Advertisement
ಸುದ್ದಿಗಳು

ಬಿಎಸ್​ವೈ ಮಗ, ಉಮೇಶ್ ಕತ್ತಿ ಪುತ್ರ, ಸೋದರನಿಗೆ ಟಿಕೆಟ್; ಶಾ ಪ್ರಕಾರ ಕುಟುಂಬ ರಾಜಕಾರಣ ಎಂದರೇನು?

Share

ಬಿಜೆಪಿ ಕುಟುಂಬ ರಾಜಕಾರಣ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಂದಿದೆ. ಆದ್ರೂ ಈ ಬಾರಿ ಮಾಜಿ ಸಚಿವ ಉಮೇಶ್ ಕತ್ತಿ ಪುತ್ರ, ಸೋದರನಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಇತ್ತ ಆನಂದ್ ಮಾಮನಿ ಪತ್ನಿ ರತ್ನಾ ಮಾಮನಿ, ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸೇರಿದಂತೆ ಹಲವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಬೆಳಗಾವಿ ಲೋಕಸಭಾ ಉಪ ಚುನಾವಣೆ ವೇಳೆ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರಿಗೆ ನೀಡಲಾಗಿತ್ತು. ಆದ್ರೆ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ತಪ್ಪಿತ್ತು. ಟಿಕೆಟ್ ತಪ್ಪಿದ್ದಕ್ಕೆ ನಾವು ಕುಟುಂಬ ರಾಜಕಾರಣ ಮಾಡಲ್ಲ ಎಂದು ಹೇಳಿದ್ದ ಬಿಜೆಪಿ ತೇಜಸ್ವಿ ಸೂರ್ಯ ಅವರಿಗೆ ಅವಕಾಶ ನೀಡಿತ್ತು.

Advertisement

ಕೆಲವರ ಮಕ್ಕಳಿಗೆ ಟಿಕೆಟ್, ಒಂದಿಷ್ಟು ಕುಟುಂಬಗಳಿಗೆ ಯಾಕೆ ಅವಕಾಶ ಇಲ್ಲ. ಹಾಗಾದ್ರೆ ಕುಟುಂಬ ರಾಜಕಾರಣ ಅಥವಾ ಪರಿವಾರವಾದ ಎಂದರೇನು ಎಂಬ ಪ್ರಶ್ನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡಿದ್ದಾರೆ.

ಖಾಸಗಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಅಮಿತ್ ಶಾ ಪರಿವಾರವಾದ ಎಂದರೇನು? ಯಾಕೆ ಕೆಲವರಿಗೆ ಅವಕಾಶ ಸಿಕ್ತು ಎಂಬುದರ ಬಗ್ಗೆ ವಿವರವಾಗಿ ಹೇಳಿದ್ದಾರೆ.

ಅಮಿತ್ ಶಾ ಹೇಳಿದ ವ್ಯಾಖ್ಯಾನ

ಪರಿವಾರವಾದ/ಕುಟುಂಬ ರಾಜಕಾರಣದ ಬಗ್ಗೆ ನಮ್ಮ ಮತ್ತು ನಿಮ್ಮ ನಡುವಿನ ವ್ಯಾಖ್ಯಾನ ಭಿನ್ನವಾಗಿದೆ. ನನ್ನ ಪ್ರಕಾರ ಪರಿವಾರದವಾದ ಅದ್ರೆ ಒಬ್ಬ ವ್ಯಕ್ತಿ ಮುಖ್ಯಮಂತ್ರಿಯಾದ್ರೆ, ನಂತರ ಅತನೇ ಮಗ ಸಿಎಂ ಆಗೋದು. ಒಬ್ಬ ಪಕ್ಷದ ಅಧ್ಯಕ್ಷನಾದ್ರೆ ನಂತರ ಅವನೇ ಮಗನೇ ಆ ಸ್ಥಾನಕ್ಕೆ ಬರೋದು.

ಯಡಿಯೂರಪ್ಪ ನಂತರ ಬಸವರಾಜ್ ಬೊಮ್ಮಾಯಿ ಸಿಎಂ ಆದರು. ಚುನಾವಣೆಗೆ ಸ್ಪರ್ಧೆ ಮಾಡಿದ್ರು ಅಂತ ಅದನ್ನು ಪರಿವಾರವಾದ ಅಥವಾ ಕುಟುಂಬ ರಾಜಕಾರಣ ಎಂದು ಹೇಳಲು ಆಗಲ್ಲ.

ರತ್ನಾ ಮಾಮನಿ, ಬಿಜೆಪಿ ಅಭ್ಯರ್ಥಿ

ಉದಾಹರಣೆಗಳನ್ನ ಮುಂದಿಟ್ಟ ಅಮಿತ್ ಶಾ

ಕಾಂಗ್ರೆಸ್​ನಲ್ಲಿ ಜವಾಹರ್ ಲಾಲ್ ನೆಹರು ಬಳಿಕ ಇಂದಿರಾ ಗಾಂಧಿ ಬಂದರು. ತದನಂತ ರಾಜೀವ್ ಗಾಂಧಿ, ಸೋನಿಯಾ ಗಾಂಧಿ. ಈಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬಂದಿದ್ದಾರೆ. ಇದನ್ನು ಕುಟುಂಬ ರಾಜಕಾರಣ ಎಂದು ಹೇಳುತ್ತೇವೆ. ಮುಲಾಯಂ ಸಿಂಗ್ ಮತ್ತು ಅಖಿಲೇಶ್ ಯಾದವ್ ಹೀಗೆ ಒಂದೇ ಕುಟುಂಬ ಪಕ್ಷದ ಮೇಲೆ ಹಿಡಿತ ಸಾಧಿಸೋದು ಕುಟುಂಬ ರಾಜಕಾರಣ ಆಗುತ್ತದೆ ಎಂದು ಹೇಳುತ್ತಾ ಹಲವು ಉದಾಹರಣೆಗಳನ್ನು ನೀಡಿದರು.

ಪಕ್ಷದ ನಿಯಂತ್ರಣ ಕುಟುಂಬದ ಬಳಿ ಇರಬಾರದು

ಎಲ್​ಕೆ ಅಡ್ವಾಣಿ ಅವರ ಬಳಿಕ ಆ ಸ್ಥಾನಕ್ಕೆ ಮೋದಿ ಅವರು ಬಂದರು. ನಂತರ ನಾನು ಪಕ್ಷದ ಅಧ್ಯಕ್ಷನಾದೆ. ಈಗ ಜೆಪಿ ನಡ್ಡಾ ಅವರು ನಮ್ಮ ಪಕ್ಷದ ಅಧ್ಯಕ್ಷರು. ಮುಂದೆ ನಡ್ಡಾ ಬಳಿಕ ಬೇರೆ ಜನರು ಬರುತ್ತಾರೆ. ಎಲ್ಲಿಯೂ ಒಂದೇ ಕುಟುಂಬದವರು ಪಕ್ಷದ ಅಧ್ಯಕ್ಷರು ಆಗಿಲ್ಲ ಎಂದರು. ಯಾವುದೇ ಪಕ್ಷದ ನಿಯಂತ್ರಣ ಒಂದು ಕುಟುಂಬದ ಬಳಿಯಲ್ಲಿ ಇರಬಾರದು ಎಂದು ಅಭಿಪ್ರಾಯಪಟ್ಟರು.

ಸೋನಿಯಾ ಗಾಂಧಿ

ಒಬ್ಬ ಶಾಸಕನ ಪುತ್ರನಿಗೆ ಚುನಾವಣೆ ಎದುರಿಸುವ ಸಾಮರ್ಥ್ಯ ಇದ್ರೆ ಸ್ಪರ್ಧಿಸಿ ಗೆಲ್ಲಲಿ. ಕರ್ನಾಟಕದಲ್ಲಿ ಕೆಲವರಿಗೆ ಟಿಕೆಟ್ ಸಿಕ್ಕಿದೆ. ಒಂದಿಷ್ಟು ಜನರಿಗೆ ಸಿಕ್ಕಿಲ್ಲ. ಐದು ಜನರಿಗೆ ಸಿಕ್ಕಿದ್ರೆ, 25 ಜನಕ್ಕೆ ಸಿಕ್ಕಿರಲ್ಲ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

1 hour ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 hour ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

2 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

2 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago