ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

February 16, 2025
3:07 PM

ಮಹಾದಾಯಿ ನದಿ ನೀರಿನ ವಿಷಯದಲ್ಲಿ ಪಕ್ಷಬೇಧ ಮರೆತು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡುಗಡೆಗೆ ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಿರುವಾಗ ನ್ಯಾಯಾಲಯದಲ್ಲಿ ಪ್ರಬಲ ವಾದ ಮಂಡಿಸಬೇಕಾಗಿದೆ ಎಂದು ತಿಳಿಸಿದ್ದಾರೆ. ಗೋದಾವರಿ, ಕೃಷ್ಣಾ, ಕಾವೇರಿ ನದಿಗಳ ಜೋಡಣೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದ ಅವರು, ನಮ್ಮ ಪಾಲಿನ ನೀರು ಹಂಚಿಕೆ ಮಾಡಬೇಕು. ಈ ಸಂಬಂಧ ಪ್ರಧಾನಿ ಹಾಗೂ ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದಿದ್ದೆ. ಇದರ ಪರಿಣಾಮ ಸದ್ಯ 15 ಟಿಎಂಸಿ ನೀರು ಬಿಡಲಾಗಿದೆ. ಆದರೆ ಈ ಪ್ರಮಾಣವನ್ನು 25 ಟಿಎಂಸಿಗೆ ಹೆಚ್ಚಳ ಮಾಡಬೇಕಾಗಿದ ಎಂದು ಹೇಳಿದರು. ರಾಜಕೀಯ ಹೊರತುಪಡಿಸಿ ರಾಜ್ಯದ ಅಭಿವೃದ್ಧಿಗಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾಗಿದೆ. ಆಗ ಮಾತ್ರ ರಾಜ್ಯ ಮತ್ತು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.

ಗೋದಾವರಿ, ಕೃಷ್ಣ, ಕಾವೇರಿ, ನದಿ ನೀರು ಜೋಡಣೆಯ ನೀರಾವರಿ ಯೋಜನೆಯಡಿ ರಾಜ್ಯಕ್ಕೆ 25 ಟಿಎಂಸಿ ನೀರು ಕೊಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು, ಈ ಸಂಬಂಧ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಗೋದಾವರಿ, ಕಾವೇರಿ, ನದಿ ನೀರು ಜೋಡಣೆ ಯೋಜನೆಯಿಂದ ರಾಜ್ಯಕ್ಕೆ ಗೋದಾವರಿ ನೀರನ್ನು ಹಂಚಿಕೆ ಮಾಡದಿರುವ ಕೇಂದ್ರ ಜಲಶಕ್ತಿ ಸಚಿವಾಲಯದ ನಿರ್ಧಾರದಿಂದ ಆಘಾತವಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror