Advertisement
MIRROR FOCUS

ಹಣ್ಣಡಿಕೆ ಒಣಗಿಸುವ ತಂತ್ರಜ್ಞಾನದತ್ತ ಮುಖ ಮಾಡಿದ ವಿಟ್ಲದ ಪಿಂಗಾರ ಸಂಸ್ಥೆ | ಅಡಿಕೆ ದಾಸ್ತಾನಿಗೆ ನೈಟ್ರೋಜನ್‌ ಗ್ಯಾಸ್ ತಂತ್ರಜ್ಞಾನ ಬಳಕೆ |

Share

ವಿಟ್ಲದ ಪಿಂಗಾರ ರೈತ ಉತ್ಪಾದಕ ಕಂಪನಿ ಮತ್ತೊಂದು ಪ್ರಯತ್ನಕ್ಕೆ ಇಳಿದಿದೆ. ಈಗಾಗಲೇ ದೋಟಿ ಕೊಯ್ಲು ಮೂಲಕ ರೈತರ ಸಮಸ್ಯೆಯನ್ನು ಬಹುಪಾಲು ಕಡಿಮೆ ಮಾಡಿದ ಪಿಂಗಾರ ಈಗ ಅಡಿಕೆ ದಾಸ್ತಾನಿಗೆ ನೈಟ್ರೋಜನ್‌ ಗ್ಯಾಸ್‌ ಹಾಗೂ ಹಣ್ಣಡಿಕೆ ಒಣಗಿಸಲು ಹ್ಯುಮಿಡಿಪೈಯರ್‌ ಯಂತ್ರವನ್ನು ಬಳಸಿಕೊಳ್ಳು ನಿರ್ಧರಿಸಿದೆ. ಎರಡನೇ ದಿನದಲ್ಲಿ  ಹಣ್ಣಡಿಕೆ ಒಣಗಿಸುವ ವ್ಯವಸ್ಥೆಗೆ ಪಿಂಗಾರ ಮುಂದಾಗಿದೆ.

ವಿಟ್ಲದ ಪಿಂಗಾರ ಸಂಸ್ಥೆಯು ಅಡಿಕೆ ಹಾಗೂ ತೆಂಗು ಕೊಯ್ಲು ಮಾಡಲು ತಂಡವನ್ನು ರಚನೆ ಮಾಡಿ ಯಶಸ್ವಿಯಾಗಿದೆ. ಅನೇಕ ಕೃಷಿಕರ ಸಮಸ್ಯೆಗೆ ಪರಿಹಾರವನ್ನು ಕಂಡಿಕೊಂಡ ಸಂಸ್ಥೆ ಇದೀಗ ಅಡಿಕೆ ದಾಸ್ತಾನು ಮಾಡಲು ನೈಟ್ರೋಜನ್‌ ಗ್ಯಾಸ್‌ ಬಳಕೆ ಮಾಡುವುದು  ಹಾಗೂ ಹಣ್ಣಡಿಕೆ ಒಣಗಿಸಲು ಡ್ರೈಯರ್‌ ಬಳಕೆ ಮಾಡಲು ಮುಂದಾಗಿದೆ. ಆದರೆ ಸದ್ಯ ಹಣ್ಣಡಿಕೆಯನ್ನು ರೈತರಿಂದ ಖರೀದಿ ಮಾಡಿ ಒಣಗಿಸಿ ಬಳಿಕ ಮಾರಾಟ ಮಾಡುವ ಯೋಜನೆ ಇದೆ. ಅಡಿಕೆ ಒಣಗಿಸಿ ಕೊಡುವ ಬಗ್ಗೆ ಸದ್ಯ ಯಾವುದೇ ಯೋಜನೆಯನ್ನು ಹಾಕಿಕೊಂಡಿಲ್ಲ.

ಪಿಂಗಾರ ಸಂಸ್ಥೆಯು ಹಣ್ಣಡಿಕೆ ಖರೀದಿ ಮಾಡಿ ಅದನ್ನು  ಹ್ಯುಮುಡಿಪೈಯರ್‌ ಯಂತ್ರದ ಮೂಲಕ ಒಣಗಿಸುವ ಯೋಜನೆ ಇದಾಗಿದೆ. ಅಂದರೆ ಪ್ರಿಜ್‌ ಬಳಕೆಯ ಸರಿಯಾದ ಉಲ್ಟಾ ಪ್ರಕ್ರಿಯೆ ಇದೆ. ಬಿಸಿ ಗಾಳಿ ಒಳಗೆ ತೆಗೆದುಕೊಂಡು ತಣ್ಣಗಿನ ಗಾಳಿ ಅಂದರೆ ತೇವಾಂಶವನ್ನು ಹೊರಹಾಕುತ್ತದೆ. ಯಂತ್ರ ಆವಿಷ್ಕಾರ ಮಾಡಿದವರು ಕೃಷಿ ಕುಟುಂಬದವರೇ ಆದ್ದರಿಂದ ಅಡಿಕೆ ಒಣಗಿಸುವ ಸಮಸ್ಯೆಯನ್ನು ಬಲ್ಲವರಾಗಿದ್ದರೆ. ಈ ತಂತ್ರಜ್ಞಾನದ ಮೂಲಕ ಯಂತ್ರದ ಒಳಗೆ 70 ಡಿಗ್ರಿ ಉಷ್ಣತೆ ಇರುತ್ತದೆ. ಹೀಗಾಗಿ ಹಣ್ಣಡಿಕೆ ಎರಡೇ ದಿನದಲ್ಲಿ  ಒಣಗಲು ಸಾಧ್ಯ ಇದೆ. ಅಡಿಕೆ ಮಾತ್ರವಲ್ಲ ಕಾಳುಮೆಣಸು, ಕೊಬ್ಬರಿ ಸಹಿತ ಎಲ್ಲಾ ಕೃಷಿ ವಸ್ತುಗಳೂ ಬೇಗನೆ ಒಣಗುತ್ತದೆ.

ಸದ್ಯ ಹಣ್ಣಡಿಕೆ ಖರೀದಿಯ ಬಗ್ಗೆ ಮಾತ್ರಾ ಯೋಜನೆ ರೂಪಿಸಿದ್ದು, ಅಡಿಕೆ ಒಣಗಿಸಿ ಮತ್ತೆ ರೈತರಿಗೆ ನೀಡುವ ಯೋಜನೆ ಮಾಡಿಲ್ಲ ಎಂದು ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ ಹೇಳುತ್ತಾರೆ.

ಅಡಿಕೆ ದಾಸ್ತಾನು ಮಾಡಲು ಈಗಾಗಲೇ ಸಂಸ್ಥೆಯು ಕಟ್ಟಡಗಳನ್ನು ಸಿದ್ಧ ಮಾಡಲು ಯೋಜನೆ ಹಾಕಿಕೊಂಡಿದೆ. ನೈಟ್ರೋಜನ್‌ ಗ್ಯಾಸ್‌ ಬಳಸಿ ಅಡಿಕೆ ದಾಸ್ತಾನು ಮಾಡುವುದು ಈಗಾಗಲೇ ಯಶಸ್ವಿಯಾಗಿದೆ. ರೈತರ ಅಡಿಕೆಯನ್ನು ದಾಸ್ತಾನು ಮಾಡಿ ಮತ್ತೆ ಹಿಂದಿರುಗಿಸಿ ರೈತರಿಗೆ ನೀಡುವ ಅಥವಾ ಮಾರಾಟ ಮಾಡುವ ಯೋಜನೆಯೂ ಇದೆ ಎಂದು ರಾಮ ಕಿಶೋರ್‌ ಮಂಚಿ ಹೇಳುತ್ತಾರೆ.

ಮಳೆಗಾಲದಲ್ಲಿ ಹಣ್ಣಡಿಕೆ ಒಣಗಿಸಲು ಸಮಸ್ಯೆ ಅಡಿಕೆ ಬೆಳೆಗಾರರಿಗೆ ಇದೆ. ಇದಕ್ಕಾಗಿ ಹಣ್ಣಡಿಕೆಯನ್ನು ಉತ್ತಮ ಧಾರಣೆಗೆ ಪಿಂಗಾರ ಸಂಸ್ಥೆಗೆ ಮಾರಾಟ ಮಾಡುವ ಅವಕಾಶ ಇನ್ನು ಮುಂದೆ ಬೆಳೆಗಾರರಿಗೆ ಸಿಗಲಿದೆ. ಇದರ ಜೊತೆಗೆ ಅಡಿಕೆ ದಾಸ್ತಾನು ಮಾಡುವುದು ಕೂಡಾ ಅಡಿಕೆ ಬೆಳೆಗಾರರಿಗೆ ಬಹುದೊಡ್ಡ ಸಮಸ್ಯೆ ಇದಕ್ಕೂ ಕೂಡಾ ಪಿಂಗಾರ ಸಂಸ್ಥೆ  ಈಗ ಅವಕಾಶ ನೀಡುತ್ತಿದೆ.

Viitla Pingara Former Producer Company has decided to use nitrogen gas for Arecanut stock and humidifier machine for drying the Areca fruit. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

7 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

18 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

19 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

22 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago