MIRROR FOCUS

#KukkeSubrahmanya | ಕುಮಾರಧಾರಾ ನದಿ ಬಳಿಯಲ್ಲಿ ಕುಸಿಯುತ್ತಿರುವ ರಸ್ತೆ | ತಕ್ಷಣ ಗಮನಹರಿಸಲು ಸ್ಥಳೀಯರ ಒತ್ತಾಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ಕರ್ನಾಟಕ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ತಕ್ಷಣವೇ ಈ ಬಗ್ಗೆಇಲಾಖೆಗಳು ಗಮನಹರಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.

Advertisement
Advertisement

ಕುಮಾರಧಾರಾ ನದಿ ನೀರು ಏರಿಕೆಯಾದ ತಕ್ಷಣವೇ ಮಣ್ಣು ಕುಸಿತ ಸಂಭವಿಸುತ್ತಿದೆ. ಹೀಗಾಗಿ  ರಸ್ತೆ ಕುಸಿದು ಕುಮಾರಧಾರ ನದಿ ನೀರಿನ ಪಾಲಾಗುವ ಸಾಧ್ಯತೆ ಇದೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆ ಸಂಪರ್ಕ ಕಡಿತ ಆಗುವ ಭೀತಿ ಎದುರಾಗಿದೆ.
ಜೂನ್ ಜುಲೈ ತಿಂಗಳಲ್ಲಿ ಸುರಿದ ಮಳೆ ನೀರು ಭೂಮಿಯಲ್ಲಿ ಇಂಗುತ್ತದೆ ಆಗಸ್ಟ್ ತಿಂಗಳಲ್ಲಿ ಬಂದ ನೀರು ಮಣ್ಣನ್ನು ಕೊಚ್ಚಿಕೊಂಡು ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ, ಆದ್ದರಿಂದ ಅಸುಪಸಿನ ಮನೆಗಳಿಗೂ  ಹಾನಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಕುಸಿತಗೊಂಡಿರುವ ರಸ್ತೆ | Photo Credit : Vishwanath Naduthota

ಇದೇ ಭಾಗದಲ್ಲಿ ಕಳೆದ ವರ್ಷ ಮಳೆಗಾಲದಲ್ಲಿ ಮನೆ ಕುಸಿದು ಎರಡು ಪುಟ್ಟಮಕ್ಕಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ,
ಸುಬ್ರಹ್ಮಣ್ಯ ಮಂಜೇಶ್ವರ ಸಂಪರ್ಕಿಸುವ ರಾಜ್ಯ ರಸ್ತೆಯಲ್ಲಿ ಕುಮಾರಧಾರ ಬಳಿ ಸೇತುವೆ ಇದ್ದು ಈ ಸೇತುವೆಯು ವರ್ಷಂಪತಿ ಹಲವಾರು ಬಾರಿ ಮುಳುಗಡೆಯಾಗಿ, ಪುತ್ತೂರು,ಬಳ್ಪ, ಪಂಜ ಈ ಭಾಗದಿಂದ ಬರುವ ಹಲವಾರು ವಿದ್ಯಾರ್ಥಿಗಳಿಗೆ, ಹಾಗೂ ಸಾರ್ವಜನಿಕರಿಗೆ ತೀರಾ ತೊಂದರೆ ಆಗುತ್ತಿದೆ.( ವಿಡಿಯೋ ವರದಿ…..)

ಕಳೆದ ವಾರ ಬಂದ ಬಾರಿ ಮಳೆಗೆ ರಸ್ತೆ ಸಂಪೂರ್ಣ ಮುಳುಗಡೆಯಾಗಿತ್ತು ಕಾಲೇಜ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹರಸಾಹಸ ಪಟ್ಟು ನದಿ ನೀರನ್ನು ದಾಟಿ ಪರೀಕ್ಷೆ ಬರೆದಂತ ಘಟನೆ ನಡೆದಿದೆ.ಈ ರಸ್ತೆಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಹಾಗೂ ಸುಳ್ಯದ ಶಾಸಕರು ಇದರ ಬಗ್ಗೆ ಗಮನಹರಿಸಿ ಸೇತುವೆ ಹಾಗೂ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಬೇಕು ಹಾಗೂ ಭೂಕುಸಿತಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು, ಇಲ್ಲದೆ ಹೋದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪುತ್ತೂರು ಮಂಜೇಶ್ವರ ಕರ್ನಾಟಕ ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಯು ಕಡಿತುಕೊಳ್ಳುವ ಭೀತಿ ಇದೆ ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಇಂಜಾಡಿ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮೋಹನದಾಸ್ ರೈ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

44 minutes ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

9 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

11 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

16 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

17 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

21 hours ago