Advertisement
MIRROR FOCUS

ರಾಜ್ಯ ಸರ್ಕಾರದ ಬೆಲೆ ಏರಿಕೆ ಕಣ್ಣು ಖಾಸಗಿ ಶಾಲೆಗಳ ಮೇಲೆ | ಬೆಲೆ ಏರಿಕೆ ಕ್ರಮಕ್ಕೆ ಸರ್ಕಾರದ ವಿರುದ್ಧ ರುಪ್ಸಾ ಗರಂ | ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ…?

Share

ಖಾಸಗಿ ಶಾಲೆಗಳು ಹಾಗು ಅನುದಾನಿತ ಶಾಲೆಗಳ  ಮೇಲೆ ಸರ್ಕಾರದ ಕಣ್ಣು ಬಿದ್ದಂತಿದೆ. ಲೈಸೆನ್ಸ್‌ ನವೀಕರಣ ಸೇರಿದಂತೆ ಫೈರ್‌ ಸೇಫ್ಟಿ ಫೀಸ್‌ ಕೂಡ ದುಬಾರಿ ಆಗಿದೆ. ಇದು ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆಯೂ ಹೆಚ್ಚಾಗಿದೆ. 

ಈ ಮೊದಲು ಶಾಲೆಯ ಫೈರ್ ಸೇಫ್ಟಿ ನವೀಕರಣ ಶುಲ್ಕ ಒಂದು ಸಾವಿರವಿತ್ತು. ಇದೀಗ ಆ ಶುಲ್ಕವನ್ನು ಬರೋಬ್ಬರಿ 25,500 ರೂಪಾಯಿಗೆ ಏರಿಕೆ ಮಾಡಿದೆ. ಹೊಸ ಶಾಲೆ ಅನುಮತಿಗೆ 40 ರಿಂದ 80 ಸಾವಿರ ಇತ್ತು. ಇದೀಗ ಲಕ್ಷ ದಾಟುತ್ತಿದೆ. ಎಲ್ಲಾ ನಿಯಮ ಪಾಲಿಸಿ ಅನುಮತಿ ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷ ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮ ರೂಪಿಸಿದೆ. ಈ ಬಗ್ಗೆ ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ಎಲ್ಲಾ ನಿಯಮ ಪಾಲಿಸಿ ಅನುಮತಿ ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷ ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮ ರೂಪಿಸಿದೆ. ರಾಜ್ಯದಲ್ಲಿ 6 ಸಾವಿರ ಅನುದಾನಿತ ಶಾಲೆಗಳು, 18 ಸಾವಿರ ಖಾಸಗಿ ಶಾಲೆಗಳಿವೆ. ಬೆಂಗಳೂರಿನಲ್ಲಿ 6 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿವೆ. ಇದರಲ್ಲಿರುವ ಜಾಗದಲ್ಲಿ ಬಜೆಟ್ ಖಾಸಗಿ ಶಾಲೆಗಳಿಗೆ ಫೈರ್ ಸೇಫ್ಟಿ ನಿಯಮ ಪಾಲನೆ ಕಷ್ಟಸಾಧ್ಯ. ಇದೇ ಕಾನೂನು ಮುಂದಿಟ್ಟುಕೊಂಡು ಶಾಲೆಗಳಿಂದ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆಯಿದೆ. ಶಿಕ್ಷಣ ಇಲಾಖೆ ಹೊಸ ನಿಯಮ ಹಾಗೂ ವಿವಿಧ ಶುಲ್ಕಗಳ ದರವನ್ನು ಹೆಚ್ಚಳ ಮಾಡಿರುವುದು ಖಾಸಗಿ ಶಾಲೆಗಳಿಗೆ ನುಂಗಲಾರದ ತುತ್ತಾಗಿದೆ. ಸಿಬಿಎಸ್ಇ ಶಾಲೆಗಳಿಗೆ 5 ವರ್ಷಕ್ಕೊಮ್ಮೆ ನವೀಕರಣ ಇದ್ರೆ, ರಾಜ್ಯ ಪಠ್ಯಕ್ರಮದ ಶಾಲೆಗಳು ಪ್ರತಿವರ್ಷ ನವೀಕರಣದ ಕಿರುಕುಳ ನೀಡಲಾಗುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

2 minutes ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

9 minutes ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

15 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

15 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

15 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

15 hours ago