ದಸರಾ ಅಂಗವಾಗಿ ರೈತ ದಸರಾ ಉಪ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ವಿಜೇತರಿಗೆ ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂಪಾಯಿ, ದ್ವಿತೀಯ ಬಹುಮಾನ 80 ಸಾವಿರ ರೂಪಾಯಿ, ತೃತೀಯ ಬಹುಮಾನಕ್ಕೆ 60 ಸಾವಿರ ರೂಪಾಯಿ ಹಾಗೂ ಸಮಾಧಾನಕರ ಬಹುಮಾನವಾಗಿ 40 ಸಾವಿರ ರೂಪಾಯಿ ನೀಡಲಾಯಿತು.
ಸ್ಪರ್ಧಿಗಳಿಗೆ ಒಟ್ಟು 20 ನಿಮಿಷ ಕಾಲಾವಕಾಶ ನೀಡಲಾಗಿತ್ತು. ಬೆಳಿಗ್ಗೆ ಮತ್ತು ಸಾಯಂಕಾಲ ಅಂತಿಮ ಹಂತದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ಆನೇಕಲ್ ತಾಲೂಕಿನ ಕಗ್ಗಲೀಪುರದ ತನಿಷ್ ಫಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 42.840 ಲೀ ಹಾಲು ಕರೆಯುವ ಮೂಲಕ ಪ್ರಥಮ ಸ್ಥಾನ ಪಡೆದು 1 ಲಕ್ಷ ರೂ. ಗೆದ್ದರು. ಚನ್ನರಾಯಪಟ್ಟಣ ತಾಲೂಕಿನ ತೋಟ ಗ್ರಾಮದ ಬಾಬು ಬಿನ್ ರೇವಣ್ಣ ಎಂಬವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 42.300 ಲೀ ಹಾಲು ಕರೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ, 80 ಸಾವಿರ ರೂ. ಬಹುಮಾನ ಪಡೆದರು. ಆನೇಕಲ್ ತಾಲೂಕಿನ ವೆಟ್ ಫಾರಂ, ನಕುಂದಿ, ದೊಮ್ಮಸಂದ್ರ, ಅಜಯ್ ಪಿ.ರೆಡ್ಡಿ ಅಜಯ್ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 41.300 ಲೀ ಕರೆಯುವ ಮೂಲಕ ತೃತೀಯ ಸ್ಥಾನ ಗಳಿಸಿ, 60 ಸಾವಿರ ರೂ.ಬಹುಮಾನ ಪಡೆದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…