MIRROR FOCUS

ಹಸಿರು ಹೈಡ್ರೋಜನ್  ಪರಿಸರ ವ್ಯವಸ್ಥೆ ರೂಪಿಸಲು ಕ್ರಮ | ಜಾಗತಿಕ ಮಟ್ಟದ ಕೇಂದ್ರಗಳ ಸ್ಥಾಪನೆಗೆ  ಕ್ರಮ | 100 ಕೋಟಿ ರೂ.ಅನುದಾನ |

Share

ದೇಶದಲ್ಲಿ ಸಂಪೂರ್ಣ ಹಸಿರು ಹೈಡ್ರೋಜನ್  ಪರಿಸರ ವ್ಯವಸ್ಥೆ ರೂಪಿಸಲು  ಅಗತ್ಯವಾದ ಪರಿಣಿತಿ ಮತ್ತು ಸಂಪನ್ಮೂಲಗಳನ್ನು ಒಗ್ಗೂಡಿಸಲಾಗುತ್ತಿದ್ದು, ವಿಶ್ವದರ್ಜೆಯ ಕೇಂದ್ರಗಳನ್ನು ಸ್ಥಾಪಿಸಲು  ಕ್ರಮ ಕೈಗೊಳ್ಳಲಾಗಿದೆ ಎಂದು  ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್  ಜೋಷಿ ತಿಳಿಸಿದ್ದಾರೆ.

ಭಾರತದಲ್ಲಿ  ಹಸಿರು  ಹೈಡ್ರೋಜನ್  ಕುರಿತು  ಸಂಶೋಧನೆ, ಅಭಿವೃದ್ಧಿಗಾಗಿ ಶ್ರೇಷ್ಠ ಕೇಂದ್ರಗಳನ್ನು  ಸ್ಥಾಪಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು,  ಸಾರ್ವಜನಿಕ ಮತ್ತು ಖಾಸಗಿ ಘಟಕಗಳು  ಪ್ರಸ್ತಾವನೆ  ಸಲ್ಲಿಸಬಹುದಾಗಿದೆ.  ಹಸಿರು ಹೈಡ್ರೋಜನ್  ಉತ್ಪಾದನೆ, ಸಂಗ್ರಹಣೆ ಮತ್ತು ಬಳಕೆಯ ತಂತ್ರಜ್ಞಾನದ ಅಭಿವೃದ್ಧಿಗಾಗಿ ಕೆಲಸ ಮಾಡುವ  ಈ ಕೇಂದ್ರಗಳಿಗೆ ನೂರು ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದಾರೆ. ಹಸಿರು  ಹೈಡ್ರೋಜನ್  ಮೂಲಕ ಕಡಿಮೆ ಕಾರ್ಬನ್  ಆರ್ಥಿಕತೆ ಪರಿವರ್ತನೆಗಾಗಿ ಅತ್ಯಾಧುನಿಕ ಸಂಶೋಧನೆ,  ಕೌಶಲ್ಯಾಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಹಸಿರು ಹೈಡ್ರೋಜನ್  ಮಿಷನ್ ಅನ್ನು  2023ರ ಜನವರಿ 4ರಂದು  ಆರಂಭಿಸಲಾಗಿದ್ದು,  2029-30 ಆರ್ಥಿಕ ವರ್ಷದವರೆಗೂ 19744  ಕೋಟಿ ರೂಪಾಯಿಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

5 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

5 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

5 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

13 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

13 hours ago