ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪಿಡೇ ರೇಟೆಡ್ 19 ವರ್ಷ ವಯೋಮಾನದ ಚೆಸ್ ಚಾಂಪಿಯನ್ ಶಿಪ್ ನಲ್ಲಿ ದಕ್ಷಿಣ ಕನ್ನಡದ ಚೆಸ್ ಆಟಗಾರ ರವೀಶ್ ಕೋಟೆ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಒಟ್ಟು 4 ಮಂದಿ ಆಟಗಾರರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರಲ್ಲಿ ರವೀಶ್ ಕೋಟೆ ಒಬ್ಬರು.…… ಮುಂದೆ ಓದಿ……
ರವೀಶ್ ಕೋಟೆ ಅವರು 1865 ರೇಟಿಂಗ್ ಹೊಂದಿದ್ದು ಕಳೆದ ಹಲವು ವರ್ಷಗಳಿಂದ ಉತ್ತಮ ಚೆಸ್ ಆಟಗಾರರಾಗಿದ್ದು, ವಿವಿದೆಡೆ ಸ್ಫರ್ಧಿಸಿದ್ದಾರೆ. ಇವರು ಪುತ್ತೂರು ಜೀನಿಯಸ್ ಚೆಸ್ ಸ್ಕೂಲ್ ನ ಸತ್ಯ ಪ್ರಸಾದ್ ಕೋಟೆಯವರಲ್ಲಿ ಹಾಗೂ ಮಂಗಳೂರಿನ ರಾವ್ಸ್ ಚೆಸ್ ಕಾರ್ನರ್ (ಆರ್ಸಿಸಿ) ಇಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಾರೆ. ಸುಳ್ಯದ ಎಣ್ಮೂರು ಬಳಿಯ ರಮೇಶ್ ಕೋಟೆ ಹಾಗೂ ಶುಭಮಂಗಳ ಅವರ ಪುತ್ರ.
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…