ದಸರಾ ಅಂಗವಾಗಿ ರೈತ ದಸರಾ ಉಪ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ವಿಜೇತರಿಗೆ ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂಪಾಯಿ, ದ್ವಿತೀಯ ಬಹುಮಾನ 80 ಸಾವಿರ ರೂಪಾಯಿ, ತೃತೀಯ ಬಹುಮಾನಕ್ಕೆ 60 ಸಾವಿರ ರೂಪಾಯಿ ಹಾಗೂ ಸಮಾಧಾನಕರ ಬಹುಮಾನವಾಗಿ 40 ಸಾವಿರ ರೂಪಾಯಿ ನೀಡಲಾಯಿತು.
ಸ್ಪರ್ಧಿಗಳಿಗೆ ಒಟ್ಟು 20 ನಿಮಿಷ ಕಾಲಾವಕಾಶ ನೀಡಲಾಗಿತ್ತು. ಬೆಳಿಗ್ಗೆ ಮತ್ತು ಸಾಯಂಕಾಲ ಅಂತಿಮ ಹಂತದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ಆನೇಕಲ್ ತಾಲೂಕಿನ ಕಗ್ಗಲೀಪುರದ ತನಿಷ್ ಫಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 42.840 ಲೀ ಹಾಲು ಕರೆಯುವ ಮೂಲಕ ಪ್ರಥಮ ಸ್ಥಾನ ಪಡೆದು 1 ಲಕ್ಷ ರೂ. ಗೆದ್ದರು. ಚನ್ನರಾಯಪಟ್ಟಣ ತಾಲೂಕಿನ ತೋಟ ಗ್ರಾಮದ ಬಾಬು ಬಿನ್ ರೇವಣ್ಣ ಎಂಬವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 42.300 ಲೀ ಹಾಲು ಕರೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ, 80 ಸಾವಿರ ರೂ. ಬಹುಮಾನ ಪಡೆದರು. ಆನೇಕಲ್ ತಾಲೂಕಿನ ವೆಟ್ ಫಾರಂ, ನಕುಂದಿ, ದೊಮ್ಮಸಂದ್ರ, ಅಜಯ್ ಪಿ.ರೆಡ್ಡಿ ಅಜಯ್ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 41.300 ಲೀ ಕರೆಯುವ ಮೂಲಕ ತೃತೀಯ ಸ್ಥಾನ ಗಳಿಸಿ, 60 ಸಾವಿರ ರೂ.ಬಹುಮಾನ ಪಡೆದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…