ದಸರಾ ಅಂಗವಾಗಿ ರೈತ ದಸರಾ ಉಪ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ವಿಜೇತರಿಗೆ ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂಪಾಯಿ, ದ್ವಿತೀಯ ಬಹುಮಾನ 80 ಸಾವಿರ ರೂಪಾಯಿ, ತೃತೀಯ ಬಹುಮಾನಕ್ಕೆ 60 ಸಾವಿರ ರೂಪಾಯಿ ಹಾಗೂ ಸಮಾಧಾನಕರ ಬಹುಮಾನವಾಗಿ 40 ಸಾವಿರ ರೂಪಾಯಿ ನೀಡಲಾಯಿತು.
ಸ್ಪರ್ಧಿಗಳಿಗೆ ಒಟ್ಟು 20 ನಿಮಿಷ ಕಾಲಾವಕಾಶ ನೀಡಲಾಗಿತ್ತು. ಬೆಳಿಗ್ಗೆ ಮತ್ತು ಸಾಯಂಕಾಲ ಅಂತಿಮ ಹಂತದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ಆನೇಕಲ್ ತಾಲೂಕಿನ ಕಗ್ಗಲೀಪುರದ ತನಿಷ್ ಫಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 42.840 ಲೀ ಹಾಲು ಕರೆಯುವ ಮೂಲಕ ಪ್ರಥಮ ಸ್ಥಾನ ಪಡೆದು 1 ಲಕ್ಷ ರೂ. ಗೆದ್ದರು. ಚನ್ನರಾಯಪಟ್ಟಣ ತಾಲೂಕಿನ ತೋಟ ಗ್ರಾಮದ ಬಾಬು ಬಿನ್ ರೇವಣ್ಣ ಎಂಬವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 42.300 ಲೀ ಹಾಲು ಕರೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ, 80 ಸಾವಿರ ರೂ. ಬಹುಮಾನ ಪಡೆದರು. ಆನೇಕಲ್ ತಾಲೂಕಿನ ವೆಟ್ ಫಾರಂ, ನಕುಂದಿ, ದೊಮ್ಮಸಂದ್ರ, ಅಜಯ್ ಪಿ.ರೆಡ್ಡಿ ಅಜಯ್ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 41.300 ಲೀ ಕರೆಯುವ ಮೂಲಕ ತೃತೀಯ ಸ್ಥಾನ ಗಳಿಸಿ, 60 ಸಾವಿರ ರೂ.ಬಹುಮಾನ ಪಡೆದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ…
ಹೊಲದಲ್ಲಿ ಇರುವ ಪೈರನ್ನು ಗರ್ಭವತಿ ಎಂದು ಕಲ್ಪಿಸಿಕೊಂಡು ಈ ವಿಶಿಷ್ಟ ಆಚರಣೆ ಭೂಮಿ…
ಐದು ಎಕರೆಯಲ್ಲಿ ದ್ರಾಕ್ಷಿ ಬೆಳೆದಿದ್ದು, ಅತಿಯಾದ ಮಳೆಯಿಂದ ಫಸಲು ನಾಶವಾಗಿದೆ ಎನ್ನುತ್ತಾರೆ ರೈತ…
ಭಾರತದಲ್ಲಿ ಮೊಬೈಲ್ ಸಂಪರ್ಕಗಳು 904 ಮಿಲಿಯನ್ನಿಂದ 1.16 ಬಿಲಿಯನ್ಗೆ ಏರಿದೆ, ಬ್ರಾಡ್ಬ್ಯಾಂಡ್ ಬಳಕೆದಾರರು…
ಹೋಬಳಿಗೊಂದು ವಸತಿ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …
ಕೊಡಗು ಜಿಲ್ಲೆಯ ತಲಕಾವೇರಿ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7.40 ಸುಮಾರಿಗೆ ಸರಿಯಾಗಿ ಕಾವೇರಿ…