MIRROR FOCUS

ಹಣ್ಣಡಿಕೆ ಒಣಗಿಸುವ ತಂತ್ರಜ್ಞಾನದತ್ತ ಮುಖ ಮಾಡಿದ ವಿಟ್ಲದ ಪಿಂಗಾರ ಸಂಸ್ಥೆ | ಅಡಿಕೆ ದಾಸ್ತಾನಿಗೆ ನೈಟ್ರೋಜನ್‌ ಗ್ಯಾಸ್ ತಂತ್ರಜ್ಞಾನ ಬಳಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಟ್ಲದ ಪಿಂಗಾರ ರೈತ ಉತ್ಪಾದಕ ಕಂಪನಿ ಮತ್ತೊಂದು ಪ್ರಯತ್ನಕ್ಕೆ ಇಳಿದಿದೆ. ಈಗಾಗಲೇ ದೋಟಿ ಕೊಯ್ಲು ಮೂಲಕ ರೈತರ ಸಮಸ್ಯೆಯನ್ನು ಬಹುಪಾಲು ಕಡಿಮೆ ಮಾಡಿದ ಪಿಂಗಾರ ಈಗ ಅಡಿಕೆ ದಾಸ್ತಾನಿಗೆ ನೈಟ್ರೋಜನ್‌ ಗ್ಯಾಸ್‌ ಹಾಗೂ ಹಣ್ಣಡಿಕೆ ಒಣಗಿಸಲು ಹ್ಯುಮಿಡಿಪೈಯರ್‌ ಯಂತ್ರವನ್ನು ಬಳಸಿಕೊಳ್ಳು ನಿರ್ಧರಿಸಿದೆ. ಎರಡನೇ ದಿನದಲ್ಲಿ  ಹಣ್ಣಡಿಕೆ ಒಣಗಿಸುವ ವ್ಯವಸ್ಥೆಗೆ ಪಿಂಗಾರ ಮುಂದಾಗಿದೆ.

Advertisement
Advertisement

ವಿಟ್ಲದ ಪಿಂಗಾರ ಸಂಸ್ಥೆಯು ಅಡಿಕೆ ಹಾಗೂ ತೆಂಗು ಕೊಯ್ಲು ಮಾಡಲು ತಂಡವನ್ನು ರಚನೆ ಮಾಡಿ ಯಶಸ್ವಿಯಾಗಿದೆ. ಅನೇಕ ಕೃಷಿಕರ ಸಮಸ್ಯೆಗೆ ಪರಿಹಾರವನ್ನು ಕಂಡಿಕೊಂಡ ಸಂಸ್ಥೆ ಇದೀಗ ಅಡಿಕೆ ದಾಸ್ತಾನು ಮಾಡಲು ನೈಟ್ರೋಜನ್‌ ಗ್ಯಾಸ್‌ ಬಳಕೆ ಮಾಡುವುದು  ಹಾಗೂ ಹಣ್ಣಡಿಕೆ ಒಣಗಿಸಲು ಡ್ರೈಯರ್‌ ಬಳಕೆ ಮಾಡಲು ಮುಂದಾಗಿದೆ. ಆದರೆ ಸದ್ಯ ಹಣ್ಣಡಿಕೆಯನ್ನು ರೈತರಿಂದ ಖರೀದಿ ಮಾಡಿ ಒಣಗಿಸಿ ಬಳಿಕ ಮಾರಾಟ ಮಾಡುವ ಯೋಜನೆ ಇದೆ. ಅಡಿಕೆ ಒಣಗಿಸಿ ಕೊಡುವ ಬಗ್ಗೆ ಸದ್ಯ ಯಾವುದೇ ಯೋಜನೆಯನ್ನು ಹಾಕಿಕೊಂಡಿಲ್ಲ.

