ರಾಜ್ಯ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ(ಫೆ.17) ಬಜೆಟ್ ಮಂಡಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಜನತೆ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ, ಗ್ರಾಮೀಣಾಭಿವೃದ್ಧಿ ಕಡೆಗೂ ಕೊಡುಗೆಗಳ ನಿರೀಕ್ಷೆ ಇದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಚೊಚ್ಚಲ ಬಜೆಟ್ ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ ಮೀಸಲಿಟ್ಟಿದ್ದರು. ರೈತ ಶಕ್ತಿ ಸೇರಿದಂತೆ ರೈತರಿಗೆ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದರು. ಗರಿಷ್ಟ 5 ಎಕರೆಗೆ ಒಳಪಟ್ಟು ಎಕರೆಗೆ 250 ರೂಪಾಯಿ ಡೀಸೆಲ್ ಸಬ್ಸಿಡಿಯನ್ನು ಸಹ ಘೋಷಿಸಿದ್ದರು. ಈ ಬಾರಿಯೂ ಕೂಡ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಇತ್ತೀಚೆಗೆ ಘೋಷಿಸಿದ್ದರು. ಹೀಗಾಗಿ ಈ ಬಾರಿ ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರದಲ್ಲಿ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…