ದೇಶದಲ್ಲಿ ಸಂಪೂರ್ಣ ಹಸಿರು ಹೈಡ್ರೋಜನ್ ಪರಿಸರ ವ್ಯವಸ್ಥೆ ರೂಪಿಸಲು ಅಗತ್ಯವಾದ ಪರಿಣಿತಿ ಮತ್ತು ಸಂಪನ್ಮೂಲಗಳನ್ನು ಒಗ್ಗೂಡಿಸಲಾಗುತ್ತಿದ್ದು, ವಿಶ್ವದರ್ಜೆಯ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಷಿ ತಿಳಿಸಿದ್ದಾರೆ.
ಭಾರತದಲ್ಲಿ ಹಸಿರು ಹೈಡ್ರೋಜನ್ ಕುರಿತು ಸಂಶೋಧನೆ, ಅಭಿವೃದ್ಧಿಗಾಗಿ ಶ್ರೇಷ್ಠ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು, ಸಾರ್ವಜನಿಕ ಮತ್ತು ಖಾಸಗಿ ಘಟಕಗಳು ಪ್ರಸ್ತಾವನೆ ಸಲ್ಲಿಸಬಹುದಾಗಿದೆ. ಹಸಿರು ಹೈಡ್ರೋಜನ್ ಉತ್ಪಾದನೆ, ಸಂಗ್ರಹಣೆ ಮತ್ತು ಬಳಕೆಯ ತಂತ್ರಜ್ಞಾನದ ಅಭಿವೃದ್ಧಿಗಾಗಿ ಕೆಲಸ ಮಾಡುವ ಈ ಕೇಂದ್ರಗಳಿಗೆ ನೂರು ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದಾರೆ. ಹಸಿರು ಹೈಡ್ರೋಜನ್ ಮೂಲಕ ಕಡಿಮೆ ಕಾರ್ಬನ್ ಆರ್ಥಿಕತೆ ಪರಿವರ್ತನೆಗಾಗಿ ಅತ್ಯಾಧುನಿಕ ಸಂಶೋಧನೆ, ಕೌಶಲ್ಯಾಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನ್ನು 2023ರ ಜನವರಿ 4ರಂದು ಆರಂಭಿಸಲಾಗಿದ್ದು, 2029-30 ಆರ್ಥಿಕ ವರ್ಷದವರೆಗೂ 19744 ಕೋಟಿ ರೂಪಾಯಿಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…
ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್ಎಸ್ ಎಲ್ಸಿ , ಪಿಯುಸಿ ಆದ…
ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…
ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…