ರಾಜ್ಯ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ(ಫೆ.17) ಬಜೆಟ್ ಮಂಡಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಜನತೆ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ, ಗ್ರಾಮೀಣಾಭಿವೃದ್ಧಿ ಕಡೆಗೂ ಕೊಡುಗೆಗಳ ನಿರೀಕ್ಷೆ ಇದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಚೊಚ್ಚಲ ಬಜೆಟ್ ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ ಮೀಸಲಿಟ್ಟಿದ್ದರು. ರೈತ ಶಕ್ತಿ ಸೇರಿದಂತೆ ರೈತರಿಗೆ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದರು. ಗರಿಷ್ಟ 5 ಎಕರೆಗೆ ಒಳಪಟ್ಟು ಎಕರೆಗೆ 250 ರೂಪಾಯಿ ಡೀಸೆಲ್ ಸಬ್ಸಿಡಿಯನ್ನು ಸಹ ಘೋಷಿಸಿದ್ದರು. ಈ ಬಾರಿಯೂ ಕೂಡ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಇತ್ತೀಚೆಗೆ ಘೋಷಿಸಿದ್ದರು. ಹೀಗಾಗಿ ಈ ಬಾರಿ ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರದಲ್ಲಿ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…