ಅರಣ್ಯದಂಚಿನಲ್ಲಿ(Forest) ಬದುಕುವ ನಾಗರೀಕರು(publics) ಅನೇಕ ಸಮಸ್ಯೆಗಳನ್ನು(problems) ಅನುಭವಿಸುತ್ತಿದ್ದಾರೆ. ಇದಕ್ಕೆ ಸರ್ಕಾರವೇ(govt) ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೆಕಾಗುತ್ತದೆ. ಇದೀಗ ಅನುಸೂಚಿತ ಬುಡಕಟ್ಟು(tribal) ಜನರಿಗೆ ಸಿಗುವ ಸವಲತ್ತುಗಳು(facility) ಇತರೆ ಅರಣ್ಯವಾಸಿಗಳಿಗೂ(Forest dweller) ಸಿಗುವಂತೆ ಮಾಡಲು ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ(Amendment to Forest Rights Act) ತರಬೇಕು ಎಂದು ಕೇಂದ್ರ ಸರ್ಕಾರವನ್ನು(central govt) ಕೋರುವ ನಿರ್ಣಯವನ್ನು ರಾಜ್ಯ ಸರ್ಕಾರ(state govt) ಅಂಗೀಕರಿಸಿದೆ. ಅರಣ್ಯ ಸಚಿವ(forest minister) ಈಶ್ವರ್ ಖಂಡ್ರೆ(Eshwar khandre) ಮಂಡಿಸಿದ ನಿರ್ಣಯ ವಿಧಾನಮಂಡಲದ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಿತು.
ಅನುಸೂಚಿತ ಬುಡಕಟ್ಟುಗಳು ಮತ್ತು ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006ಕ್ಕೆ ತಿದ್ದುಪಡಿ ತರುವ ಮೂಲಕ ಸವಲತ್ತುಗಳನ್ನು ಇತರೆ ಅರಣ್ಯವಾಸಿಗಳಿಗೂ ದೊರಕಿಸಲು ಸಹಕರಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಿರ್ಣಯ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
2006ರಲ್ಲಿ ಜಾರಿಗೆ ತಂದು, 2008ರಲ್ಲಿ ನಿಯಮಗಳನ್ನು ರೂಪಿಸಿದ ಫಲವಾಗಿ 2005ರ ಡಿಸೆಂಬರ್ 13ಕ್ಕೂ ಮೊದಲು ಜೀವನೋಪಾಯಕ್ಕಾಗಿ ಅರಣ್ಯದಲ್ಲಿ ವಾಸಿಸುತ್ತಿದ್ದ ಅನುಸೂಚಿತ ಬುಡಕಟ್ಟು ಜನರಿಗೆ ಅರಣ್ಯ ಹಕ್ಕು ಲಭಿಸುತ್ತಿದೆ. ಆದರೆ, ಅರಣ್ಯ ಉತ್ಪನ್ನಗಳನ್ನೇ ನಂಬಿಕೊಂಡು ಹಲವು ತಲೆಮಾರುಗಳಿಂದ ಅರಣ್ಯದಲ್ಲಿ ಬದುಕು ಕಟ್ಟಿಕೊಂಡಿರುವ ಇತರ ಸಮುದಾಯದ ಜನರಿಗೆ ಅರಣ್ಯ ಕಾಯ್ದೆಯ ಫಲ ದೊರೆತಿಲ್ಲ. ಅದಕ್ಕೆ ಕಾಯ್ದೆಯಲ್ಲಿನ ಕೆಲ ನಿಯಮಗಳು ಅಡ್ಡಿಯಾಗಿವೆ. ಅರಣ್ಯವಾಸಿಗಳೆಂದು ಸಾಬೀತು ಮಾಡಲು 75 ವರ್ಷಗಳ ಕಾಲ ಅವರ ಪೂರ್ವಜರು ಅರಣ್ಯದಲ್ಲೇ ಇದ್ದರು ಎಂಬುವುದನ್ನು ಸಾಬೀತುಪಡಿಸುವುದು ಅಸಾಧ್ಯ ಎಂದು ಸಚಿವರು ವಿವರಿಸಿದ್ದಾರೆ.
ಅರಣ್ಯ ಹಕ್ಕು ಕಾಯ್ದೆಯ ಕೆಲ ನಿಯಮಗಳಿಂದಾಗಿ ರಾಜ್ಯದ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರಿಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.
– ಅಂತರ್ಜಾಲ ಮಾಹಿತಿ
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…