Advertisement
MIRROR FOCUS

ಅಡಿಕೆ ಬೆಳೆ ವಿಸ್ತರಣೆ ಚರ್ಚೆ | ಭಾರತದಲ್ಲಿ ಅಡಿಕೆ ಗಿಡ ನಾಟಿ ನಿಷೇಧ ಹೇಳಿಕೆಗೆ ಮಿಜೋರಾಂನಲ್ಲಿ ವಿರೋಧ |

Share

ದೇಶದಲ್ಲಿ ಅಡಿಕೆ ಕೃಷಿ ವಿಸ್ತರಣೆಯಾಗುತ್ತಿದೆ. ಕರ್ನಾಟಕ, ಕೇರಳ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶದಲ್ಲೂ ಅಡಿಕೆ ಬೆಳೆ ವಿಸ್ತರಣೆಯಾಗಿ ಅಸ್ಸಾಂ, ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯದಲ್ಲೂ ಅಡಿಕೆ ಬೆಳೆ ಬೆಳೆಯಲಾಗುತ್ತಿದೆ.  ಈ ನಡುವೆ ಭಾರತದಲ್ಲಿ ಅಡಿಕೆ ಬೆಳೆಯನ್ನು ಬೆಳೆಯನ್ನು ನಿಷೇಧಿಸುವ ಕುರಿತು ಮಿಜೋರಾಂ ಮುಖ್ಯಮಂತ್ರಿ  ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ. ರಾಜ್ಯಸಭಾ ಸದಸ್ಯ ವನ್ಲಾಲ್ವೆನಾ ಅವರು ಈ ಬಗ್ಗೆ ವಿರೋಧಿಸಿದ್ದು, ಮುಖ್ಯಮಂತ್ರಿಗಳ ಹೇಳಿಕೆ ತಪ್ಪು ಮಾಹಿತಿ ಕಾರಣವಾಗಿದೆ ಎಂದಿದ್ದಾರೆ.…..ಮುಂದೆ ಓದಿ….

Advertisement
Advertisement

ದೇಶದಲ್ಲಿ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿರುವಂತೆಯೇ ಅಡಿಕೆ ಅಕ್ರಮ ಆಮದು ಕೂಡಾ ಹೆಚ್ಚಾಗಿದೆ. ಅದರ ಜೊತೆಗೆ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆ  ಮಿಶ್ರಣ ಮಾಡಿ  ಮಾರಾಟ ಮಾಡುವ ದಂಧೆಯೂ ನಡೆಯುತ್ತಿದೆ. ಅಕ್ರಮ ಅಡಿಕೆಯು ಮಿಜೋರಾಂ, ಅಸ್ಸಾಂ ಮೂಲಕವಾಗಿ ಭಾರತದ ಒಳಕ್ಕೆ ಬರುತ್ತಿದೆ. ಎರಡು ವರ್ಷಗಳಿಂದ ಅಕ್ರಮವಾಗಿ ಅಡಿಕೆ ಆಮದಾಗುತ್ತಿರುವುದನ್ನು ತಡೆಯಲು ಮಿಜೋರಾಂ ಸರ್ಕಾರ ಪ್ರಯತ್ನ ಮಾಡುತ್ತಿದೆ. ಹಾಗಿದ್ದರೂ ಅಡಿಕೆ ಆಮದು ನಡೆಯುತ್ತಿದೆ. ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಈ ನಡುವೆ ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಅವರು ಭಾರತದಲ್ಲಿ ಅಡಿಕೆ ಬೆಳೆಗಳನ್ನು  ನಿಷೇಧಿಸುವ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದರು. ಅದಲ್ಲದೆ ಅಡಿಕೆ ನೆಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ಎಂದೂ ಹೇಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.…..ಮುಂದೆ ಓದಿ….

Advertisement

ಮುಖ್ಯಮಂತ್ರಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದ ವನಲಾಲ್ವೇನ ಅವರು, ಕೇಂದ್ರ ಕೃಷಿ ಸಚಿವ ಶಿವರಾಜ್ ಕುಮಾರ್ ಚೌಹಾಣ್ ಅವರನ್ನು ತಕ್ಷಣವೇ ಭೇಟಿಯಾಗಿ ಈ ಬಗ್ಗೆ ಮಾಹಿತಿ ಪಡೆದು ಖಂಡಿಸಿದ್ದಾರೆ. ಈ ಸುದ್ದಿಯಿಂದ ರೈತರು ಕಂಗಾಲಾಗಿದ್ದಾರೆ ಮತ್ತು ಅಂತಹ ಯಾವುದೇ ಆದೇಶವನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.

ವನಲಾಲ್ವೆನಾ ಅವರ ಪ್ರಕಾರ, ಅಡಿಕೆ ಗಿಡ ನೆಡುವುದನ್ನು ನಿಷೇಧಿಸುವ ಯಾವುದೇ ನಿರ್ದೇಶನವನ್ನು ಕೇಂದ್ರ ಸರ್ಕಾರ ಹೊರಡಿಸಿಲ್ಲ. ಕೃಷಿ ಸಚಿವ ಚೌಹಾಣ್ ಅವರು ಸ್ಪಷ್ಟಪಡಿಸಿದ್ದಾರೆ. ಯಾವ ಇಲಾಖೆಗಳೂ ಈ ಬಗ್ಗೆ ದೃಢಪಡಿಸಿಲ್ಲ, ಧೈರ್ಯವಾಗಿ ಮಿಜೋರಾಂನಲ್ಲಿ ಅಡಿಕೆಯನ್ನು ಕೃಷಿಕರು ಬೆಳೆಯಬಹುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಬೇಕು ಮತ್ತು ರೈತರು ಅಡಿಕೆ ಬೆಳೆಯನ್ನು ನೆಡುವುದನ್ನು ನಿರ್ಬಂಧಿಸುವುದಿಲ್ಲ ಎಂದು ಸಾರ್ವಜನಿಕರಿಗೆ ಭರವಸೆ ನೀಡಬೇಕು ಎಂದು ವನಲಾಲ್ವೇನಾ ಒತ್ತಾಯಿಸಿದ್ದಾರೆ. (Source : EM News)

Advertisement

Arecanut cultivation is on the rise across the country, not only in Karnataka, Kerala, Tamil Nadu, and Andhra Pradesh, but also in the North Eastern states like Assam and Mizoram. The recent statement by the Chief Minister of Mizoram proposing a ban on Arecanut cultivation in India has sparked a debate. Rajya Sabha member Vanlalvena objected to this statement, stating that the Chief Minister’s remarks were based on misinformation.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್‌ ಕೃಷಿ | ಕೃಷಿಯಲ್ಲಿ ಮಾರ್ಪಾಡು – ಹೆಚ್ಚು ಇಳುವರಿ ಪಡೆಯುತ್ತಿರುವ ಕೃಷಿಕ |

ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ರಬ್ಬರ್‌ ಕೃಷಿ ಕಳೆದ ಕೆಲವು ವರ್ಷಗಳಿಂದ ಬೆಳೆದಿದೆ.…

2 hours ago

ಕ್ಯಾನ್ಸರ್ ನಿಯಂತ್ರಿಸುವಲ್ಲಿ ಹೆಚ್ಚಿನ ಸಂಶೋಧನೆ ಅಗತ್ಯ | ಬಸವರಾಜ ಬೊಮ್ಮಾಯಿ

ಭಾರತೀಯ ಸಂಶೋಧನಾ ಕೇಂದ್ರಗಳು ಕ್ಯಾನ್ಸರ್ ನಿಯಂತ್ರಿಸುವಲ್ಲಿ ಹೆಚ್ಚಿನ ಸಂಶೋಧನೆ ನಡೆಸಬೇಕು ಎಂದು ಮಾಜಿ…

4 hours ago

ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಬೇರು ಸಮೇತ ಕೀಳಬೇಕು | ಶ್ಯಾಂ ಭಟ್

ನಾಗರಿಕ ಸಮಾಜದಲ್ಲಿ ಸಮಾಜಿಕ ಬಹಿಷ್ಕಾರ ಎನ್ನುವ ಅನಿಷ್ಟ ಪದ್ದತಿ  ಬುಡ ಸಮೇತ ತೆಗೆದು…

4 hours ago

ಪ್ಯಾನ್-ಡಿ ಮತ್ತು ಪ್ಯಾರಸಿಟಮಾಲ್ ಸೇರಿದಂತೆ 59 ಔಷಧಿಗಳು ಗುಣಮಟ್ಟದಿಂದ ಕೂಡಿಲ್ಲ…! | ಸ್ಯಾಂಪಲ್‌ ಪರೀಕ್ಷೆ ವೇಳೆ ಬಹಿರಂಗ |

ಪ್ಯಾನ್-ಡಿ ಮತ್ತು ಪ್ಯಾರಸಿಟಮಾಲ್ ಸೇರಿದಂತೆ 59 ಔಷಧಿಗಳು ಗುಣಮಟ್ಟದಿಂದ ಕೂಡಿಲ್ಲ ಮತ್ತು ಅವುಗಳನ್ನು…

9 hours ago

ಡಿಜಿಟಲೀಕರಣದತ್ತ ಶಿಕ್ಷಣದ ಧುೃವೀಕರಣ

ಶಿಕ್ಷಣದ ಆಧುನೀಕರಣದ ಪ್ರಕ್ರಿಯೆಯು ಸಿದ್ಧ ಮಾಹಿತಿಗಳ ಯಾಂತ್ರಿಕ ಕಲಿಕೆಯತ್ತ ಮಕ್ಕಳನ್ನು ತಳ್ಳುತ್ತದೆ. ಬಾಯಿಪಾಠದ…

10 hours ago

ತೆಂಗಿನಕಾಯಿ ಧಾರಣೆ ಏರಿಕೆ | ರಾಜ್ಯದ ಹಲವು ಕಡೆ 50 ರೂಪಾಯಿ | ಹವಾಮಾನ ವೈಪರೀತ್ಯದ ಕಾರಣಗಳು…! |

ತೆಂಗಿನಕಾಯಿ ಧಾರಣೆ ಏರಿಕೆಯಾಗುತ್ತಿದೆ. ಹವಾಮಾನ ವೈಪರೀತ್ಯ ಕಾರಣದಿಂದ ಇಳುವರಿ ಕೊರತೆಯೇ ಈಗಿನ ಧಾರಣೆ…

10 hours ago