Advertisement
ಸುದ್ದಿಗಳು

ರಾಜ್ಯದ ಐವರು ನೇಕಾರರಿಗೆ ಪ್ರಶಸ್ತಿ ಪ್ರದಾನ – ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ

Share

ಬೆಂಗಳೂರಿನಲ್ಲಿ ನಡೆದ   11ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ  ಕಾರ್ಯಕ್ರಮದಲ್ಲಿ  ಐವರು  ನೇಕಾರರಿಗೆ  ರಾಜ್ಯ ಮಟ್ಟದ  ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕೈಮಗ್ಗ ನೇಕಾರರಾದ ತುಮಕೂರಿನ ಎಂ.ವಿ.ಪ್ರಕಾಶ್, ಚಿತ್ರದುರ್ಗದ ಸುರೇಶ್ ಡಿ,ಎಸ್, ಗದಗದ ತೇಜಸ್ವಿ ಚಿನ್ನೂರ, ಬಾಗಲಕೋಟೆ ಲಕ್ಷ್ಮಣ ಕಕ್ಕಣವರ, ಚಿತ್ರದುರ್ಗದ ಕೆ.ಎಂ. ಬಜ್ಜಪ್ಪ ಈ ಬಾರಿಯ ಪ್ರಶಸ್ತಿಗೆ ಪಾತ್ರರಾದರು.

Advertisement

ಈ ಸಂದರ್ಭ ಮಾತನಾಡಿದ ಶಾಸಕ ರಿಜ್ವಾನ್  ಅರ್ಷದ್, ಸ್ವಾತಂತ್ರ ಚಳವಳಿಯ ವೇಳೆ ಮಹಾತ್ಮಗಾಂಧಿಯವರು ಸ್ವದೇಶಿ  ಚಳವಳಿ ಸಮಯದಲ್ಲಿ   ವಿದೇಶಿ ವಸ್ತುಗಳ ಬಹಿಷ್ಕಾರ, ದೇಶಿ ವಸ್ತುಗಳ ಬಳಕೆಗೆಗೆ  ಕರೆ  ನೀಡಿದರು. ಖಾದಿ ವಸ್ತುಗಳು ಕೇವಲ ಬಟ್ಟೆ ಮಾತ್ರವಲ್ಲ ಸ್ವಾತಂತ್ರ್ಯ ಮತ್ತು ಹೋರಾಟದ ಪ್ರತೀಕ. ಇದರ ಹಿಂದೆ ನೇಕಾರರ ಕೊಡುಗೆ ಸಾಕಷ್ಟಿದೆ ಎಂದು ತಿಳಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ, ಖಾದಿ ವಸ್ತ್ರಗಳು ಭಾರತೀಯರಿಗೆ ಅಂತಾರಾಷ್ಟ್ರೀಯ ಗುರುತು ನೀಡಿವೆ. ವಿದೇಶಗಳು ಭಾರತೀಯರನ್ನು ಖಾದಿ ಉತ್ಪನ್ನಗಳ ಮೂಲಕ ಗುರುತಿಸುತ್ತಾರೆ. ಪಾರಂಪರಿಕ ನೇಕಾರ ವೃತ್ತಿಯನ್ನು ಸಂರಕ್ಷಿಸುವ ಮೂಲಕ ಈ ಐತಿಹಾಸಿಕ ಮಹತ್ವವನ್ನು ಉಳಿಸಿಕೊಳ್ಳಬೇಕು ಎಂದರು.

ಪ್ರಶಸ್ತಿ ಪುರಸ್ಕೃತ ನೇಕಾರ  ಕೆ.ಎಂ. ಬಜ್ಜಪ್ಪ ಕರಕುಶಲ ಅಭಿವೃದ್ದಿ ನಿಗಮದ ಪ್ರೋತ್ಸಾಹ ಮತ್ತು ಸಹಕಾರದಿಂದ ಕಂಬಳಿ ಮತ್ತು ಕೈಮಗ್ಗ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು ಎಂದು ತಿಳಿಸಿದರು. ಕರ್ನಾಟಕ ಉಣ್ಣೆ ಮತ್ತು ಖಾದಿಯೇತರ ಕೈಮಗ್ಗ ನೇಕಾರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನಪ್ಪ, ಪ್ರಶಸ್ತಿ ನೀಡಿ ಗೌರವಿಸಿರುವುದು ನಶಿಸಿಹೋಗುತ್ತಿರುವ ಪಾರಂಪರಿಕೆ ನೇಕಾರ ವೃತ್ತಿಗೆ ನೀಡಿದ ಪ್ರೋತ್ಸಾಹ ಇದಾಗಿದೆ ಎಂದರು.

ಕಾರ್ಯಕ್ರಮದಲ್ಲಿ  ಮಾಜಿ ಶಾಸಕ ಎಂ.ಡಿ.ಲಕ್ಷ್ಮಿ ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

5 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

5 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

21 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

21 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

21 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

22 hours ago