ಅಡಿಕೆ ಆಮದು ಪ್ರಕ್ರಿಯೆ ತಕ್ಷಣವೇ ನಿಲ್ಲಿಸಬೇಕು | ಕಾವು ಹೇಮನಾಥ ಶೆಟ್ಟಿ ಆಗ್ರಹ

October 18, 2022
8:56 PM

ಭೂತಾನ್‌ ನಿಂದ 17 ಸಾವಿರ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವು ಕರಾವಳಿಯ ಅಡಿಕೆ ಬೆಳೆಗಾರರ ಹಿತಕ್ಕೆ ವಿರುದ್ಧವಾಗಿದೆ. ತಕ್ಷಣವೇ ಅಡಿಕೆ ಆಮದು ರದ್ದು ಮಾಡಬೇಕು ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಒತ್ತಾಯಿಸಿದ್ದಾರೆ.

ಪುತ್ತೂರಿನಲ್ಲಿ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಅಡಿಕೆ ಬೆಲೆ 500 ರೂಪಾಯಿ ಗಡಿ ದಾಟಿದರೂ, ಉತ್ಪಾದನಾ ವೆಚ್ಚ ಇದಕ್ಕಿಂತಲೂ ಹೆಚ್ಚಾಗಿದೆ. ಗೊಬ್ಬರ ಸೇರಿ ಎಲ್ಲಾ ಸಾಮಾಗ್ರಿಗಳ ಬೆಲೆಯೂ ಹೆಚ್ಚಾಗಿದ್ದು, ಅಡಿಕೆಗೆ ಇನ್ನಷ್ಟು ಬೆಲೆ ಏರಿಸುವ ಅಗತ್ಯವಿದೆ ಎಂದರು.ಉತ್ಪಾದನಾ ವೆಚ್ಚದಿಂದ ಕಂಗೆಟ್ಟ ಈ ಸಮಯದಲ್ಲಿ ಕೇಂದ್ರ ಸರ್ಕಾರ ಭೂತಾನ್ ಸೇರಿದಂತೆ ವಿದೇಶಗಳಿಂದ ಅಡಿಕೆಯನ್ನು ಆಮದು ಮಾಡಲು ಮುಂದಾಗಿದೆ. ಇದರಿಂದಾಗಿ ಕರಾವಳಿಯಲ್ಲಿ ಬೆಳೆಯುವ ಅಡಿಕೆಯ ಬೆಲೆಯಲ್ಲಿ ಏರಿಳಿತವಾಗಲಿದೆ.

ಗೃಹ ಸಚಿವ ಅಮಿತ್ ಶಾ ಮಗ ಜಯ ಶಾ ಆಡಳಿತದ ಕಂಪನಿ ಈ ರೀತಿಯ ಆಮದು ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದು, ಇದನ್ನು ಪ್ರಶ್ನೆ ಮಾಡುವ ತಾಕತ್ತು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಶೋಭಾ ಕರಂದ್ಲಾಜೆಯವರಿಗಿಲ್ಲ ಎಂದರು. ಕೇಂದ್ರ ಸರ್ಕಾರ ಕೂಡಲೇ ಈ ಆಮದು ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror