Advertisement
MIRROR FOCUS

#KukkeSubrahmanya | ಕುಮಾರಧಾರಾ ನದಿ ಬಳಿಯಲ್ಲಿ ಕುಸಿಯುತ್ತಿರುವ ರಸ್ತೆ | ತಕ್ಷಣ ಗಮನಹರಿಸಲು ಸ್ಥಳೀಯರ ಒತ್ತಾಯ |

Share

ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ಕರ್ನಾಟಕ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ತಕ್ಷಣವೇ ಈ ಬಗ್ಗೆಇಲಾಖೆಗಳು ಗಮನಹರಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.

ಕುಮಾರಧಾರಾ ನದಿ ನೀರು ಏರಿಕೆಯಾದ ತಕ್ಷಣವೇ ಮಣ್ಣು ಕುಸಿತ ಸಂಭವಿಸುತ್ತಿದೆ. ಹೀಗಾಗಿ  ರಸ್ತೆ ಕುಸಿದು ಕುಮಾರಧಾರ ನದಿ ನೀರಿನ ಪಾಲಾಗುವ ಸಾಧ್ಯತೆ ಇದೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆ ಸಂಪರ್ಕ ಕಡಿತ ಆಗುವ ಭೀತಿ ಎದುರಾಗಿದೆ.
ಜೂನ್ ಜುಲೈ ತಿಂಗಳಲ್ಲಿ ಸುರಿದ ಮಳೆ ನೀರು ಭೂಮಿಯಲ್ಲಿ ಇಂಗುತ್ತದೆ ಆಗಸ್ಟ್ ತಿಂಗಳಲ್ಲಿ ಬಂದ ನೀರು ಮಣ್ಣನ್ನು ಕೊಚ್ಚಿಕೊಂಡು ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ, ಆದ್ದರಿಂದ ಅಸುಪಸಿನ ಮನೆಗಳಿಗೂ  ಹಾನಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಕುಸಿತಗೊಂಡಿರುವ ರಸ್ತೆ | Photo Credit : Vishwanath Naduthota

ಇದೇ ಭಾಗದಲ್ಲಿ ಕಳೆದ ವರ್ಷ ಮಳೆಗಾಲದಲ್ಲಿ ಮನೆ ಕುಸಿದು ಎರಡು ಪುಟ್ಟಮಕ್ಕಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ,
ಸುಬ್ರಹ್ಮಣ್ಯ ಮಂಜೇಶ್ವರ ಸಂಪರ್ಕಿಸುವ ರಾಜ್ಯ ರಸ್ತೆಯಲ್ಲಿ ಕುಮಾರಧಾರ ಬಳಿ ಸೇತುವೆ ಇದ್ದು ಈ ಸೇತುವೆಯು ವರ್ಷಂಪತಿ ಹಲವಾರು ಬಾರಿ ಮುಳುಗಡೆಯಾಗಿ, ಪುತ್ತೂರು,ಬಳ್ಪ, ಪಂಜ ಈ ಭಾಗದಿಂದ ಬರುವ ಹಲವಾರು ವಿದ್ಯಾರ್ಥಿಗಳಿಗೆ, ಹಾಗೂ ಸಾರ್ವಜನಿಕರಿಗೆ ತೀರಾ ತೊಂದರೆ ಆಗುತ್ತಿದೆ.( ವಿಡಿಯೋ ವರದಿ…..)

ಕಳೆದ ವಾರ ಬಂದ ಬಾರಿ ಮಳೆಗೆ ರಸ್ತೆ ಸಂಪೂರ್ಣ ಮುಳುಗಡೆಯಾಗಿತ್ತು ಕಾಲೇಜ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹರಸಾಹಸ ಪಟ್ಟು ನದಿ ನೀರನ್ನು ದಾಟಿ ಪರೀಕ್ಷೆ ಬರೆದಂತ ಘಟನೆ ನಡೆದಿದೆ.ಈ ರಸ್ತೆಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಹಾಗೂ ಸುಳ್ಯದ ಶಾಸಕರು ಇದರ ಬಗ್ಗೆ ಗಮನಹರಿಸಿ ಸೇತುವೆ ಹಾಗೂ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಬೇಕು ಹಾಗೂ ಭೂಕುಸಿತಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು, ಇಲ್ಲದೆ ಹೋದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪುತ್ತೂರು ಮಂಜೇಶ್ವರ ಕರ್ನಾಟಕ ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಯು ಕಡಿತುಕೊಳ್ಳುವ ಭೀತಿ ಇದೆ ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಇಂಜಾಡಿ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮೋಹನದಾಸ್ ರೈ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

7 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago