Advertisement
MIRROR FOCUS

#KukkeSubrahmanya | ಕುಮಾರಧಾರಾ ನದಿ ಬಳಿಯಲ್ಲಿ ಕುಸಿಯುತ್ತಿರುವ ರಸ್ತೆ | ತಕ್ಷಣ ಗಮನಹರಿಸಲು ಸ್ಥಳೀಯರ ಒತ್ತಾಯ |

Share

ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ಕರ್ನಾಟಕ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ತಕ್ಷಣವೇ ಈ ಬಗ್ಗೆಇಲಾಖೆಗಳು ಗಮನಹರಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.

ಕುಮಾರಧಾರಾ ನದಿ ನೀರು ಏರಿಕೆಯಾದ ತಕ್ಷಣವೇ ಮಣ್ಣು ಕುಸಿತ ಸಂಭವಿಸುತ್ತಿದೆ. ಹೀಗಾಗಿ  ರಸ್ತೆ ಕುಸಿದು ಕುಮಾರಧಾರ ನದಿ ನೀರಿನ ಪಾಲಾಗುವ ಸಾಧ್ಯತೆ ಇದೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆ ಸಂಪರ್ಕ ಕಡಿತ ಆಗುವ ಭೀತಿ ಎದುರಾಗಿದೆ.
ಜೂನ್ ಜುಲೈ ತಿಂಗಳಲ್ಲಿ ಸುರಿದ ಮಳೆ ನೀರು ಭೂಮಿಯಲ್ಲಿ ಇಂಗುತ್ತದೆ ಆಗಸ್ಟ್ ತಿಂಗಳಲ್ಲಿ ಬಂದ ನೀರು ಮಣ್ಣನ್ನು ಕೊಚ್ಚಿಕೊಂಡು ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ, ಆದ್ದರಿಂದ ಅಸುಪಸಿನ ಮನೆಗಳಿಗೂ  ಹಾನಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಕುಸಿತಗೊಂಡಿರುವ ರಸ್ತೆ | Photo Credit : Vishwanath Naduthota

ಇದೇ ಭಾಗದಲ್ಲಿ ಕಳೆದ ವರ್ಷ ಮಳೆಗಾಲದಲ್ಲಿ ಮನೆ ಕುಸಿದು ಎರಡು ಪುಟ್ಟಮಕ್ಕಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ,
ಸುಬ್ರಹ್ಮಣ್ಯ ಮಂಜೇಶ್ವರ ಸಂಪರ್ಕಿಸುವ ರಾಜ್ಯ ರಸ್ತೆಯಲ್ಲಿ ಕುಮಾರಧಾರ ಬಳಿ ಸೇತುವೆ ಇದ್ದು ಈ ಸೇತುವೆಯು ವರ್ಷಂಪತಿ ಹಲವಾರು ಬಾರಿ ಮುಳುಗಡೆಯಾಗಿ, ಪುತ್ತೂರು,ಬಳ್ಪ, ಪಂಜ ಈ ಭಾಗದಿಂದ ಬರುವ ಹಲವಾರು ವಿದ್ಯಾರ್ಥಿಗಳಿಗೆ, ಹಾಗೂ ಸಾರ್ವಜನಿಕರಿಗೆ ತೀರಾ ತೊಂದರೆ ಆಗುತ್ತಿದೆ.( ವಿಡಿಯೋ ವರದಿ…..)

ಕಳೆದ ವಾರ ಬಂದ ಬಾರಿ ಮಳೆಗೆ ರಸ್ತೆ ಸಂಪೂರ್ಣ ಮುಳುಗಡೆಯಾಗಿತ್ತು ಕಾಲೇಜ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹರಸಾಹಸ ಪಟ್ಟು ನದಿ ನೀರನ್ನು ದಾಟಿ ಪರೀಕ್ಷೆ ಬರೆದಂತ ಘಟನೆ ನಡೆದಿದೆ.ಈ ರಸ್ತೆಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಹಾಗೂ ಸುಳ್ಯದ ಶಾಸಕರು ಇದರ ಬಗ್ಗೆ ಗಮನಹರಿಸಿ ಸೇತುವೆ ಹಾಗೂ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಬೇಕು ಹಾಗೂ ಭೂಕುಸಿತಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು, ಇಲ್ಲದೆ ಹೋದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪುತ್ತೂರು ಮಂಜೇಶ್ವರ ಕರ್ನಾಟಕ ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಯು ಕಡಿತುಕೊಳ್ಳುವ ಭೀತಿ ಇದೆ ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಇಂಜಾಡಿ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮೋಹನದಾಸ್ ರೈ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

52 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 hour ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 hour ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

12 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago