Advertisement
ಸುದ್ದಿಗಳು

5000 ಕೋಟಿ ವ್ಯವಹಾರ ನಡೆಸುವ ಅಡಿಕೆ ಬೆಳೆಗಾರರ ಬಗ್ಗೆ ಮಾತ್ರವಲ್ಲ 40,000 ಕೋಟಿ ವಹಿವಾಟು ನಡೆಸುವ ಕಬ್ಬು ಬೆಳೆಗಾರರ ಕಡೆಗೂ ಗಮನಹರಿಸಿ |

Share

30 ಲಕ್ಷ ಕಬ್ಬು ಬೆಳೆಗಾರರ 40,000 ಕೋಟಿ ವಹಿವಾಟು ನಡೆಸುವ ಕಬ್ಬು ಉದ್ಯಮವು ಸರ್ಕಾರಕ್ಕೆ ಲಾಭ  ತರುತ್ತಿಲ್ಲವೇ?.  5000 ಕೋಟಿ ವ್ಯವಹಾರ ನಡೆಸುವ ಅಡಿಕೆ ಬೆಳೆಗಾರರ ಬಗ್ಗೆ ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡುವ ರಾಜ್ಯದ ಗೃಹ ಸಚಿವರಿಗೆ ಹಾಗೂ ಸಂಸದ, ಶಾಸಕರುಗಳಿಗೆ ಕಬ್ಬು ಬೆಳೆಗಾರರ ಗೋಳಾಟ ಕಾಣುತ್ತಿಲ್ಲವೇ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಬ್ಬಿನ ಎಫ್ ಆರ್ ಪಿ ದರಕ್ಕೆ ಹೆಚ್ಚುವರಿ ದರ ನಿಗದಿಪಡಿಸಲು ಮಂತ್ರಿಗಳು ನಾಲ್ಕು ಸಭೆಗಳನ್ನು ನಡೆಸಿ ಯಾವುದೇ ತೀರ್ಮಾನ ಕೈಗೊಳ್ಳದೆ ಮುಂದೂಡುತ್ತಿದ್ದಾರೆ. ಇದು ಕಬ್ಬು ಬೆಳೆದ ರೈತರಿಗೆ ಬಗೆದ ದ್ರೋಹವಾಗಿದೆ. ರಾಜ್ಯದ ಕಬ್ಬು ಬೆಳೆಗಾರ ರೈತರು ನಾಲ್ಕು ತಿಂಗಳಿಂದಲೂ ಹೋರಾಟ ನಡೆಸುತ್ತಿದ್ದರು ಯಾವುದೇ ಎಂಎಲ್ಎ, ಎಂಪಿ ,ಮಂತ್ರಿಗಳು, ಈ ಬಗ್ಗೆ ಮಾತನಾಡದೆ ಇರುವುದು ಅನುಮಾನ ಉಂಟು ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕಬ್ಬು ದರ ನಿಗದಿ  ರಾಜ್ಯ ಸರ್ಕಾರದ ವಿಳಂಬ ನೀತಿ ವರ್ತನೆ ಖಂಡಿಸಿ ರಾಜ್ಯಾದ್ಯಂತ 27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುತ್ತದೆ, 31ರಂದು ರಾಜ್ಯದ ಎಲ್ಲಾ ಜಿಲ್ಲಾ ಅಧಿಕಾರಿಗಳ ,ಕಚೇರಿ ಮುತ್ತಿಗೆ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚದಲ್ಲಿ ಕಾರ್ಖಾನೆಗಳು ರೈತರನ್ನು ಸುಲಿಗೆ ಮಾಡುತ್ತಿದ್ದಾರೆ ಕಬ್ಬು ಕಟಾವು 16 ತಿಂಗಳಾಗುತಿದೆ ರಾಜ್ಯ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ರೈತನ ಜಮೀನಿನಿಂದ ಕಾರ್ಖಾನೆ ನಡುವೆ ಇರುವ ಕಿಲೋಮೀಟರ್  ಆಧಾರದ ದರ ಕಡಿತ ಮಾಡಬೇಕು, ಕಾನೂನು ಬಾಹಿರವಾಗಿ ಹೆಚ್ಚುವರಿ ಮಾಡಿದರೆ ಆಯಾ ಜಿಲ್ಲಾಧಿಕಾರಿಗಳು ಕಾರ್ಖಾನೆಗಳ ಮೇಲೆ ಚೀಟಿಂಗ್ ಕೇಸ್ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಕ್ಕರೆ ಉದ್ದಿಮೆ ಸಕ್ಕರೆ ಹಾಗು ಕಬ್ಬು ಬೇಸಾಯ ಸಂಪೂರ್ಣವಾಗಿ ಗಣಕೀಕರಣವಾಗಬೇಕು ಎಂಬುದು ರಾಜ್ಯ ಕಬ್ಬು ಬೆಳೆಗಾರ ಸಂಘ ಎಪ್ರಿಲ್ 26ರಂದು ಒತ್ತಾಯಿಸಲಾಗಿತ್ತು. ರೈತನ ಕಬ್ಬಿನ ನಾಟಿ ಒಪ್ಪಂದ, ಜೇಷ್ಠತೆ ಆಧಾರದ ಕಟಾವು ಅನುಮತಿ, ಕಬ್ಬಿನ ತೂಕ, ಕಬ್ಬಿನ ಹಣ ಪಾವತಿ, ಸಕ್ಕರೆ ಇಳುವರಿ, ಎಲ್ಲವೂ ಗಣಕೀಕರಣವಾಗಿ ರೈತರ ಮೊಬೈಲ್ ಆಪ್ ಮೂಲಕ ನೋಂದಾಯಿಸುವ ಅವಕಾಶ ನೀಡಬೇಕೆಂದು ಒತ್ತಾಯಿಸಲಾಗಿತ್ತು ಈಗ ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವುದು ಕಬ್ಬು ಬೆಳೆಗಾರರ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಜಿಲ್ಲಾಧ್ಯಕ್ಷರಾದ ಪಿ.ಸೋಮಶೇಖರ್, ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್ ಇತರರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

5 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

13 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

18 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago