Advertisement
MIRROR FOCUS

#KukkeSubrahmanya | ಕುಮಾರಧಾರಾ ನದಿ ಬಳಿಯಲ್ಲಿ ಕುಸಿಯುತ್ತಿರುವ ರಸ್ತೆ | ತಕ್ಷಣ ಗಮನಹರಿಸಲು ಸ್ಥಳೀಯರ ಒತ್ತಾಯ |

Share

ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ಕರ್ನಾಟಕ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ತಕ್ಷಣವೇ ಈ ಬಗ್ಗೆಇಲಾಖೆಗಳು ಗಮನಹರಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.

ಕುಮಾರಧಾರಾ ನದಿ ನೀರು ಏರಿಕೆಯಾದ ತಕ್ಷಣವೇ ಮಣ್ಣು ಕುಸಿತ ಸಂಭವಿಸುತ್ತಿದೆ. ಹೀಗಾಗಿ  ರಸ್ತೆ ಕುಸಿದು ಕುಮಾರಧಾರ ನದಿ ನೀರಿನ ಪಾಲಾಗುವ ಸಾಧ್ಯತೆ ಇದೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆ ಸಂಪರ್ಕ ಕಡಿತ ಆಗುವ ಭೀತಿ ಎದುರಾಗಿದೆ.
ಜೂನ್ ಜುಲೈ ತಿಂಗಳಲ್ಲಿ ಸುರಿದ ಮಳೆ ನೀರು ಭೂಮಿಯಲ್ಲಿ ಇಂಗುತ್ತದೆ ಆಗಸ್ಟ್ ತಿಂಗಳಲ್ಲಿ ಬಂದ ನೀರು ಮಣ್ಣನ್ನು ಕೊಚ್ಚಿಕೊಂಡು ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ, ಆದ್ದರಿಂದ ಅಸುಪಸಿನ ಮನೆಗಳಿಗೂ  ಹಾನಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Advertisement
ಕುಸಿತಗೊಂಡಿರುವ ರಸ್ತೆ | Photo Credit : Vishwanath Naduthota

ಇದೇ ಭಾಗದಲ್ಲಿ ಕಳೆದ ವರ್ಷ ಮಳೆಗಾಲದಲ್ಲಿ ಮನೆ ಕುಸಿದು ಎರಡು ಪುಟ್ಟಮಕ್ಕಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ,
ಸುಬ್ರಹ್ಮಣ್ಯ ಮಂಜೇಶ್ವರ ಸಂಪರ್ಕಿಸುವ ರಾಜ್ಯ ರಸ್ತೆಯಲ್ಲಿ ಕುಮಾರಧಾರ ಬಳಿ ಸೇತುವೆ ಇದ್ದು ಈ ಸೇತುವೆಯು ವರ್ಷಂಪತಿ ಹಲವಾರು ಬಾರಿ ಮುಳುಗಡೆಯಾಗಿ, ಪುತ್ತೂರು,ಬಳ್ಪ, ಪಂಜ ಈ ಭಾಗದಿಂದ ಬರುವ ಹಲವಾರು ವಿದ್ಯಾರ್ಥಿಗಳಿಗೆ, ಹಾಗೂ ಸಾರ್ವಜನಿಕರಿಗೆ ತೀರಾ ತೊಂದರೆ ಆಗುತ್ತಿದೆ.( ವಿಡಿಯೋ ವರದಿ…..)

Advertisement

ಕಳೆದ ವಾರ ಬಂದ ಬಾರಿ ಮಳೆಗೆ ರಸ್ತೆ ಸಂಪೂರ್ಣ ಮುಳುಗಡೆಯಾಗಿತ್ತು ಕಾಲೇಜ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹರಸಾಹಸ ಪಟ್ಟು ನದಿ ನೀರನ್ನು ದಾಟಿ ಪರೀಕ್ಷೆ ಬರೆದಂತ ಘಟನೆ ನಡೆದಿದೆ.ಈ ರಸ್ತೆಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಹಾಗೂ ಸುಳ್ಯದ ಶಾಸಕರು ಇದರ ಬಗ್ಗೆ ಗಮನಹರಿಸಿ ಸೇತುವೆ ಹಾಗೂ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಬೇಕು ಹಾಗೂ ಭೂಕುಸಿತಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು, ಇಲ್ಲದೆ ಹೋದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪುತ್ತೂರು ಮಂಜೇಶ್ವರ ಕರ್ನಾಟಕ ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಯು ಕಡಿತುಕೊಳ್ಳುವ ಭೀತಿ ಇದೆ ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಇಂಜಾಡಿ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮೋಹನದಾಸ್ ರೈ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

2 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

6 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

7 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

14 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

15 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

17 hours ago