ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮವಹಿಸುವುದಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಾಸರಗೋಡು ತೆಂಗು ಬೆಳೆ ಉತ್ಪಾದನೆಯ ಸಂಶೋಧನಾ ವಿಭಾಗ ಹಾಗೂ ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ತೆಂಗಿನಲ್ಲಿ ಕಪ್ಪು ತಲೆ ಹುಳು, ಬಿಳಿ ನೊಣದ ನಿಯಂತ್ರಣ ಹಾಗೂ ತೆಂಗು ಬೆಳೆಯ ಅಭಿವೃದ್ಧಿ ಕುರಿತು ವಿಜ್ಞಾನಿಗಳ ತಂಡದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತೆಂಗಿಗೆ ರೋಗಬಾಧೆ ಎಲ್ಲಾ ಕಡೆಯು ಇದ್ದು, ಇದರ ಬಗ್ಗೆ ಅರಿವು ಮೂಡಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು. ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕವಾಗಿ ಶಕ್ತರಾಗಬೇಕು. ನೀರಾ ಉತ್ಪಾದನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಚನ್ನಪಟ್ಟಣದ ತಿಟ್ಟಮಾರನಹಳ್ಳಿಯಲ್ಲಿ ಪ್ಲಾಂಟೆಷನ್ ಮಾಡಲು ಕ್ರಮವಹಿಸಲಾಗಿದೆ. ಇದರಿಂದ ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…