Advertisement
MIRROR FOCUS

ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ

Share

ಅರಣ್ಯದಂಚಿನಲ್ಲಿ(Forest) ಬದುಕುವ ನಾಗರೀಕರು(publics) ಅನೇಕ ಸಮಸ್ಯೆಗಳನ್ನು(problems) ಅನುಭವಿಸುತ್ತಿದ್ದಾರೆ. ಇದಕ್ಕೆ ಸರ್ಕಾರವೇ(govt) ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೆಕಾಗುತ್ತದೆ. ಇದೀಗ ಅನುಸೂಚಿತ ಬುಡಕಟ್ಟು(tribal) ಜನರಿಗೆ ಸಿಗುವ ಸವಲತ್ತುಗಳು(facility) ಇತರೆ ಅರಣ್ಯವಾಸಿಗಳಿಗೂ(Forest dweller) ಸಿಗುವಂತೆ ಮಾಡಲು ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ(Amendment to Forest Rights Act)  ತರಬೇಕು ಎಂದು ಕೇಂದ್ರ ಸರ್ಕಾರವನ್ನು(central govt) ಕೋರುವ ನಿರ್ಣಯವನ್ನು ರಾಜ್ಯ ಸರ್ಕಾರ(state govt) ಅಂಗೀಕರಿಸಿದೆ. ಅರಣ್ಯ ಸಚಿವ(forest minister) ಈಶ್ವರ್ ಖಂಡ್ರೆ(Eshwar khandre) ಮಂಡಿಸಿದ ನಿರ್ಣಯ ವಿಧಾನಮಂಡಲದ ಉಭಯ ಸದನಗಳಲ್ಲೂ  ಅಂಗೀಕಾರ ಪಡೆಯಿತು.

ಅನುಸೂಚಿತ ಬುಡಕಟ್ಟುಗಳು ಮತ್ತು ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006ಕ್ಕೆ ತಿದ್ದುಪಡಿ ತರುವ ಮೂಲಕ ಸವಲತ್ತುಗಳನ್ನು ಇತರೆ ಅರಣ್ಯವಾಸಿಗಳಿಗೂ ದೊರಕಿಸಲು ಸಹಕರಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಿರ್ಣಯ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

2006ರಲ್ಲಿ ಜಾರಿಗೆ ತಂದು, 2008ರಲ್ಲಿ ನಿಯಮಗಳನ್ನು ರೂಪಿಸಿದ ಫಲವಾಗಿ 2005ರ ಡಿಸೆಂಬರ್ 13ಕ್ಕೂ ಮೊದಲು ಜೀವನೋಪಾಯಕ್ಕಾಗಿ ಅರಣ್ಯದಲ್ಲಿ ವಾಸಿಸುತ್ತಿದ್ದ ಅನುಸೂಚಿತ ಬುಡಕಟ್ಟು ಜನರಿಗೆ ಅರಣ್ಯ ಹಕ್ಕು ಲಭಿಸುತ್ತಿದೆ. ಆದರೆ, ಅರಣ್ಯ ಉತ್ಪನ್ನಗಳನ್ನೇ ನಂಬಿಕೊಂಡು ಹಲವು ತಲೆಮಾರುಗಳಿಂದ ಅರಣ್ಯದಲ್ಲಿ ಬದುಕು ಕಟ್ಟಿಕೊಂಡಿರುವ ಇತರ ಸಮುದಾಯದ ಜನರಿಗೆ ಅರಣ್ಯ ಕಾಯ್ದೆಯ ಫಲ ದೊರೆತಿಲ್ಲ. ಅದಕ್ಕೆ ಕಾಯ್ದೆಯಲ್ಲಿನ ಕೆಲ ನಿಯಮಗಳು ಅಡ್ಡಿಯಾಗಿವೆ. ಅರಣ್ಯವಾಸಿಗಳೆಂದು ಸಾಬೀತು ಮಾಡಲು 75 ವರ್ಷಗಳ ಕಾಲ ಅವರ ಪೂರ್ವಜರು ಅರಣ್ಯದಲ್ಲೇ ಇದ್ದರು ಎಂಬುವುದನ್ನು ಸಾಬೀತುಪಡಿಸುವುದು ಅಸಾಧ್ಯ ಎಂದು ಸಚಿವರು ವಿವರಿಸಿದ್ದಾರೆ.

ಅರಣ್ಯ ಹಕ್ಕು ಕಾಯ್ದೆಯ ಕೆಲ ನಿಯಮಗಳಿಂದಾಗಿ ರಾಜ್ಯದ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರಿಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

19 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

21 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

21 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago