Advertisement
ಸುದ್ದಿಗಳು

5000 ಕೋಟಿ ವ್ಯವಹಾರ ನಡೆಸುವ ಅಡಿಕೆ ಬೆಳೆಗಾರರ ಬಗ್ಗೆ ಮಾತ್ರವಲ್ಲ 40,000 ಕೋಟಿ ವಹಿವಾಟು ನಡೆಸುವ ಕಬ್ಬು ಬೆಳೆಗಾರರ ಕಡೆಗೂ ಗಮನಹರಿಸಿ |

Share

30 ಲಕ್ಷ ಕಬ್ಬು ಬೆಳೆಗಾರರ 40,000 ಕೋಟಿ ವಹಿವಾಟು ನಡೆಸುವ ಕಬ್ಬು ಉದ್ಯಮವು ಸರ್ಕಾರಕ್ಕೆ ಲಾಭ  ತರುತ್ತಿಲ್ಲವೇ?.  5000 ಕೋಟಿ ವ್ಯವಹಾರ ನಡೆಸುವ ಅಡಿಕೆ ಬೆಳೆಗಾರರ ಬಗ್ಗೆ ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡುವ ರಾಜ್ಯದ ಗೃಹ ಸಚಿವರಿಗೆ ಹಾಗೂ ಸಂಸದ, ಶಾಸಕರುಗಳಿಗೆ ಕಬ್ಬು ಬೆಳೆಗಾರರ ಗೋಳಾಟ ಕಾಣುತ್ತಿಲ್ಲವೇ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಬ್ಬಿನ ಎಫ್ ಆರ್ ಪಿ ದರಕ್ಕೆ ಹೆಚ್ಚುವರಿ ದರ ನಿಗದಿಪಡಿಸಲು ಮಂತ್ರಿಗಳು ನಾಲ್ಕು ಸಭೆಗಳನ್ನು ನಡೆಸಿ ಯಾವುದೇ ತೀರ್ಮಾನ ಕೈಗೊಳ್ಳದೆ ಮುಂದೂಡುತ್ತಿದ್ದಾರೆ. ಇದು ಕಬ್ಬು ಬೆಳೆದ ರೈತರಿಗೆ ಬಗೆದ ದ್ರೋಹವಾಗಿದೆ. ರಾಜ್ಯದ ಕಬ್ಬು ಬೆಳೆಗಾರ ರೈತರು ನಾಲ್ಕು ತಿಂಗಳಿಂದಲೂ ಹೋರಾಟ ನಡೆಸುತ್ತಿದ್ದರು ಯಾವುದೇ ಎಂಎಲ್ಎ, ಎಂಪಿ ,ಮಂತ್ರಿಗಳು, ಈ ಬಗ್ಗೆ ಮಾತನಾಡದೆ ಇರುವುದು ಅನುಮಾನ ಉಂಟು ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕಬ್ಬು ದರ ನಿಗದಿ  ರಾಜ್ಯ ಸರ್ಕಾರದ ವಿಳಂಬ ನೀತಿ ವರ್ತನೆ ಖಂಡಿಸಿ ರಾಜ್ಯಾದ್ಯಂತ 27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುತ್ತದೆ, 31ರಂದು ರಾಜ್ಯದ ಎಲ್ಲಾ ಜಿಲ್ಲಾ ಅಧಿಕಾರಿಗಳ ,ಕಚೇರಿ ಮುತ್ತಿಗೆ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚದಲ್ಲಿ ಕಾರ್ಖಾನೆಗಳು ರೈತರನ್ನು ಸುಲಿಗೆ ಮಾಡುತ್ತಿದ್ದಾರೆ ಕಬ್ಬು ಕಟಾವು 16 ತಿಂಗಳಾಗುತಿದೆ ರಾಜ್ಯ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ರೈತನ ಜಮೀನಿನಿಂದ ಕಾರ್ಖಾನೆ ನಡುವೆ ಇರುವ ಕಿಲೋಮೀಟರ್  ಆಧಾರದ ದರ ಕಡಿತ ಮಾಡಬೇಕು, ಕಾನೂನು ಬಾಹಿರವಾಗಿ ಹೆಚ್ಚುವರಿ ಮಾಡಿದರೆ ಆಯಾ ಜಿಲ್ಲಾಧಿಕಾರಿಗಳು ಕಾರ್ಖಾನೆಗಳ ಮೇಲೆ ಚೀಟಿಂಗ್ ಕೇಸ್ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಕ್ಕರೆ ಉದ್ದಿಮೆ ಸಕ್ಕರೆ ಹಾಗು ಕಬ್ಬು ಬೇಸಾಯ ಸಂಪೂರ್ಣವಾಗಿ ಗಣಕೀಕರಣವಾಗಬೇಕು ಎಂಬುದು ರಾಜ್ಯ ಕಬ್ಬು ಬೆಳೆಗಾರ ಸಂಘ ಎಪ್ರಿಲ್ 26ರಂದು ಒತ್ತಾಯಿಸಲಾಗಿತ್ತು. ರೈತನ ಕಬ್ಬಿನ ನಾಟಿ ಒಪ್ಪಂದ, ಜೇಷ್ಠತೆ ಆಧಾರದ ಕಟಾವು ಅನುಮತಿ, ಕಬ್ಬಿನ ತೂಕ, ಕಬ್ಬಿನ ಹಣ ಪಾವತಿ, ಸಕ್ಕರೆ ಇಳುವರಿ, ಎಲ್ಲವೂ ಗಣಕೀಕರಣವಾಗಿ ರೈತರ ಮೊಬೈಲ್ ಆಪ್ ಮೂಲಕ ನೋಂದಾಯಿಸುವ ಅವಕಾಶ ನೀಡಬೇಕೆಂದು ಒತ್ತಾಯಿಸಲಾಗಿತ್ತು ಈಗ ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವುದು ಕಬ್ಬು ಬೆಳೆಗಾರರ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಜಿಲ್ಲಾಧ್ಯಕ್ಷರಾದ ಪಿ.ಸೋಮಶೇಖರ್, ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್ ಇತರರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago