Advertisement
ಸುದ್ದಿಗಳು

ಅಡಿಕೆ ಆಮದು ಪ್ರಕ್ರಿಯೆ ತಕ್ಷಣವೇ ನಿಲ್ಲಿಸಬೇಕು | ಕಾವು ಹೇಮನಾಥ ಶೆಟ್ಟಿ ಆಗ್ರಹ

Share

ಭೂತಾನ್‌ ನಿಂದ 17 ಸಾವಿರ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವು ಕರಾವಳಿಯ ಅಡಿಕೆ ಬೆಳೆಗಾರರ ಹಿತಕ್ಕೆ ವಿರುದ್ಧವಾಗಿದೆ. ತಕ್ಷಣವೇ ಅಡಿಕೆ ಆಮದು ರದ್ದು ಮಾಡಬೇಕು ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಒತ್ತಾಯಿಸಿದ್ದಾರೆ.

Advertisement

ಪುತ್ತೂರಿನಲ್ಲಿ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಅಡಿಕೆ ಬೆಲೆ 500 ರೂಪಾಯಿ ಗಡಿ ದಾಟಿದರೂ, ಉತ್ಪಾದನಾ ವೆಚ್ಚ ಇದಕ್ಕಿಂತಲೂ ಹೆಚ್ಚಾಗಿದೆ. ಗೊಬ್ಬರ ಸೇರಿ ಎಲ್ಲಾ ಸಾಮಾಗ್ರಿಗಳ ಬೆಲೆಯೂ ಹೆಚ್ಚಾಗಿದ್ದು, ಅಡಿಕೆಗೆ ಇನ್ನಷ್ಟು ಬೆಲೆ ಏರಿಸುವ ಅಗತ್ಯವಿದೆ ಎಂದರು.ಉತ್ಪಾದನಾ ವೆಚ್ಚದಿಂದ ಕಂಗೆಟ್ಟ ಈ ಸಮಯದಲ್ಲಿ ಕೇಂದ್ರ ಸರ್ಕಾರ ಭೂತಾನ್ ಸೇರಿದಂತೆ ವಿದೇಶಗಳಿಂದ ಅಡಿಕೆಯನ್ನು ಆಮದು ಮಾಡಲು ಮುಂದಾಗಿದೆ. ಇದರಿಂದಾಗಿ ಕರಾವಳಿಯಲ್ಲಿ ಬೆಳೆಯುವ ಅಡಿಕೆಯ ಬೆಲೆಯಲ್ಲಿ ಏರಿಳಿತವಾಗಲಿದೆ.

ಗೃಹ ಸಚಿವ ಅಮಿತ್ ಶಾ ಮಗ ಜಯ ಶಾ ಆಡಳಿತದ ಕಂಪನಿ ಈ ರೀತಿಯ ಆಮದು ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದು, ಇದನ್ನು ಪ್ರಶ್ನೆ ಮಾಡುವ ತಾಕತ್ತು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಶೋಭಾ ಕರಂದ್ಲಾಜೆಯವರಿಗಿಲ್ಲ ಎಂದರು. ಕೇಂದ್ರ ಸರ್ಕಾರ ಕೂಡಲೇ ಈ ಆಮದು ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

4 hours ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

4 hours ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

4 hours ago

ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ

ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…

4 hours ago

ಕೃಷಿಯಲ್ಲಿ ಮುಂದಿನ ಕ್ರಾಂತಿ AI ಮೂಲಕ | ರೈತರಿಗೆ ₹70,000 ಕೋಟಿ ಹೆಚ್ಚುವರಿ ಆದಾಯ ಸಾಧ್ಯ – ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ  (Artificial Intelligence) AI)ಮೂಲಕ…

4 hours ago

ಕೃಷಿ ಮಣ್ಣು ಸಾಗಾಟಕ್ಕೆ ತೊಂದರೆ ಕೊಡಬೇಡಿ ; ಅಧಿಕಾರಿಗಳಿಗೆ ಸಂಸದ ಕೋಟ ಸೂಚನೆ

ಕೃಷಿ ಉದ್ದೇಶಕ್ಕಾಗಿ ಮಣ್ಣು ಸಾಗಾಟ ಮಾಡುವ ರೈತರಿಗೆ ತೊಂದರೆ ಕೊಡಬಾರದು ಎಂದು ಉಡುಪಿ…

5 hours ago