ಅಡಿಕೆ ಆಮದು ಪ್ರಕ್ರಿಯೆ ತಕ್ಷಣವೇ ನಿಲ್ಲಿಸಬೇಕು | ಕಾವು ಹೇಮನಾಥ ಶೆಟ್ಟಿ ಆಗ್ರಹ

October 18, 2022
8:56 PM

ಭೂತಾನ್‌ ನಿಂದ 17 ಸಾವಿರ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವು ಕರಾವಳಿಯ ಅಡಿಕೆ ಬೆಳೆಗಾರರ ಹಿತಕ್ಕೆ ವಿರುದ್ಧವಾಗಿದೆ. ತಕ್ಷಣವೇ ಅಡಿಕೆ ಆಮದು ರದ್ದು ಮಾಡಬೇಕು ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಒತ್ತಾಯಿಸಿದ್ದಾರೆ.

ಪುತ್ತೂರಿನಲ್ಲಿ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಅಡಿಕೆ ಬೆಲೆ 500 ರೂಪಾಯಿ ಗಡಿ ದಾಟಿದರೂ, ಉತ್ಪಾದನಾ ವೆಚ್ಚ ಇದಕ್ಕಿಂತಲೂ ಹೆಚ್ಚಾಗಿದೆ. ಗೊಬ್ಬರ ಸೇರಿ ಎಲ್ಲಾ ಸಾಮಾಗ್ರಿಗಳ ಬೆಲೆಯೂ ಹೆಚ್ಚಾಗಿದ್ದು, ಅಡಿಕೆಗೆ ಇನ್ನಷ್ಟು ಬೆಲೆ ಏರಿಸುವ ಅಗತ್ಯವಿದೆ ಎಂದರು.ಉತ್ಪಾದನಾ ವೆಚ್ಚದಿಂದ ಕಂಗೆಟ್ಟ ಈ ಸಮಯದಲ್ಲಿ ಕೇಂದ್ರ ಸರ್ಕಾರ ಭೂತಾನ್ ಸೇರಿದಂತೆ ವಿದೇಶಗಳಿಂದ ಅಡಿಕೆಯನ್ನು ಆಮದು ಮಾಡಲು ಮುಂದಾಗಿದೆ. ಇದರಿಂದಾಗಿ ಕರಾವಳಿಯಲ್ಲಿ ಬೆಳೆಯುವ ಅಡಿಕೆಯ ಬೆಲೆಯಲ್ಲಿ ಏರಿಳಿತವಾಗಲಿದೆ.

ಗೃಹ ಸಚಿವ ಅಮಿತ್ ಶಾ ಮಗ ಜಯ ಶಾ ಆಡಳಿತದ ಕಂಪನಿ ಈ ರೀತಿಯ ಆಮದು ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದು, ಇದನ್ನು ಪ್ರಶ್ನೆ ಮಾಡುವ ತಾಕತ್ತು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಶೋಭಾ ಕರಂದ್ಲಾಜೆಯವರಿಗಿಲ್ಲ ಎಂದರು. ಕೇಂದ್ರ ಸರ್ಕಾರ ಕೂಡಲೇ ಈ ಆಮದು ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror