Advertisement
MIRROR FOCUS

ನವೋದ್ಯಮಗಳು ನೂತನ ಭಾರತದ ಬೆನ್ನೆಲುಬು

Share

ದೇಶದಲ್ಲಿ ಪ್ರಸ್ತುತ 1 ಲಕ್ಷದ 92 ಸಾವಿರಕ್ಕೂ ಅಧಿಕ ನವೋದ್ಯಮಗಳು(Startups) ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ ಶೇಕಡ 48ರಷ್ಟು ನವೋದ್ಯಮಗಳನ್ನು ಮಹಿಳೆಯರು ಮುನ್ನಡೆಸುತ್ತಿದ್ದು, ಶೇಕಡ 52ರಷ್ಟು ನವೋದ್ಯಮಗಳು ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಸ್ಥಾಪನೆಯಾಗಿರುವುದು ಸಂತಸದಾಯವಾಗಿದ್ದು ನವೋದ್ಯಮಗಳು ನೂತನ ಭಾರತದ ಬೆನ್ನೆಲುಬಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಅವರು ಗುಜರಾತ್ ನ ಗಾಂಧಿನಗರದಲ್ಲಿ ನವೋದ್ಯಮ ಶೃಂಗಸಭೆ 2025 ಉದ್ಘಾಟಿಸಿದರು.  ಪ್ರತಿ ವಲಯದಲ್ಲೂ ನವೋದ್ಯಮಗಳು ವಿನೂತನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ, ನವೋದ್ಯಮಗಳಿಗೆ ಅಗತ್ಯ ಮೂಲಭೂತ ಸೌಕರ್ಯ , ಬ್ಯಾಂಕಿಂಗ್ ನೆರವನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಸಾವಿರ ಕೋಟಿ ರೂಪಾಯಿಗಳ ನಿಧಿಯನ್ನು ಸ್ಥಾಪಿಸಲಾಗಿದೆ. ಮೇಕ್ ಇನ್ ಇಂಡಿಯಾ, ಉತ್ಪಾದನಾ ಆಧಾರಿತ ಸಹಾಯಧನ ಸೇರಿದಂತೆ ಹಲವು ಸೌಲಭ್ಯಗಳು ದೊರೆಯುತ್ತಿವೆ. ಸರಕು ಮತ್ತು ಸೇವಾ ತೆರಿಗೆಗಳನ್ನು ಇಳಿಕೆ ಮಾಡಿರುವುದು ನವೋದ್ಯಮಗಳಿಗೆ ವರದಾನವಾಗಲಿದೆ ಎಂದರು. ಸರ್ಕಾರದ ತೆರಿಗೆ ಸುಧಾರಣೆಗಳು ಪ್ರಾಮಾಣಿಕ ತೆರಿಗೆದಾರರಲ್ಲಿ ವಿಶ್ವಾಸ ಮೂಡಿಸಿವೆ. ಜನರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ತೆರಿಗೆ ವ್ಯವಸ್ಥೆಯಲ್ಲಿ ಅನೇಕ ಸುಧಾರಣೆಗಳನ್ನು ತರಲಾಗಿದೆ. ದೇಶದ ಪ್ರಗತಿಯಲ್ಲಿ ಯುವಜನತೆಯ ಕೊಡುಗೆ ಪ್ರಮುಖವಾಗಿದ್ದು, ನವೋದ್ಯಮಗಳು ನೂತನ ಭಾರತದ ಬೆನ್ನೆಲುಬಾಗಿವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

7 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

8 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

8 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

8 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago