Advertisement
ಪರಿಸರ

ಪರಿಸರ ರಕ್ಷಣೆಗೆ ಭೂಮಿ ಖರೀದಿಗೆ ಮುಂದಾದ ಸಂಸ್ಥೆ | 2035 ರ ವೇಳೆಗೆ 10,000 ಎಕರೆ ಹಸಿರು ಹೊದಿಕೆಯ ಗುರಿ…! |

Share

ಜೂನ್‌ ತಿಂಗಳು ಆರಂಭವಾಗುತ್ತಿದ್ದಂತೆಯೇ ಪರಿಸರದ ಕಾಳಜಿಗಳು ಕಾಣುತ್ತವೆ. ಎಲ್ಲೆಡೆಯೂ ಪರಿಸರ ರಕ್ಷಣೆಯದೇ ಸುದ್ದಿ. ಹಸಿರು ಮಾತಿನದೇ ಚರ್ಚೆ. ಆದರೆ ಇಲ್ಲೊಂದು ಸಂಸ್ಥೆ, ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಕಂಪನಿ, ತನ್ನ ಮೂಲ ಉದ್ದೇಶದ ಜೊತೆಗೆ ಲಾಭ ರಹಿತವಾಗಿ ಪರಿಸರ ರಕ್ಷಣೆಗೆ ಭೂಮಿ ಖರೀದಿಗೆ ಮುಂದಾಗಿದೆ. 2035 ರ ವೇಳೆಗೆ ಪಶ್ಚಿಮ ಘಟ್ಟಗಳಲ್ಲಿ 10,000 ಎಕರೆ ಭೂಮಿಯನ್ನು ಸಂರಕ್ಷಿಸುವ ಗುರಿಯನ್ನು ಇರಿಸಿಕೊಂಡಿದೆ.

ಅರಣ್ಯನಾಶಕ್ಕೆ ಸಂಬಂಧಿಸಿದಂತೆ ಬ್ರೆಜಿಲ್ ನಂತರ ಭಾರತವು ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ. 2022 ರಲ್ಲಿ ಅರಣ್ಯ ಪ್ರದೇಶವನ್ನು ಹೆಚ್ಚಿಸುವ ಗುರಿಯನ್ನು ಸರ್ಕಾರವು ಕಡಿಮೆ ಮಾಡಿದೆ ಎನ್ನುವ ಆರೋಪ ಇದೆ. ವಿಶ್ವದಲ್ಲಿ ಗ್ಲೋಬಲ್‌ ವಾರ್ಮಿಂಗ್‌ ಸುದ್ದಿ ಮಾಡುತ್ತಿದೆ. ಹವಾಮಾನದಲ್ಲಿ ಗಂಭೀರ ಏರುಪೇರುಗಳು ಕಾಣುತ್ತಿವೆ. ಈಚೆಗೆ ದೇಶದಲ್ಲಿ  ಅರಣ್ಯ ಪ್ರದೇಶದ ಬೆಳವಣಿಗೆಯು ಎಂಟು ವರ್ಷಗಳಲ್ಲಿ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಈ ನಡುವೆ ಬೆಂಗಳೂರು ಮೂಲದ ಸ್ಟಾರ್ಟ್ಅಪ್  ಕಂಪನಿಯೊಂದು ತನ್ನ ಲಾಭದ ಉದ್ದೇಶ ಬಿಟ್ಟು ಪರಿಸರವನ್ನು ರಕ್ಷಿಸಲು ಗ್ರಾಮೀಣ ಭಾಗದಲ್ಲಿ ಅಥವಾ ಅರಣ್ಯದ ಬಳಿ  ಖಾಸಗಿ ಭೂಮಿಯನ್ನು ಖರೀದಿಸಲು ಚಿಂತನೆ ನಡೆಸಿದೆ. ಅಲ್ಲಿ  ಮನೆಗಳನ್ನು ನಿರ್ಮಿಸುವ ಬದಲು ಹಸಿರು ಹೊದಿಕೆ ಮತ್ತು ನೈಸರ್ಗಿಕವಾಗಿಯೇ ಪರಿಸರ ರಕ್ಷಿಸಲು ಭೂಮಿಯನ್ನು ಖರೀದಿಸುವ ಮೂಲಕ ಉದ್ದೇಶ ಹೊಂದಿದೆ. ಉದ್ಯಮಿ ನಿಶಾಂತ್ ಪ್ರಸನ್ನ ಮತ್ತು ಪರಿಸರವಾದಿ ಅಭಿಷೇಕ್ ಜೈನ್ ಸ್ಥಾಪಿಸಿದ ಬೆಂಗಳೂರು ಮೂಲದ ಮೈಸಿಲಿಯಮ್(Mycelium) ಸಂಸ್ಥೆ ಅರಣ್ಯಗಳ ಪಕ್ಕದಲ್ಲಿರುವ ಖಾಸಗಿ ಭೂಮಿಯನ್ನು ಸಂರಕ್ಷಣೆಗಾಗಿ ಖರೀದಿಸುತ್ತಿದೆ.  ಇದಕ್ಕಾಗಿ ಜನರ ನೆರವನ್ನೂ ಪಡೆಯುತ್ತದೆ. ಆದರೆ  ಈ ಸಮೂಹಗಳ ಸದಸ್ಯರು ಭೂಮಿಯನ್ನು ತಮಗಾಗಿ ಖರೀದಿ ಮಾಡುವುದಿಲ್ಲ, ಜನರ ಕೊಡುಗೆ, ಸಹಾಯಕ್ಕೆ  ಪ್ರತಿಯಾಗಿ ಮೈಸಿಲಿಯಮ್‌ನಲ್ಲಿ ಇಕ್ವಿಟಿಯನ್ನು ನೀಡಲಾಗುತ್ತದೆ.

ಸಂಸ್ಥೆಯು ಅರಣ್ಯ ಅನುಭವಗಳನ್ನು ಒದಗಿಸುವುದು, ಚಾರಣಗಳನ್ನು ಆಯೋಜಿಸುವುದು ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲು ಪ್ರಾರಂಭಿಸುತ್ತದೆ.ಇದರ ಜೊತೆಗೆ ಅರಣ್ಯದ ಸಮೀಪವಿರುವ ಭೂಮಿಯಲ್ಲಿ ಸಾವಯವ ಉತ್ಪನ್ನಗಳನ್ನು ಬೆಳೆಯುತ್ತದೆ ಮತ್ತು ಅದಕ್ಕೆ ಮಾರುಕಟ್ಟೆಯನ್ನು ಸೃಷ್ಟಿಸುತ್ತದೆ.ಈ ಮೂಲಕ ಬರುವ ಆದಾಯದಿಂದ ಮತ್ತೆ ಪರಿಸರ ಬೆಳೆಸುವ ಯೋಜನೆ ಹೊಂದಿದೆ. 2035 ರ ವೇಳೆಗೆ ಪಶ್ಚಿಮ ಘಟ್ಟಗಳಲ್ಲಿ 10,000 ಎಕರೆ ಭೂಮಿಯನ್ನು ಸಂರಕ್ಷಿಸುವುದು ಅವರ ಗುರಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

7 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

13 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

17 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

21 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago