Advertisement
ಸುದ್ದಿಗಳು

ಬಿಎಸ್​ವೈ ಮಗ, ಉಮೇಶ್ ಕತ್ತಿ ಪುತ್ರ, ಸೋದರನಿಗೆ ಟಿಕೆಟ್; ಶಾ ಪ್ರಕಾರ ಕುಟುಂಬ ರಾಜಕಾರಣ ಎಂದರೇನು?

Share

ಬಿಜೆಪಿ ಕುಟುಂಬ ರಾಜಕಾರಣ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಂದಿದೆ. ಆದ್ರೂ ಈ ಬಾರಿ ಮಾಜಿ ಸಚಿವ ಉಮೇಶ್ ಕತ್ತಿ ಪುತ್ರ, ಸೋದರನಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಇತ್ತ ಆನಂದ್ ಮಾಮನಿ ಪತ್ನಿ ರತ್ನಾ ಮಾಮನಿ, ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸೇರಿದಂತೆ ಹಲವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಬೆಳಗಾವಿ ಲೋಕಸಭಾ ಉಪ ಚುನಾವಣೆ ವೇಳೆ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರಿಗೆ ನೀಡಲಾಗಿತ್ತು. ಆದ್ರೆ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ತಪ್ಪಿತ್ತು. ಟಿಕೆಟ್ ತಪ್ಪಿದ್ದಕ್ಕೆ ನಾವು ಕುಟುಂಬ ರಾಜಕಾರಣ ಮಾಡಲ್ಲ ಎಂದು ಹೇಳಿದ್ದ ಬಿಜೆಪಿ ತೇಜಸ್ವಿ ಸೂರ್ಯ ಅವರಿಗೆ ಅವಕಾಶ ನೀಡಿತ್ತು.

ಕೆಲವರ ಮಕ್ಕಳಿಗೆ ಟಿಕೆಟ್, ಒಂದಿಷ್ಟು ಕುಟುಂಬಗಳಿಗೆ ಯಾಕೆ ಅವಕಾಶ ಇಲ್ಲ. ಹಾಗಾದ್ರೆ ಕುಟುಂಬ ರಾಜಕಾರಣ ಅಥವಾ ಪರಿವಾರವಾದ ಎಂದರೇನು ಎಂಬ ಪ್ರಶ್ನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡಿದ್ದಾರೆ.

ಖಾಸಗಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಅಮಿತ್ ಶಾ ಪರಿವಾರವಾದ ಎಂದರೇನು? ಯಾಕೆ ಕೆಲವರಿಗೆ ಅವಕಾಶ ಸಿಕ್ತು ಎಂಬುದರ ಬಗ್ಗೆ ವಿವರವಾಗಿ ಹೇಳಿದ್ದಾರೆ.

ಅಮಿತ್ ಶಾ ಹೇಳಿದ ವ್ಯಾಖ್ಯಾನ

ಪರಿವಾರವಾದ/ಕುಟುಂಬ ರಾಜಕಾರಣದ ಬಗ್ಗೆ ನಮ್ಮ ಮತ್ತು ನಿಮ್ಮ ನಡುವಿನ ವ್ಯಾಖ್ಯಾನ ಭಿನ್ನವಾಗಿದೆ. ನನ್ನ ಪ್ರಕಾರ ಪರಿವಾರದವಾದ ಅದ್ರೆ ಒಬ್ಬ ವ್ಯಕ್ತಿ ಮುಖ್ಯಮಂತ್ರಿಯಾದ್ರೆ, ನಂತರ ಅತನೇ ಮಗ ಸಿಎಂ ಆಗೋದು. ಒಬ್ಬ ಪಕ್ಷದ ಅಧ್ಯಕ್ಷನಾದ್ರೆ ನಂತರ ಅವನೇ ಮಗನೇ ಆ ಸ್ಥಾನಕ್ಕೆ ಬರೋದು.

ಯಡಿಯೂರಪ್ಪ ನಂತರ ಬಸವರಾಜ್ ಬೊಮ್ಮಾಯಿ ಸಿಎಂ ಆದರು. ಚುನಾವಣೆಗೆ ಸ್ಪರ್ಧೆ ಮಾಡಿದ್ರು ಅಂತ ಅದನ್ನು ಪರಿವಾರವಾದ ಅಥವಾ ಕುಟುಂಬ ರಾಜಕಾರಣ ಎಂದು ಹೇಳಲು ಆಗಲ್ಲ.

