ದೇಶದಲ್ಲಿ ಸಂಪೂರ್ಣ ಹಸಿರು ಹೈಡ್ರೋಜನ್ ಪರಿಸರ ವ್ಯವಸ್ಥೆ ರೂಪಿಸಲು ಅಗತ್ಯವಾದ ಪರಿಣಿತಿ ಮತ್ತು ಸಂಪನ್ಮೂಲಗಳನ್ನು ಒಗ್ಗೂಡಿಸಲಾಗುತ್ತಿದ್ದು, ವಿಶ್ವದರ್ಜೆಯ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಷಿ ತಿಳಿಸಿದ್ದಾರೆ.
ಭಾರತದಲ್ಲಿ ಹಸಿರು ಹೈಡ್ರೋಜನ್ ಕುರಿತು ಸಂಶೋಧನೆ, ಅಭಿವೃದ್ಧಿಗಾಗಿ ಶ್ರೇಷ್ಠ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು, ಸಾರ್ವಜನಿಕ ಮತ್ತು ಖಾಸಗಿ ಘಟಕಗಳು ಪ್ರಸ್ತಾವನೆ ಸಲ್ಲಿಸಬಹುದಾಗಿದೆ. ಹಸಿರು ಹೈಡ್ರೋಜನ್ ಉತ್ಪಾದನೆ, ಸಂಗ್ರಹಣೆ ಮತ್ತು ಬಳಕೆಯ ತಂತ್ರಜ್ಞಾನದ ಅಭಿವೃದ್ಧಿಗಾಗಿ ಕೆಲಸ ಮಾಡುವ ಈ ಕೇಂದ್ರಗಳಿಗೆ ನೂರು ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದಾರೆ. ಹಸಿರು ಹೈಡ್ರೋಜನ್ ಮೂಲಕ ಕಡಿಮೆ ಕಾರ್ಬನ್ ಆರ್ಥಿಕತೆ ಪರಿವರ್ತನೆಗಾಗಿ ಅತ್ಯಾಧುನಿಕ ಸಂಶೋಧನೆ, ಕೌಶಲ್ಯಾಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನ್ನು 2023ರ ಜನವರಿ 4ರಂದು ಆರಂಭಿಸಲಾಗಿದ್ದು, 2029-30 ಆರ್ಥಿಕ ವರ್ಷದವರೆಗೂ 19744 ಕೋಟಿ ರೂಪಾಯಿಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…