Advertisement
ಸುದ್ದಿಗಳು

ರಾಜ್ಯ ವಿಧಾನಸಭಾ ಚುನಾವಣೆಗೆ ಕೌಂಟ್ ಡೌನ್‌ ಶುರು | ತಕ್ಷಣದಿಂದ ಕಾರ್ಯಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಸೂಚನೆ |

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಚುನಾವಣೆ ಘೋಷಣೆಗೂ ಮುನ್ನವೇ ಕಳೆದ ಎರಡು ಮೂರು ತಿಂಗಳಿಂದ ಜನಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ದಿನ ಹತ್ತಿರ ಬರುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಓಡಾಟವೂ ಶುರುವಾಗಿದ್ದು, ಮಧ್ಯೆ ರಾಜ್ಯ ಚುನಾವಣಾ ಆಯೋಗವು  ರಾಜಕಾರಣಿಗಳಿಗೆ ಮತ್ತಷ್ಟು ಟೆನ್ಶನ್ ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಬೆರಳೆಣಿಕೆಯ ದಿನಗಳು ಮಾತ್ರ ಬಾಕಿಯಿದ್ದು, ಯಾವ ಕ್ಷಣದಲ್ಲಾದರೂ ನೀತಿ ಸಂಹಿತೆ ಘೋಷಣೆ ಆಗಬಹುದು ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. ಈ ಬಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ನೋಟಿಫಿಕೇಶನ್ ಕಳಿಸಿರುವ ರಾಜ್ಯ ಚುನಾವಣಾ ಆಯೋಗ, ಈಗಿನಿಂದ ಯಾವುದೇ ಕ್ಷಣದಲ್ಲೂ ಚುನಾವಣಾ ಘೋಷಣೆ ಆಗುವ ಸಾಧ್ಯತೆ ಇದ್ದು, ತಕ್ಷಣ ಎಲ್ಲದಕ್ಕೂ ಸಿದ್ಧರಾಗಿ ಇರುವಂತೆ ಸೂಚನೆ ನೀಡಿದೆ.

ಚುನಾವಣಾ ಆಯೋಗದ ಆದೇಶದಲ್ಲಿ ಏನಿದೆ? : ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ‘ಕರ್ನಾಟಕ ರಾಜ್ಯ ವಿಧಾನಸಭೆಗೆ ಏಪ್ರಿಲ್ ಮತ್ತು ಮೇ ತಿಂಗಳ ನಡುವೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗದಿಂದ ಈಗಿನಿಂದ ಯಾವ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಆಗಬಹುದು. ಹೀಗಾಗಿ ಕೆಲವು ಮಾಡಲೇಬೇಕಾದ ಚುನಾವಣಾ ಪೂರ್ವ ಸಿದ್ಧತೆಯನ್ನು ಕಡ್ಡಾಯವಾಗಿ ಚುನಾವಣೆ ಘೋಷಣೆಗೆ ಮುನ್ನವೇ ಮಾಡಿ ಮುಗಿಸಬೇಕು’ ಎಂದು ಸೂಚಿಸಲಾಗಿದೆ.

ಅಲ್ಲದೇ, ಇದರೊಂದಿಗೆ ಚುನಾವಣಾ ನೀತಿ ಸಂಹಿತೆಯ ಮಾದರಿ ಜಾರಿ ಸ್ವರೂಪವನ್ನು ಲಗತ್ತಿಸಲಾಗಿದ್ದು, ಚುನಾವಣೆ ಘೋಷಣೆಯಾದ ತತ್‌ಕ್ಷಣದಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಇನ್ನು ಮಾರ್ಚ್‌ 27 ಅಥವಾ 28ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ, ಈಗಾಗಲೇ ಒಂದು ಹಂತದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಚುನಾವಣಾ ಪೂರ್ವ ತಯಾರಿಗಳನ್ನು ಮಾಡಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

4 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

4 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago