Advertisement
MIRROR FOCUS

ರಾಜ್ಯ ಸರ್ಕಾರದ ಬೆಲೆ ಏರಿಕೆ ಕಣ್ಣು ಖಾಸಗಿ ಶಾಲೆಗಳ ಮೇಲೆ | ಬೆಲೆ ಏರಿಕೆ ಕ್ರಮಕ್ಕೆ ಸರ್ಕಾರದ ವಿರುದ್ಧ ರುಪ್ಸಾ ಗರಂ | ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ…?

Share

ಖಾಸಗಿ ಶಾಲೆಗಳು ಹಾಗು ಅನುದಾನಿತ ಶಾಲೆಗಳ  ಮೇಲೆ ಸರ್ಕಾರದ ಕಣ್ಣು ಬಿದ್ದಂತಿದೆ. ಲೈಸೆನ್ಸ್‌ ನವೀಕರಣ ಸೇರಿದಂತೆ ಫೈರ್‌ ಸೇಫ್ಟಿ ಫೀಸ್‌ ಕೂಡ ದುಬಾರಿ ಆಗಿದೆ. ಇದು ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆಯೂ ಹೆಚ್ಚಾಗಿದೆ. 

ಈ ಮೊದಲು ಶಾಲೆಯ ಫೈರ್ ಸೇಫ್ಟಿ ನವೀಕರಣ ಶುಲ್ಕ ಒಂದು ಸಾವಿರವಿತ್ತು. ಇದೀಗ ಆ ಶುಲ್ಕವನ್ನು ಬರೋಬ್ಬರಿ 25,500 ರೂಪಾಯಿಗೆ ಏರಿಕೆ ಮಾಡಿದೆ. ಹೊಸ ಶಾಲೆ ಅನುಮತಿಗೆ 40 ರಿಂದ 80 ಸಾವಿರ ಇತ್ತು. ಇದೀಗ ಲಕ್ಷ ದಾಟುತ್ತಿದೆ. ಎಲ್ಲಾ ನಿಯಮ ಪಾಲಿಸಿ ಅನುಮತಿ ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷ ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮ ರೂಪಿಸಿದೆ. ಈ ಬಗ್ಗೆ ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ಎಲ್ಲಾ ನಿಯಮ ಪಾಲಿಸಿ ಅನುಮತಿ ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷ ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮ ರೂಪಿಸಿದೆ. ರಾಜ್ಯದಲ್ಲಿ 6 ಸಾವಿರ ಅನುದಾನಿತ ಶಾಲೆಗಳು, 18 ಸಾವಿರ ಖಾಸಗಿ ಶಾಲೆಗಳಿವೆ. ಬೆಂಗಳೂರಿನಲ್ಲಿ 6 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿವೆ. ಇದರಲ್ಲಿರುವ ಜಾಗದಲ್ಲಿ ಬಜೆಟ್ ಖಾಸಗಿ ಶಾಲೆಗಳಿಗೆ ಫೈರ್ ಸೇಫ್ಟಿ ನಿಯಮ ಪಾಲನೆ ಕಷ್ಟಸಾಧ್ಯ. ಇದೇ ಕಾನೂನು ಮುಂದಿಟ್ಟುಕೊಂಡು ಶಾಲೆಗಳಿಂದ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆಯಿದೆ. ಶಿಕ್ಷಣ ಇಲಾಖೆ ಹೊಸ ನಿಯಮ ಹಾಗೂ ವಿವಿಧ ಶುಲ್ಕಗಳ ದರವನ್ನು ಹೆಚ್ಚಳ ಮಾಡಿರುವುದು ಖಾಸಗಿ ಶಾಲೆಗಳಿಗೆ ನುಂಗಲಾರದ ತುತ್ತಾಗಿದೆ. ಸಿಬಿಎಸ್ಇ ಶಾಲೆಗಳಿಗೆ 5 ವರ್ಷಕ್ಕೊಮ್ಮೆ ನವೀಕರಣ ಇದ್ರೆ, ರಾಜ್ಯ ಪಠ್ಯಕ್ರಮದ ಶಾಲೆಗಳು ಪ್ರತಿವರ್ಷ ನವೀಕರಣದ ಕಿರುಕುಳ ನೀಡಲಾಗುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

3 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

5 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

8 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

13 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

23 hours ago