Advertisement
MIRROR FOCUS

ನವೋದ್ಯಮಗಳು ನೂತನ ಭಾರತದ ಬೆನ್ನೆಲುಬು

Share

ದೇಶದಲ್ಲಿ ಪ್ರಸ್ತುತ 1 ಲಕ್ಷದ 92 ಸಾವಿರಕ್ಕೂ ಅಧಿಕ ನವೋದ್ಯಮಗಳು(Startups) ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ ಶೇಕಡ 48ರಷ್ಟು ನವೋದ್ಯಮಗಳನ್ನು ಮಹಿಳೆಯರು ಮುನ್ನಡೆಸುತ್ತಿದ್ದು, ಶೇಕಡ 52ರಷ್ಟು ನವೋದ್ಯಮಗಳು ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಸ್ಥಾಪನೆಯಾಗಿರುವುದು ಸಂತಸದಾಯವಾಗಿದ್ದು ನವೋದ್ಯಮಗಳು ನೂತನ ಭಾರತದ ಬೆನ್ನೆಲುಬಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಅವರು ಗುಜರಾತ್ ನ ಗಾಂಧಿನಗರದಲ್ಲಿ ನವೋದ್ಯಮ ಶೃಂಗಸಭೆ 2025 ಉದ್ಘಾಟಿಸಿದರು.  ಪ್ರತಿ ವಲಯದಲ್ಲೂ ನವೋದ್ಯಮಗಳು ವಿನೂತನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ, ನವೋದ್ಯಮಗಳಿಗೆ ಅಗತ್ಯ ಮೂಲಭೂತ ಸೌಕರ್ಯ , ಬ್ಯಾಂಕಿಂಗ್ ನೆರವನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಸಾವಿರ ಕೋಟಿ ರೂಪಾಯಿಗಳ ನಿಧಿಯನ್ನು ಸ್ಥಾಪಿಸಲಾಗಿದೆ. ಮೇಕ್ ಇನ್ ಇಂಡಿಯಾ, ಉತ್ಪಾದನಾ ಆಧಾರಿತ ಸಹಾಯಧನ ಸೇರಿದಂತೆ ಹಲವು ಸೌಲಭ್ಯಗಳು ದೊರೆಯುತ್ತಿವೆ. ಸರಕು ಮತ್ತು ಸೇವಾ ತೆರಿಗೆಗಳನ್ನು ಇಳಿಕೆ ಮಾಡಿರುವುದು ನವೋದ್ಯಮಗಳಿಗೆ ವರದಾನವಾಗಲಿದೆ ಎಂದರು. ಸರ್ಕಾರದ ತೆರಿಗೆ ಸುಧಾರಣೆಗಳು ಪ್ರಾಮಾಣಿಕ ತೆರಿಗೆದಾರರಲ್ಲಿ ವಿಶ್ವಾಸ ಮೂಡಿಸಿವೆ. ಜನರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ತೆರಿಗೆ ವ್ಯವಸ್ಥೆಯಲ್ಲಿ ಅನೇಕ ಸುಧಾರಣೆಗಳನ್ನು ತರಲಾಗಿದೆ. ದೇಶದ ಪ್ರಗತಿಯಲ್ಲಿ ಯುವಜನತೆಯ ಕೊಡುಗೆ ಪ್ರಮುಖವಾಗಿದ್ದು, ನವೋದ್ಯಮಗಳು ನೂತನ ಭಾರತದ ಬೆನ್ನೆಲುಬಾಗಿವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

14 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

14 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

14 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

21 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago