಸುವ ಗುರಿಯನ್ನು ಇರಿಸಿಕೊಂಡಿದೆ.

Advertisement
Advertisement

ಅರಣ್ಯನಾಶಕ್ಕೆ ಸಂಬಂಧಿಸಿದಂತೆ ಬ್ರೆಜಿಲ್ ನಂತರ ಭಾರತವು ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ. 2022 ರಲ್ಲಿ ಅರಣ್ಯ ಪ್ರದೇಶವನ್ನು ಹೆಚ್ಚಿಸುವ ಗುರಿಯನ್ನು ಸರ್ಕಾರವು ಕಡಿಮೆ ಮಾಡಿದೆ ಎನ್ನುವ ಆರೋಪ ಇದೆ. ವಿಶ್ವದಲ್ಲಿ ಗ್ಲೋಬಲ್‌ ವಾರ್ಮಿಂಗ್‌ ಸುದ್ದಿ ಮಾಡುತ್ತಿದೆ. ಹವಾಮಾನದಲ್ಲಿ ಗಂಭೀರ ಏರುಪೇರುಗಳು ಕಾಣುತ್ತಿವೆ. ಈಚೆಗೆ ದೇಶದಲ್ಲಿ  ಅರಣ್ಯ ಪ್ರದೇಶದ ಬೆಳವಣಿಗೆಯು ಎಂಟು ವರ್ಷಗಳಲ್ಲಿ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಈ ನಡುವೆ ಬೆಂಗಳೂರು ಮೂಲದ ಸ್ಟಾರ್ಟ್ಅಪ್  ಕಂಪನಿಯೊಂದು ತನ್ನ ಲಾಭದ ಉದ್ದೇಶ ಬಿಟ್ಟು ಪರಿಸರವನ್ನು ರಕ್ಷಿಸಲು ಗ್ರಾಮೀಣ ಭಾಗದಲ್ಲಿ ಅಥವಾ ಅರಣ್ಯದ ಬಳಿ  ಖಾಸಗಿ ಭೂಮಿಯನ್ನು ಖರೀದಿಸಲು ಚಿಂತನೆ ನಡೆಸಿದೆ. ಅಲ್ಲಿ  ಮನೆಗಳನ್ನು ನಿರ್ಮಿಸುವ ಬದಲು ಹಸಿರು ಹೊದಿಕೆ ಮತ್ತು ನೈಸರ್ಗಿಕವಾಗಿಯೇ ಪರಿಸರ ರಕ್ಷಿಸಲು ಭೂಮಿಯನ್ನು ಖರೀದಿಸುವ ಮೂಲಕ ಉದ್ದೇಶ ಹೊಂದಿದೆ. ಉದ್ಯಮಿ ನಿಶಾಂತ್ ಪ್ರಸನ್ನ ಮತ್ತು ಪರಿಸರವಾದಿ ಅಭಿಷೇಕ್ ಜೈನ್ ಸ್ಥಾಪಿಸಿದ ಬೆಂಗಳೂರು ಮೂಲದ ಮೈಸಿಲಿಯಮ್(Mycelium) ಸಂಸ್ಥೆ ಅರಣ್ಯಗಳ ಪಕ್ಕದಲ್ಲಿರುವ ಖಾಸಗಿ ಭೂಮಿಯನ್ನು ಸಂರಕ್ಷಣೆಗಾಗಿ ಖರೀದಿಸುತ್ತಿದೆ.  ಇದಕ್ಕಾಗಿ ಜನರ ನೆರವನ್ನೂ ಪಡೆಯುತ್ತದೆ. ಆದರೆ  ಈ ಸಮೂಹಗಳ ಸದಸ್ಯರು ಭೂಮಿಯನ್ನು ತಮಗಾಗಿ ಖರೀದಿ ಮಾಡುವುದಿಲ್ಲ, ಜನರ ಕೊಡುಗೆ, ಸಹಾಯಕ್ಕೆ  ಪ್ರತಿಯಾಗಿ ಮೈಸಿಲಿಯಮ್‌ನಲ್ಲಿ ಇಕ್ವಿಟಿಯನ್ನು ನೀಡಲಾಗುತ್ತದೆ.

ಸಂಸ್ಥೆಯು ಅರಣ್ಯ ಅನುಭವಗಳನ್ನು ಒದಗಿಸುವುದು, ಚಾರಣಗಳನ್ನು ಆಯೋಜಿಸುವುದು ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲು ಪ್ರಾರಂಭಿಸುತ್ತದೆ.ಇದರ ಜೊತೆಗೆ ಅರಣ್ಯದ ಸಮೀಪವಿರುವ ಭೂಮಿಯಲ್ಲಿ ಸಾವಯವ ಉತ್ಪನ್ನಗಳನ್ನು ಬೆಳೆಯುತ್ತದೆ ಮತ್ತು ಅದಕ್ಕೆ ಮಾರುಕಟ್ಟೆಯನ್ನು ಸೃಷ್ಟಿಸುತ್ತದೆ.ಈ ಮೂಲಕ ಬರುವ ಆದಾಯದಿಂದ ಮತ್ತೆ ಪರಿಸರ ಬೆಳೆಸುವ ಯೋಜನೆ ಹೊಂದಿದೆ. 2035 ರ ವೇಳೆಗೆ ಪಶ್ಚಿಮ ಘಟ್ಟಗಳಲ್ಲಿ 10,000 ಎಕರೆ ಭೂಮಿಯನ್ನು ಸಂರಕ್ಷಿಸುವುದು ಅವರ ಗುರಿಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

11 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago