ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ

July 26, 2024
3:33 PM

ಅರಣ್ಯದಂಚಿನಲ್ಲಿ(Forest) ಬದುಕುವ ನಾಗರೀಕರು(publics) ಅನೇಕ ಸಮಸ್ಯೆಗಳನ್ನು(problems) ಅನುಭವಿಸುತ್ತಿದ್ದಾರೆ. ಇದಕ್ಕೆ ಸರ್ಕಾರವೇ(govt) ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೆಕಾಗುತ್ತದೆ. ಇದೀಗ ಅನುಸೂಚಿತ ಬುಡಕಟ್ಟು(tribal) ಜನರಿಗೆ ಸಿಗುವ ಸವಲತ್ತುಗಳು(facility) ಇತರೆ ಅರಣ್ಯವಾಸಿಗಳಿಗೂ(Forest dweller) ಸಿಗುವಂತೆ ಮಾಡಲು ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ(Amendment to Forest Rights Act)  ತರಬೇಕು ಎಂದು ಕೇಂದ್ರ ಸರ್ಕಾರವನ್ನು(central govt) ಕೋರುವ ನಿರ್ಣಯವನ್ನು ರಾಜ್ಯ ಸರ್ಕಾರ(state govt) ಅಂಗೀಕರಿಸಿದೆ. ಅರಣ್ಯ ಸಚಿವ(forest minister) ಈಶ್ವರ್ ಖಂಡ್ರೆ(Eshwar khandre) ಮಂಡಿಸಿದ ನಿರ್ಣಯ ವಿಧಾನಮಂಡಲದ ಉಭಯ ಸದನಗಳಲ್ಲೂ  ಅಂಗೀಕಾರ ಪಡೆಯಿತು.

ಅನುಸೂಚಿತ ಬುಡಕಟ್ಟುಗಳು ಮತ್ತು ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006ಕ್ಕೆ ತಿದ್ದುಪಡಿ ತರುವ ಮೂಲಕ ಸವಲತ್ತುಗಳನ್ನು ಇತರೆ ಅರಣ್ಯವಾಸಿಗಳಿಗೂ ದೊರಕಿಸಲು ಸಹಕರಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಿರ್ಣಯ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

Advertisement

2006ರಲ್ಲಿ ಜಾರಿಗೆ ತಂದು, 2008ರಲ್ಲಿ ನಿಯಮಗಳನ್ನು ರೂಪಿಸಿದ ಫಲವಾಗಿ 2005ರ ಡಿಸೆಂಬರ್ 13ಕ್ಕೂ ಮೊದಲು ಜೀವನೋಪಾಯಕ್ಕಾಗಿ ಅರಣ್ಯದಲ್ಲಿ ವಾಸಿಸುತ್ತಿದ್ದ ಅನುಸೂಚಿತ ಬುಡಕಟ್ಟು ಜನರಿಗೆ ಅರಣ್ಯ ಹಕ್ಕು ಲಭಿಸುತ್ತಿದೆ. ಆದರೆ, ಅರಣ್ಯ ಉತ್ಪನ್ನಗಳನ್ನೇ ನಂಬಿಕೊಂಡು ಹಲವು ತಲೆಮಾರುಗಳಿಂದ ಅರಣ್ಯದಲ್ಲಿ ಬದುಕು ಕಟ್ಟಿಕೊಂಡಿರುವ ಇತರ ಸಮುದಾಯದ ಜನರಿಗೆ ಅರಣ್ಯ ಕಾಯ್ದೆಯ ಫಲ ದೊರೆತಿಲ್ಲ. ಅದಕ್ಕೆ ಕಾಯ್ದೆಯಲ್ಲಿನ ಕೆಲ ನಿಯಮಗಳು ಅಡ್ಡಿಯಾಗಿವೆ. ಅರಣ್ಯವಾಸಿಗಳೆಂದು ಸಾಬೀತು ಮಾಡಲು 75 ವರ್ಷಗಳ ಕಾಲ ಅವರ ಪೂರ್ವಜರು ಅರಣ್ಯದಲ್ಲೇ ಇದ್ದರು ಎಂಬುವುದನ್ನು ಸಾಬೀತುಪಡಿಸುವುದು ಅಸಾಧ್ಯ ಎಂದು ಸಚಿವರು ವಿವರಿಸಿದ್ದಾರೆ.

ಅರಣ್ಯ ಹಕ್ಕು ಕಾಯ್ದೆಯ ಕೆಲ ನಿಯಮಗಳಿಂದಾಗಿ ರಾಜ್ಯದ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರಿಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror