Advertisement
MIRROR FOCUS

ರಾಜ್ಯ ಸರ್ಕಾರದ ಬೆಲೆ ಏರಿಕೆ ಕಣ್ಣು ಖಾಸಗಿ ಶಾಲೆಗಳ ಮೇಲೆ | ಬೆಲೆ ಏರಿಕೆ ಕ್ರಮಕ್ಕೆ ಸರ್ಕಾರದ ವಿರುದ್ಧ ರುಪ್ಸಾ ಗರಂ | ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ…?

Share

ಖಾಸಗಿ ಶಾಲೆಗಳು ಹಾಗು ಅನುದಾನಿತ ಶಾಲೆಗಳ  ಮೇಲೆ ಸರ್ಕಾರದ ಕಣ್ಣು ಬಿದ್ದಂತಿದೆ. ಲೈಸೆನ್ಸ್‌ ನವೀಕರಣ ಸೇರಿದಂತೆ ಫೈರ್‌ ಸೇಫ್ಟಿ ಫೀಸ್‌ ಕೂಡ ದುಬಾರಿ ಆಗಿದೆ. ಇದು ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆಯೂ ಹೆಚ್ಚಾಗಿದೆ. 

Advertisement
Advertisement

ಈ ಮೊದಲು ಶಾಲೆಯ ಫೈರ್ ಸೇಫ್ಟಿ ನವೀಕರಣ ಶುಲ್ಕ ಒಂದು ಸಾವಿರವಿತ್ತು. ಇದೀಗ ಆ ಶುಲ್ಕವನ್ನು ಬರೋಬ್ಬರಿ 25,500 ರೂಪಾಯಿಗೆ ಏರಿಕೆ ಮಾಡಿದೆ. ಹೊಸ ಶಾಲೆ ಅನುಮತಿಗೆ 40 ರಿಂದ 80 ಸಾವಿರ ಇತ್ತು. ಇದೀಗ ಲಕ್ಷ ದಾಟುತ್ತಿದೆ. ಎಲ್ಲಾ ನಿಯಮ ಪಾಲಿಸಿ ಅನುಮತಿ ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷ ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮ ರೂಪಿಸಿದೆ. ಈ ಬಗ್ಗೆ ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

Advertisement

ಎಲ್ಲಾ ನಿಯಮ ಪಾಲಿಸಿ ಅನುಮತಿ ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷ ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮ ರೂಪಿಸಿದೆ. ರಾಜ್ಯದಲ್ಲಿ 6 ಸಾವಿರ ಅನುದಾನಿತ ಶಾಲೆಗಳು, 18 ಸಾವಿರ ಖಾಸಗಿ ಶಾಲೆಗಳಿವೆ. ಬೆಂಗಳೂರಿನಲ್ಲಿ 6 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿವೆ. ಇದರಲ್ಲಿರುವ ಜಾಗದಲ್ಲಿ ಬಜೆಟ್ ಖಾಸಗಿ ಶಾಲೆಗಳಿಗೆ ಫೈರ್ ಸೇಫ್ಟಿ ನಿಯಮ ಪಾಲನೆ ಕಷ್ಟಸಾಧ್ಯ. ಇದೇ ಕಾನೂನು ಮುಂದಿಟ್ಟುಕೊಂಡು ಶಾಲೆಗಳಿಂದ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆಯಿದೆ. ಶಿಕ್ಷಣ ಇಲಾಖೆ ಹೊಸ ನಿಯಮ ಹಾಗೂ ವಿವಿಧ ಶುಲ್ಕಗಳ ದರವನ್ನು ಹೆಚ್ಚಳ ಮಾಡಿರುವುದು ಖಾಸಗಿ ಶಾಲೆಗಳಿಗೆ ನುಂಗಲಾರದ ತುತ್ತಾಗಿದೆ. ಸಿಬಿಎಸ್ಇ ಶಾಲೆಗಳಿಗೆ 5 ವರ್ಷಕ್ಕೊಮ್ಮೆ ನವೀಕರಣ ಇದ್ರೆ, ರಾಜ್ಯ ಪಠ್ಯಕ್ರಮದ ಶಾಲೆಗಳು ಪ್ರತಿವರ್ಷ ನವೀಕರಣದ ಕಿರುಕುಳ ನೀಡಲಾಗುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…

8 hours ago

ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ

ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…

8 hours ago

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ …

9 hours ago

ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ

ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ  ಧನ ಸಹಾಯ ನೀಡುವುದು ಮತ್ತು ರೈತರ…

9 hours ago

ಗ್ರಾಮೀಣ ಪರಿಸರದಲ್ಲಿ ಕೃಷಿ ಜ್ಞಾನಾನುಭವದ ಜೀವಂತ ಸಾಕ್ಷಿ ಬದನಾಜೆ ಶಂಕರ ಭಟ್

ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…

10 hours ago

ಹವಾಮಾನ ವರದಿ | 18-09-2024 | ದೂರವಾದ ಮಳೆ | ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ |

ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.

17 hours ago