ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲೇ ಬೇಕು. ಇದು ಸುಪ್ರೀಂ ಕೋರ್ಟ್ ಆದೇಶ. ಈ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ತಮಿಳುನಾಡಿಗೆ ಕಾವೇರು ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೆ ವಜಾ ಮಾಡುತ್ತಾರೆ. ಯಾವುದೇ ಸರ್ಕಾರ ಇದ್ದರೂ ಸಹ ನೀರು ಬಿಡುತ್ತಿದ್ದರು ಎಂದು ಹೇಳಿದ್ದಾರೆ. ಈ ಮೂಲಕ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಬೇಕು. ಮಾಡುತ್ತೇವೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಹಲವು ದಿನಗಳಿಂದ ಬೇಡಿಕೊಂಡರೂ ಮೋದಿ ಸಮಯ ನೀಡುತ್ತಿಲ್ಲ. ಪ್ರಧಾನಮಂತ್ರಿ ಮೋದಿ ಎರಡು ರಾಜ್ಯಗಳನ್ನು ಚರ್ಚೆಗೆ ಕರೆಯಬೇಕಿತ್ತು. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ದಟತನದಿಂದ ವರ್ತಿಸುತ್ತಿದ್ದಾರೆ. ತಮಿಳುನಾಡು ವಿರುದ್ಧ ಆರೋಪ ಮಾಡಿದರೆ ಯಾವ ಪ್ರಯೋಜನವಿಲ್ಲ. ಅವರ ಹಕ್ಕು ಅವರು ಕೇಳುತ್ತಿದ್ದಾರೆ, ನಮ್ಮ ಹಕ್ಕು ನಾವು ಕೇಳುತ್ತಿದ್ದೇವೆ ಎಂದರು.
ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಯರಿಸಬೇಕು. ಆದರೆ, ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕೆ ಕಾವೇರಿ ವಿವಾದದಲ್ಲಿ ಮಧ್ಯಪ್ರವೇಶ ಮಾಡುತ್ತಿಲ್ಲ. ಕಾವೇರಿ ವಿವಾದ ಬಗೆಯರಿಸುವುದು ಅವರಿಗೆ ಬೇಕಿಲ್ಲ. ಬದಲಿಗೆ ರಾಜ್ಯಗಳು ಕಿತ್ತಾಡಬೇಕು ಮೋದಿ ಸರ್ವಾಧಿಕಾರಿಯಾಗಿ ಇರಬೇಕು ಎನ್ನುವ ಭಾವನೆ ಹೊಂದಿದ್ದಾರೆ ಎಂದು ಕಿಡಿಕಾರಿದರು.
ಮೂಲ : ಅಂತರ್ಜಾಲ ಮಾಹಿತಿ
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…