ಪಿಂಗಾರ ಸಂಸ್ಥೆಯು ಹಣ್ಣಡಿಕೆ ಖರೀದಿ ಮಾಡಿ ಅದನ್ನು  ಹ್ಯುಮುಡಿಪೈಯರ್‌ ಯಂತ್ರದ ಮೂಲಕ ಒಣಗಿಸುವ ಯೋಜನೆ ಇದಾಗಿದೆ. ಅಂದರೆ ಪ್ರಿಜ್‌ ಬಳಕೆಯ ಸರಿಯಾದ ಉಲ್ಟಾ ಪ್ರಕ್ರಿಯೆ ಇದೆ. ಬಿಸಿ ಗಾಳಿ ಒಳಗೆ ತೆಗೆದುಕೊಂಡು ತಣ್ಣಗಿನ ಗಾಳಿ ಅಂದರೆ ತೇವಾಂಶವನ್ನು ಹೊರಹಾಕುತ್ತದೆ. ಯಂತ್ರ ಆವಿಷ್ಕಾರ ಮಾಡಿದವರು ಕೃಷಿ ಕುಟುಂಬದವರೇ ಆದ್ದರಿಂದ ಅಡಿಕೆ ಒಣಗಿಸುವ ಸಮಸ್ಯೆಯನ್ನು ಬಲ್ಲವರಾಗಿದ್ದರೆ. ಈ ತಂತ್ರಜ್ಞಾನದ ಮೂಲಕ ಯಂತ್ರದ ಒಳಗೆ 70 ಡಿಗ್ರಿ ಉಷ್ಣತೆ ಇರುತ್ತದೆ. ಹೀಗಾಗಿ ಹಣ್ಣಡಿಕೆ ಎರಡೇ ದಿನದಲ್ಲಿ  ಒಣಗಲು ಸಾಧ್ಯ ಇದೆ. ಅಡಿಕೆ ಮಾತ್ರವಲ್ಲ ಕಾಳುಮೆಣಸು, ಕೊಬ್ಬರಿ ಸಹಿತ ಎಲ್ಲಾ ಕೃಷಿ ವಸ್ತುಗಳೂ ಬೇಗನೆ ಒಣಗುತ್ತದೆ.

ಸದ್ಯ ಹಣ್ಣಡಿಕೆ ಖರೀದಿಯ ಬಗ್ಗೆ ಮಾತ್ರಾ ಯೋಜನೆ ರೂಪಿಸಿದ್ದು, ಅಡಿಕೆ ಒಣಗಿಸಿ ಮತ್ತೆ ರೈತರಿಗೆ ನೀಡುವ ಯೋಜನೆ ಮಾಡಿಲ್ಲ ಎಂದು ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ ಹೇಳುತ್ತಾರೆ.

Advertisement

ಅಡಿಕೆ ದಾಸ್ತಾನು ಮಾಡಲು ಈಗಾಗಲೇ ಸಂಸ್ಥೆಯು ಕಟ್ಟಡಗಳನ್ನು ಸಿದ್ಧ ಮಾಡಲು ಯೋಜನೆ ಹಾಕಿಕೊಂಡಿದೆ. ನೈಟ್ರೋಜನ್‌ ಗ್ಯಾಸ್‌ ಬಳಸಿ ಅಡಿಕೆ ದಾಸ್ತಾನು ಮಾಡುವುದು ಈಗಾಗಲೇ ಯಶಸ್ವಿಯಾಗಿದೆ. ರೈತರ ಅಡಿಕೆಯನ್ನು ದಾಸ್ತಾನು ಮಾಡಿ ಮತ್ತೆ ಹಿಂದಿರುಗಿಸಿ ರೈತರಿಗೆ ನೀಡುವ ಅಥವಾ ಮಾರಾಟ ಮಾಡುವ ಯೋಜನೆಯೂ ಇದೆ ಎಂದು ರಾಮ ಕಿಶೋರ್‌ ಮಂಚಿ ಹೇಳುತ್ತಾರೆ.

ಮಳೆಗಾಲದಲ್ಲಿ ಹಣ್ಣಡಿಕೆ ಒಣಗಿಸಲು ಸಮಸ್ಯೆ ಅಡಿಕೆ ಬೆಳೆಗಾರರಿಗೆ ಇದೆ. ಇದಕ್ಕಾಗಿ ಹಣ್ಣಡಿಕೆಯನ್ನು ಉತ್ತಮ ಧಾರಣೆಗೆ ಪಿಂಗಾರ ಸಂಸ್ಥೆಗೆ ಮಾರಾಟ ಮಾಡುವ ಅವಕಾಶ ಇನ್ನು ಮುಂದೆ ಬೆಳೆಗಾರರಿಗೆ ಸಿಗಲಿದೆ. ಇದರ ಜೊತೆಗೆ ಅಡಿಕೆ ದಾಸ್ತಾನು ಮಾಡುವುದು ಕೂಡಾ ಅಡಿಕೆ ಬೆಳೆಗಾರರಿಗೆ ಬಹುದೊಡ್ಡ ಸಮಸ್ಯೆ ಇದಕ್ಕೂ ಕೂಡಾ ಪಿಂಗಾರ ಸಂಸ್ಥೆ  ಈಗ ಅವಕಾಶ ನೀಡುತ್ತಿದೆ.

Viitla Pingara Former Producer Company has decided to use nitrogen gas for Arecanut stock and humidifier machine for drying the Areca fruit. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

9 minutes ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

2 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

7 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

8 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

13 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

15 hours ago