ದಸರಾ ಅಂಗವಾಗಿ ರೈತ ದಸರಾ ಉಪ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ವಿಜೇತರಿಗೆ ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂಪಾಯಿ, ದ್ವಿತೀಯ ಬಹುಮಾನ 80 ಸಾವಿರ ರೂಪಾಯಿ, ತೃತೀಯ ಬಹುಮಾನಕ್ಕೆ 60 ಸಾವಿರ ರೂಪಾಯಿ ಹಾಗೂ ಸಮಾಧಾನಕರ ಬಹುಮಾನವಾಗಿ 40 ಸಾವಿರ ರೂಪಾಯಿ ನೀಡಲಾಯಿತು.
ಸ್ಪರ್ಧಿಗಳಿಗೆ ಒಟ್ಟು 20 ನಿಮಿಷ ಕಾಲಾವಕಾಶ ನೀಡಲಾಗಿತ್ತು. ಬೆಳಿಗ್ಗೆ ಮತ್ತು ಸಾಯಂಕಾಲ ಅಂತಿಮ ಹಂತದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ಆನೇಕಲ್ ತಾಲೂಕಿನ ಕಗ್ಗಲೀಪುರದ ತನಿಷ್ ಫಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 42.840 ಲೀ ಹಾಲು ಕರೆಯುವ ಮೂಲಕ ಪ್ರಥಮ ಸ್ಥಾನ ಪಡೆದು 1 ಲಕ್ಷ ರೂ. ಗೆದ್ದರು. ಚನ್ನರಾಯಪಟ್ಟಣ ತಾಲೂಕಿನ ತೋಟ ಗ್ರಾಮದ ಬಾಬು ಬಿನ್ ರೇವಣ್ಣ ಎಂಬವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 42.300 ಲೀ ಹಾಲು ಕರೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ, 80 ಸಾವಿರ ರೂ. ಬಹುಮಾನ ಪಡೆದರು. ಆನೇಕಲ್ ತಾಲೂಕಿನ ವೆಟ್ ಫಾರಂ, ನಕುಂದಿ, ದೊಮ್ಮಸಂದ್ರ, ಅಜಯ್ ಪಿ.ರೆಡ್ಡಿ ಅಜಯ್ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ 41.300 ಲೀ ಕರೆಯುವ ಮೂಲಕ ತೃತೀಯ ಸ್ಥಾನ ಗಳಿಸಿ, 60 ಸಾವಿರ ರೂ.ಬಹುಮಾನ ಪಡೆದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…