Advertisement
MIRROR FOCUS

ನವೋದ್ಯಮಗಳು ನೂತನ ಭಾರತದ ಬೆನ್ನೆಲುಬು

Share

ದೇಶದಲ್ಲಿ ಪ್ರಸ್ತುತ 1 ಲಕ್ಷದ 92 ಸಾವಿರಕ್ಕೂ ಅಧಿಕ ನವೋದ್ಯಮಗಳು(Startups) ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ ಶೇಕಡ 48ರಷ್ಟು ನವೋದ್ಯಮಗಳನ್ನು ಮಹಿಳೆಯರು ಮುನ್ನಡೆಸುತ್ತಿದ್ದು, ಶೇಕಡ 52ರಷ್ಟು ನವೋದ್ಯಮಗಳು ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಸ್ಥಾಪನೆಯಾಗಿರುವುದು ಸಂತಸದಾಯವಾಗಿದ್ದು ನವೋದ್ಯಮಗಳು ನೂತನ ಭಾರತದ ಬೆನ್ನೆಲುಬಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಅವರು ಗುಜರಾತ್ ನ ಗಾಂಧಿನಗರದಲ್ಲಿ ನವೋದ್ಯಮ ಶೃಂಗಸಭೆ 2025 ಉದ್ಘಾಟಿಸಿದರು.  ಪ್ರತಿ ವಲಯದಲ್ಲೂ ನವೋದ್ಯಮಗಳು ವಿನೂತನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ, ನವೋದ್ಯಮಗಳಿಗೆ ಅಗತ್ಯ ಮೂಲಭೂತ ಸೌಕರ್ಯ , ಬ್ಯಾಂಕಿಂಗ್ ನೆರವನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಸಾವಿರ ಕೋಟಿ ರೂಪಾಯಿಗಳ ನಿಧಿಯನ್ನು ಸ್ಥಾಪಿಸಲಾಗಿದೆ. ಮೇಕ್ ಇನ್ ಇಂಡಿಯಾ, ಉತ್ಪಾದನಾ ಆಧಾರಿತ ಸಹಾಯಧನ ಸೇರಿದಂತೆ ಹಲವು ಸೌಲಭ್ಯಗಳು ದೊರೆಯುತ್ತಿವೆ. ಸರಕು ಮತ್ತು ಸೇವಾ ತೆರಿಗೆಗಳನ್ನು ಇಳಿಕೆ ಮಾಡಿರುವುದು ನವೋದ್ಯಮಗಳಿಗೆ ವರದಾನವಾಗಲಿದೆ ಎಂದರು. ಸರ್ಕಾರದ ತೆರಿಗೆ ಸುಧಾರಣೆಗಳು ಪ್ರಾಮಾಣಿಕ ತೆರಿಗೆದಾರರಲ್ಲಿ ವಿಶ್ವಾಸ ಮೂಡಿಸಿವೆ. ಜನರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ತೆರಿಗೆ ವ್ಯವಸ್ಥೆಯಲ್ಲಿ ಅನೇಕ ಸುಧಾರಣೆಗಳನ್ನು ತರಲಾಗಿದೆ. ದೇಶದ ಪ್ರಗತಿಯಲ್ಲಿ ಯುವಜನತೆಯ ಕೊಡುಗೆ ಪ್ರಮುಖವಾಗಿದ್ದು, ನವೋದ್ಯಮಗಳು ನೂತನ ಭಾರತದ ಬೆನ್ನೆಲುಬಾಗಿವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 days ago