ರತ್ನಾ ಮಾಮನಿ, ಬಿಜೆಪಿ ಅಭ್ಯರ್ಥಿ

ಉದಾಹರಣೆಗಳನ್ನ ಮುಂದಿಟ್ಟ ಅಮಿತ್ ಶಾ

ಕಾಂಗ್ರೆಸ್​ನಲ್ಲಿ ಜವಾಹರ್ ಲಾಲ್ ನೆಹರು ಬಳಿಕ ಇಂದಿರಾ ಗಾಂಧಿ ಬಂದರು. ತದನಂತ ರಾಜೀವ್ ಗಾಂಧಿ, ಸೋನಿಯಾ ಗಾಂಧಿ. ಈಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬಂದಿದ್ದಾರೆ. ಇದನ್ನು ಕುಟುಂಬ ರಾಜಕಾರಣ ಎಂದು ಹೇಳುತ್ತೇವೆ. ಮುಲಾಯಂ ಸಿಂಗ್ ಮತ್ತು ಅಖಿಲೇಶ್ ಯಾದವ್ ಹೀಗೆ ಒಂದೇ ಕುಟುಂಬ ಪಕ್ಷದ ಮೇಲೆ ಹಿಡಿತ ಸಾಧಿಸೋದು ಕುಟುಂಬ ರಾಜಕಾರಣ ಆಗುತ್ತದೆ ಎಂದು ಹೇಳುತ್ತಾ ಹಲವು ಉದಾಹರಣೆಗಳನ್ನು ನೀಡಿದರು.

ಪಕ್ಷದ ನಿಯಂತ್ರಣ ಕುಟುಂಬದ ಬಳಿ ಇರಬಾರದು

ಎಲ್​ಕೆ ಅಡ್ವಾಣಿ ಅವರ ಬಳಿಕ ಆ ಸ್ಥಾನಕ್ಕೆ ಮೋದಿ ಅವರು ಬಂದರು. ನಂತರ ನಾನು ಪಕ್ಷದ ಅಧ್ಯಕ್ಷನಾದೆ. ಈಗ ಜೆಪಿ ನಡ್ಡಾ ಅವರು ನಮ್ಮ ಪಕ್ಷದ ಅಧ್ಯಕ್ಷರು. ಮುಂದೆ ನಡ್ಡಾ ಬಳಿಕ ಬೇರೆ ಜನರು ಬರುತ್ತಾರೆ. ಎಲ್ಲಿಯೂ ಒಂದೇ ಕುಟುಂಬದವರು ಪಕ್ಷದ ಅಧ್ಯಕ್ಷರು ಆಗಿಲ್ಲ ಎಂದರು. ಯಾವುದೇ ಪಕ್ಷದ ನಿಯಂತ್ರಣ ಒಂದು ಕುಟುಂಬದ ಬಳಿಯಲ್ಲಿ ಇರಬಾರದು ಎಂದು ಅಭಿಪ್ರಾಯಪಟ್ಟರು.

ಸೋನಿಯಾ ಗಾಂಧಿ

ಒಬ್ಬ ಶಾಸಕನ ಪುತ್ರನಿಗೆ ಚುನಾವಣೆ ಎದುರಿಸುವ ಸಾಮರ್ಥ್ಯ ಇದ್ರೆ ಸ್ಪರ್ಧಿಸಿ ಗೆಲ್ಲಲಿ. ಕರ್ನಾಟಕದಲ್ಲಿ ಕೆಲವರಿಗೆ ಟಿಕೆಟ್ ಸಿಕ್ಕಿದೆ. ಒಂದಿಷ್ಟು ಜನರಿಗೆ ಸಿಕ್ಕಿಲ್ಲ. ಐದು ಜನರಿಗೆ ಸಿಕ್ಕಿದ್ರೆ, 25 ಜನಕ್ಕೆ ಸಿಕ್ಕಿರಲ್ಲ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

19 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

19 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago