ಮಹಾದಾಯಿ ನದಿ ನೀರಿನ ವಿಷಯದಲ್ಲಿ ಪಕ್ಷಬೇಧ ಮರೆತು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡುಗಡೆಗೆ ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಿರುವಾಗ ನ್ಯಾಯಾಲಯದಲ್ಲಿ ಪ್ರಬಲ ವಾದ ಮಂಡಿಸಬೇಕಾಗಿದೆ ಎಂದು ತಿಳಿಸಿದ್ದಾರೆ. ಗೋದಾವರಿ, ಕೃಷ್ಣಾ, ಕಾವೇರಿ ನದಿಗಳ ಜೋಡಣೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದ ಅವರು, ನಮ್ಮ ಪಾಲಿನ ನೀರು ಹಂಚಿಕೆ ಮಾಡಬೇಕು. ಈ ಸಂಬಂಧ ಪ್ರಧಾನಿ ಹಾಗೂ ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದಿದ್ದೆ. ಇದರ ಪರಿಣಾಮ ಸದ್ಯ 15 ಟಿಎಂಸಿ ನೀರು ಬಿಡಲಾಗಿದೆ. ಆದರೆ ಈ ಪ್ರಮಾಣವನ್ನು 25 ಟಿಎಂಸಿಗೆ ಹೆಚ್ಚಳ ಮಾಡಬೇಕಾಗಿದ ಎಂದು ಹೇಳಿದರು. ರಾಜಕೀಯ ಹೊರತುಪಡಿಸಿ ರಾಜ್ಯದ ಅಭಿವೃದ್ಧಿಗಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾಗಿದೆ. ಆಗ ಮಾತ್ರ ರಾಜ್ಯ ಮತ್ತು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.
ಗೋದಾವರಿ, ಕೃಷ್ಣ, ಕಾವೇರಿ, ನದಿ ನೀರು ಜೋಡಣೆಯ ನೀರಾವರಿ ಯೋಜನೆಯಡಿ ರಾಜ್ಯಕ್ಕೆ 25 ಟಿಎಂಸಿ ನೀರು ಕೊಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು, ಈ ಸಂಬಂಧ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಗೋದಾವರಿ, ಕಾವೇರಿ, ನದಿ ನೀರು ಜೋಡಣೆ ಯೋಜನೆಯಿಂದ ರಾಜ್ಯಕ್ಕೆ ಗೋದಾವರಿ ನೀರನ್ನು ಹಂಚಿಕೆ ಮಾಡದಿರುವ ಕೇಂದ್ರ ಜಲಶಕ್ತಿ ಸಚಿವಾಲಯದ ನಿರ್ಧಾರದಿಂದ ಆಘಾತವಾಗಿದೆ ಎಂದು ತಿಳಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…