ಅಡಿಕೆ ಆಮದು ಪ್ರಕ್ರಿಯೆ ತಕ್ಷಣವೇ ನಿಲ್ಲಿಸಬೇಕು | ಕಾವು ಹೇಮನಾಥ ಶೆಟ್ಟಿ ಆಗ್ರಹ

October 18, 2022
8:56 PM

ಭೂತಾನ್‌ ನಿಂದ 17 ಸಾವಿರ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವು ಕರಾವಳಿಯ ಅಡಿಕೆ ಬೆಳೆಗಾರರ ಹಿತಕ್ಕೆ ವಿರುದ್ಧವಾಗಿದೆ. ತಕ್ಷಣವೇ ಅಡಿಕೆ ಆಮದು ರದ್ದು ಮಾಡಬೇಕು ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಒತ್ತಾಯಿಸಿದ್ದಾರೆ.

Advertisement
Advertisement
Advertisement

ಪುತ್ತೂರಿನಲ್ಲಿ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಅಡಿಕೆ ಬೆಲೆ 500 ರೂಪಾಯಿ ಗಡಿ ದಾಟಿದರೂ, ಉತ್ಪಾದನಾ ವೆಚ್ಚ ಇದಕ್ಕಿಂತಲೂ ಹೆಚ್ಚಾಗಿದೆ. ಗೊಬ್ಬರ ಸೇರಿ ಎಲ್ಲಾ ಸಾಮಾಗ್ರಿಗಳ ಬೆಲೆಯೂ ಹೆಚ್ಚಾಗಿದ್ದು, ಅಡಿಕೆಗೆ ಇನ್ನಷ್ಟು ಬೆಲೆ ಏರಿಸುವ ಅಗತ್ಯವಿದೆ ಎಂದರು.ಉತ್ಪಾದನಾ ವೆಚ್ಚದಿಂದ ಕಂಗೆಟ್ಟ ಈ ಸಮಯದಲ್ಲಿ ಕೇಂದ್ರ ಸರ್ಕಾರ ಭೂತಾನ್ ಸೇರಿದಂತೆ ವಿದೇಶಗಳಿಂದ ಅಡಿಕೆಯನ್ನು ಆಮದು ಮಾಡಲು ಮುಂದಾಗಿದೆ. ಇದರಿಂದಾಗಿ ಕರಾವಳಿಯಲ್ಲಿ ಬೆಳೆಯುವ ಅಡಿಕೆಯ ಬೆಲೆಯಲ್ಲಿ ಏರಿಳಿತವಾಗಲಿದೆ.

Advertisement

ಗೃಹ ಸಚಿವ ಅಮಿತ್ ಶಾ ಮಗ ಜಯ ಶಾ ಆಡಳಿತದ ಕಂಪನಿ ಈ ರೀತಿಯ ಆಮದು ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದು, ಇದನ್ನು ಪ್ರಶ್ನೆ ಮಾಡುವ ತಾಕತ್ತು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಶೋಭಾ ಕರಂದ್ಲಾಜೆಯವರಿಗಿಲ್ಲ ಎಂದರು. ಕೇಂದ್ರ ಸರ್ಕಾರ ಕೂಡಲೇ ಈ ಆಮದು ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಆದರ್ಶ ಜೀವನ ಮತ್ತು ಪರಿಸರ ಸ್ನೇಹಿ ನೀತಿ ತಿಳಿಸುವ ಮಂಗಟ್ಟೆ ಹಕ್ಕಿಗಳು…
April 18, 2024
4:46 PM
by: The Rural Mirror ಸುದ್ದಿಜಾಲ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror