ಭೂತಾನ್ ನಿಂದ 17 ಸಾವಿರ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವು ಕರಾವಳಿಯ ಅಡಿಕೆ ಬೆಳೆಗಾರರ ಹಿತಕ್ಕೆ ವಿರುದ್ಧವಾಗಿದೆ. ತಕ್ಷಣವೇ ಅಡಿಕೆ ಆಮದು ರದ್ದು ಮಾಡಬೇಕು ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಒತ್ತಾಯಿಸಿದ್ದಾರೆ.
ಪುತ್ತೂರಿನಲ್ಲಿ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಅಡಿಕೆ ಬೆಲೆ 500 ರೂಪಾಯಿ ಗಡಿ ದಾಟಿದರೂ, ಉತ್ಪಾದನಾ ವೆಚ್ಚ ಇದಕ್ಕಿಂತಲೂ ಹೆಚ್ಚಾಗಿದೆ. ಗೊಬ್ಬರ ಸೇರಿ ಎಲ್ಲಾ ಸಾಮಾಗ್ರಿಗಳ ಬೆಲೆಯೂ ಹೆಚ್ಚಾಗಿದ್ದು, ಅಡಿಕೆಗೆ ಇನ್ನಷ್ಟು ಬೆಲೆ ಏರಿಸುವ ಅಗತ್ಯವಿದೆ ಎಂದರು.ಉತ್ಪಾದನಾ ವೆಚ್ಚದಿಂದ ಕಂಗೆಟ್ಟ ಈ ಸಮಯದಲ್ಲಿ ಕೇಂದ್ರ ಸರ್ಕಾರ ಭೂತಾನ್ ಸೇರಿದಂತೆ ವಿದೇಶಗಳಿಂದ ಅಡಿಕೆಯನ್ನು ಆಮದು ಮಾಡಲು ಮುಂದಾಗಿದೆ. ಇದರಿಂದಾಗಿ ಕರಾವಳಿಯಲ್ಲಿ ಬೆಳೆಯುವ ಅಡಿಕೆಯ ಬೆಲೆಯಲ್ಲಿ ಏರಿಳಿತವಾಗಲಿದೆ.
ಗೃಹ ಸಚಿವ ಅಮಿತ್ ಶಾ ಮಗ ಜಯ ಶಾ ಆಡಳಿತದ ಕಂಪನಿ ಈ ರೀತಿಯ ಆಮದು ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದು, ಇದನ್ನು ಪ್ರಶ್ನೆ ಮಾಡುವ ತಾಕತ್ತು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಶೋಭಾ ಕರಂದ್ಲಾಜೆಯವರಿಗಿಲ್ಲ ಎಂದರು. ಕೇಂದ್ರ ಸರ್ಕಾರ ಕೂಡಲೇ ಈ ಆಮದು ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…