Advertisement
MIRROR FOCUS

ರಾಜ್ಯ ಸರ್ಕಾರದ ಬೆಲೆ ಏರಿಕೆ ಕಣ್ಣು ಖಾಸಗಿ ಶಾಲೆಗಳ ಮೇಲೆ | ಬೆಲೆ ಏರಿಕೆ ಕ್ರಮಕ್ಕೆ ಸರ್ಕಾರದ ವಿರುದ್ಧ ರುಪ್ಸಾ ಗರಂ | ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ…?

Share

ಖಾಸಗಿ ಶಾಲೆಗಳು ಹಾಗು ಅನುದಾನಿತ ಶಾಲೆಗಳ  ಮೇಲೆ ಸರ್ಕಾರದ ಕಣ್ಣು ಬಿದ್ದಂತಿದೆ. ಲೈಸೆನ್ಸ್‌ ನವೀಕರಣ ಸೇರಿದಂತೆ ಫೈರ್‌ ಸೇಫ್ಟಿ ಫೀಸ್‌ ಕೂಡ ದುಬಾರಿ ಆಗಿದೆ. ಇದು ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆಯೂ ಹೆಚ್ಚಾಗಿದೆ. 

ಈ ಮೊದಲು ಶಾಲೆಯ ಫೈರ್ ಸೇಫ್ಟಿ ನವೀಕರಣ ಶುಲ್ಕ ಒಂದು ಸಾವಿರವಿತ್ತು. ಇದೀಗ ಆ ಶುಲ್ಕವನ್ನು ಬರೋಬ್ಬರಿ 25,500 ರೂಪಾಯಿಗೆ ಏರಿಕೆ ಮಾಡಿದೆ. ಹೊಸ ಶಾಲೆ ಅನುಮತಿಗೆ 40 ರಿಂದ 80 ಸಾವಿರ ಇತ್ತು. ಇದೀಗ ಲಕ್ಷ ದಾಟುತ್ತಿದೆ. ಎಲ್ಲಾ ನಿಯಮ ಪಾಲಿಸಿ ಅನುಮತಿ ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷ ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮ ರೂಪಿಸಿದೆ. ಈ ಬಗ್ಗೆ ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ಎಲ್ಲಾ ನಿಯಮ ಪಾಲಿಸಿ ಅನುಮತಿ ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷ ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮ ರೂಪಿಸಿದೆ. ರಾಜ್ಯದಲ್ಲಿ 6 ಸಾವಿರ ಅನುದಾನಿತ ಶಾಲೆಗಳು, 18 ಸಾವಿರ ಖಾಸಗಿ ಶಾಲೆಗಳಿವೆ. ಬೆಂಗಳೂರಿನಲ್ಲಿ 6 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿವೆ. ಇದರಲ್ಲಿರುವ ಜಾಗದಲ್ಲಿ ಬಜೆಟ್ ಖಾಸಗಿ ಶಾಲೆಗಳಿಗೆ ಫೈರ್ ಸೇಫ್ಟಿ ನಿಯಮ ಪಾಲನೆ ಕಷ್ಟಸಾಧ್ಯ. ಇದೇ ಕಾನೂನು ಮುಂದಿಟ್ಟುಕೊಂಡು ಶಾಲೆಗಳಿಂದ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆಯಿದೆ. ಶಿಕ್ಷಣ ಇಲಾಖೆ ಹೊಸ ನಿಯಮ ಹಾಗೂ ವಿವಿಧ ಶುಲ್ಕಗಳ ದರವನ್ನು ಹೆಚ್ಚಳ ಮಾಡಿರುವುದು ಖಾಸಗಿ ಶಾಲೆಗಳಿಗೆ ನುಂಗಲಾರದ ತುತ್ತಾಗಿದೆ. ಸಿಬಿಎಸ್ಇ ಶಾಲೆಗಳಿಗೆ 5 ವರ್ಷಕ್ಕೊಮ್ಮೆ ನವೀಕರಣ ಇದ್ರೆ, ರಾಜ್ಯ ಪಠ್ಯಕ್ರಮದ ಶಾಲೆಗಳು ಪ್ರತಿವರ್ಷ ನವೀಕರಣದ ಕಿರುಕುಳ ನೀಡಲಾಗುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 day ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

1 day ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago