ದೇಶದಲ್ಲಿ ರಸಗೊಬ್ಬರಗಳ ಬೆಲೆ ಇಳಿಕೆ ಕುರಿತಂತೆ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ, ಕೇಂದ್ರ ಸರ್ಕಾರ ರೈತರು ಬಳಸುವ ರಸಗೊಬ್ಬರಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆಗಳು ಜಾಗತಿಕ ಮಟ್ಟದಲ್ಲಿ ಏರುಪೇರು ಉಂಟಾದರೂ ಅವುಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಸರ್ಕಾರ 45 ಕೆ.ಜಿ. ಯೂರಿಯಾ ಬೆಲೆಯನ್ನು 242 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆಯನ್ನು 50 ಕೆ.ಜಿ. ಚೀಲಕ್ಕೆ 1 ಸಾವಿರದ 350 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆ ಚೀಲವೊಂದಕ್ಕೆ 2 ಸಾವಿರದ 433 ರೂಪಾಯಿ ಇದ್ದು, ಸರ್ಕಾರ 1 ಸಾವಿರದ 43 ರೂಪಾಯಿ ಸಬ್ಸಿಡಿ ಕಲ್ಪಿಸುವ ಮೂಲಕ ರೈತರಿಗೆ ಒದಗಿಸುತ್ತಿದೆ ಎಂದು ಉತ್ತರಿಸಿದರು.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…